<p><strong>ಮಂಗಳೂರು</strong>: ಏಕಲವ್ಯ ಪುರಸ್ಕೃತ, ಅಂತರ ರಾಷ್ಟ್ರೀಯ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ(43) ಅವರು ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<p>ಉದಯ ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮಾಣಿಯವರು. ಶನಿವಾರ ಬೆಳಗಿನ ಜಾವ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.</p>.<p>2006–07 ರಲ್ಲಿ ಮುಂಬೈಯಲ್ಲಿ ನಡೆದ 2ನೇ ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಅತ್ಯತ್ತಮ ಆಟಗಾರರಾಗಿ ಹೊರಹೊಮ್ಮಿದ್ದರು. ಇದಕ್ಕಾಗಿ ಅವರಿಗೆ ಅತ್ಯತ್ತಮ ಪ್ರಶಸ್ತಿ ಕೂಡ ಬಂದಿತ್ತು.</p>.<p>ಉದಯ ಚೌಟ ಅವರು ನಾಲ್ಕು ವರ್ಷಗಳ ಕಾಲ ಅಂತರ ಕಾಲೇಜು ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಂಡು ಜಯ ದಾಖಲಿಸಿ ಅಂತರ ವಿವಿಗೆ ಮಂಗಳೂರು ವಿವಿ ಪ್ರತಿನಿಧಿಸಿದ್ದರು.</p>.<p>ಜೂನಿಯರ್ ನ್ಯಾಷನಲ್, ಸೀನಿಯರ್ ನ್ಯಾಷನಲ್ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಹೆಗ್ಗಳಿಕೆ ಅವರದು. ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಜಿಲ್ಲೆಯ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದರು. 2004 ರಲ್ಲಿ ಭಾರತ– ಬಾಂಗ್ಲಾ ಟೆಸ್ಟ್ ಕಬಡ್ಡಿಯ 5 ಟೂರ್ನಿಯಲ್ಲಿ ಗೆಲುವು ಸಾಧಿಸಿ ಚಿನ್ನದ ಪದಕ ದಾಖಲಿಸಿದ್ದರು. ಉತ್ತಮ ರೈಡರ್ ಆಗಿದ್ದರು.</p>.<p>ಬ್ಯಾಂಕ್ ಬರೋಡಾದಲ್ಲಿ ಉದ್ಯೋಗಿ ಆಗಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ಆಗಿದ್ದರು.</p>.<p>ಅಂತರರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ಮಿಂಚಿದ್ದ ಜಿಲ್ಲೆಯ ಕ್ರೀಡಾಪಟು ಉದಯ ಚೌಟ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಕಬಡ್ಡಿ ಕ್ರೀಡೆಗೆ ತುಂಬಲಾರದ ನಷ್ಟ ತಂದಿದೆ ಎಂದು ಕಬಡ್ಡಿ ತರಬೇತುದಾರ ಪುರುಷೋತ್ತಮ ಪೂಜಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಏಕಲವ್ಯ ಪುರಸ್ಕೃತ, ಅಂತರ ರಾಷ್ಟ್ರೀಯ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ(43) ಅವರು ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<p>ಉದಯ ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮಾಣಿಯವರು. ಶನಿವಾರ ಬೆಳಗಿನ ಜಾವ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.</p>.<p>2006–07 ರಲ್ಲಿ ಮುಂಬೈಯಲ್ಲಿ ನಡೆದ 2ನೇ ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಅತ್ಯತ್ತಮ ಆಟಗಾರರಾಗಿ ಹೊರಹೊಮ್ಮಿದ್ದರು. ಇದಕ್ಕಾಗಿ ಅವರಿಗೆ ಅತ್ಯತ್ತಮ ಪ್ರಶಸ್ತಿ ಕೂಡ ಬಂದಿತ್ತು.</p>.<p>ಉದಯ ಚೌಟ ಅವರು ನಾಲ್ಕು ವರ್ಷಗಳ ಕಾಲ ಅಂತರ ಕಾಲೇಜು ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಂಡು ಜಯ ದಾಖಲಿಸಿ ಅಂತರ ವಿವಿಗೆ ಮಂಗಳೂರು ವಿವಿ ಪ್ರತಿನಿಧಿಸಿದ್ದರು.</p>.<p>ಜೂನಿಯರ್ ನ್ಯಾಷನಲ್, ಸೀನಿಯರ್ ನ್ಯಾಷನಲ್ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಹೆಗ್ಗಳಿಕೆ ಅವರದು. ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಜಿಲ್ಲೆಯ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದರು. 2004 ರಲ್ಲಿ ಭಾರತ– ಬಾಂಗ್ಲಾ ಟೆಸ್ಟ್ ಕಬಡ್ಡಿಯ 5 ಟೂರ್ನಿಯಲ್ಲಿ ಗೆಲುವು ಸಾಧಿಸಿ ಚಿನ್ನದ ಪದಕ ದಾಖಲಿಸಿದ್ದರು. ಉತ್ತಮ ರೈಡರ್ ಆಗಿದ್ದರು.</p>.<p>ಬ್ಯಾಂಕ್ ಬರೋಡಾದಲ್ಲಿ ಉದ್ಯೋಗಿ ಆಗಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ಆಗಿದ್ದರು.</p>.<p>ಅಂತರರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ಮಿಂಚಿದ್ದ ಜಿಲ್ಲೆಯ ಕ್ರೀಡಾಪಟು ಉದಯ ಚೌಟ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಕಬಡ್ಡಿ ಕ್ರೀಡೆಗೆ ತುಂಬಲಾರದ ನಷ್ಟ ತಂದಿದೆ ಎಂದು ಕಬಡ್ಡಿ ತರಬೇತುದಾರ ಪುರುಷೋತ್ತಮ ಪೂಜಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>