<p><strong>ಮಂಗಳೂರು</strong>: ನಗರದ ಕಾಸ್ಮೊಪೊಲಿಟನ್ ಕ್ಲಬ್ ಆಯೋಜಿಸಿರುವ ರಾಜ್ಯಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಚಾಂಪಿಯನ್ಷಿಪ್ ಬಾವುಟಗುಡ್ಡದಲ್ಲಿರುವ ಕ್ಲಬ್ನ ಕ್ರೀಡಾಂಗಣದಲ್ಲಿ ಫೆ.20ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.</p><p>ಬಿ.ಭಾಸ್ಕರ್, ಎಂ.ಯೋಗೀಶ್, ಬಿ.ಸಿ ಕಾರ್ತಿಕ್, ಕೀರ್ತಿ ಪಾಂಡ್ಯ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ 14 ಆಟಗಾರರು ಪಾಲ್ಗೊಳ್ಳಲಿದ್ದಾರೆ. 20ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಚಾಂಪಿಯನ್ಷಿಪ್ ಉದ್ಘಾಟಿಸುವರು ಎಂದು ಕ್ಲಬ್ ಉಪಾಧ್ಯಕ್ಷ ರಾಜಗೋಪಾಲ ರೈ ಗುರುವಾರ<br>ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>1901ರಲ್ಲಿ ಸ್ಥಾಪನೆಯಾಗಿರುವ ಕಾಸ್ಮೊಪಾಲಿಟನ್ ಕ್ಲಬ್ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳಲ್ಲಿ ಚಟುವಟಿಕೆ ನಡೆಸುತ್ತಿದೆ. ಕೇರಂ, ಕ್ರಿಕೆಟ್, ಟೇಬಲ್ ಟೆನಿಸ್, ಬ್ಯಾಡ್ಮಿಂಟನ್ ಮುಂತಾದ ಕ್ರೀಡೆಗಳಿಗೂ ಪ್ರೋತ್ಸಾಹ ನೀಡುತ್ತ ಬಂದಿದೆ ಎಂದು ಅವರು ತಿಳಿಸಿದರು. </p><p>ಕ್ಲಬ್ ಕಾರ್ಯದರ್ಶಿ ಎಂ.ಸಿ.ಶೆಟ್ಟಿ, ಕೋಶಾಧಿಕಾರಿ ದೇವಿಚರಣ್ ಶೆಟ್ಟಿ, ಪ್ರಮುಖರಾದ ಯೋಗೇಶ್ ಕುಮಾರ್, ಮನೋಜ್ ಕುಮಾರ್, ಪ್ರದೀಪ್ ರೈ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ಕಾಸ್ಮೊಪೊಲಿಟನ್ ಕ್ಲಬ್ ಆಯೋಜಿಸಿರುವ ರಾಜ್ಯಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಚಾಂಪಿಯನ್ಷಿಪ್ ಬಾವುಟಗುಡ್ಡದಲ್ಲಿರುವ ಕ್ಲಬ್ನ ಕ್ರೀಡಾಂಗಣದಲ್ಲಿ ಫೆ.20ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.</p><p>ಬಿ.ಭಾಸ್ಕರ್, ಎಂ.ಯೋಗೀಶ್, ಬಿ.ಸಿ ಕಾರ್ತಿಕ್, ಕೀರ್ತಿ ಪಾಂಡ್ಯ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ 14 ಆಟಗಾರರು ಪಾಲ್ಗೊಳ್ಳಲಿದ್ದಾರೆ. 20ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಚಾಂಪಿಯನ್ಷಿಪ್ ಉದ್ಘಾಟಿಸುವರು ಎಂದು ಕ್ಲಬ್ ಉಪಾಧ್ಯಕ್ಷ ರಾಜಗೋಪಾಲ ರೈ ಗುರುವಾರ<br>ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>1901ರಲ್ಲಿ ಸ್ಥಾಪನೆಯಾಗಿರುವ ಕಾಸ್ಮೊಪಾಲಿಟನ್ ಕ್ಲಬ್ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳಲ್ಲಿ ಚಟುವಟಿಕೆ ನಡೆಸುತ್ತಿದೆ. ಕೇರಂ, ಕ್ರಿಕೆಟ್, ಟೇಬಲ್ ಟೆನಿಸ್, ಬ್ಯಾಡ್ಮಿಂಟನ್ ಮುಂತಾದ ಕ್ರೀಡೆಗಳಿಗೂ ಪ್ರೋತ್ಸಾಹ ನೀಡುತ್ತ ಬಂದಿದೆ ಎಂದು ಅವರು ತಿಳಿಸಿದರು. </p><p>ಕ್ಲಬ್ ಕಾರ್ಯದರ್ಶಿ ಎಂ.ಸಿ.ಶೆಟ್ಟಿ, ಕೋಶಾಧಿಕಾರಿ ದೇವಿಚರಣ್ ಶೆಟ್ಟಿ, ಪ್ರಮುಖರಾದ ಯೋಗೇಶ್ ಕುಮಾರ್, ಮನೋಜ್ ಕುಮಾರ್, ಪ್ರದೀಪ್ ರೈ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>