<p><strong>ನವದೆಹಲಿ</strong>/<strong>ಇಂಫಾಲ</strong> (ಪಿಟಿಐ): ಟೋಕಿಯೊ ಒಲಿಂಪಿಕ್ಸ್ನಲ್ಲಿ ಮಹಿಳೆಯರ ವೇಟ್ಲಿಫ್ಟಿಂಗ್ನಲ್ಲಿ ಬೆಳ್ಳಿ ಪದಕ ಜಯಿಸಿದ ಮೀರಾಬಾಯಿ ಚಾನು ಸೋಮವಾರ ಭಾರತಕ್ಕೆ ಮರಳಿದರು. </p>.<p>ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಆದರೆ ಈ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಸಾಮಾಜಿಕ ಅಂತರ ನಿಯಮ ಮಾಯವಾಗಿತ್ತು.</p>.<p>ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತಿತರರು ಭಾರತ್ ಮಾತಾ ಕೀ ಜೈ, ಮೀರಾಬಾಯಿಗೆ ಜಯವಾಗಲಿ ಎಂದು ಕೂಗಿದರು. ಭಾರತ ಕ್ರೀಡಾ ಪ್ರಾಧಿಕಾರ ಅಧಿಕಾರಿಗಳು ಮೀರಾಬಾಯಿಯನ್ನು ಗೌರವಿಸಿ ಬರಮಾಡಿಕೊಂಡರು.</p>.<p>‘ಕಳೆದ ಐದು ವರ್ಷಗಳಿಂದ ಕುಟುಂಬದೊಂದಿಗೆ ಬಹಳ ಸಮಯ ಕಳೆಯಲು ಸಾಧ್ಯವಾಗಿಲ್ಲ. ಈಗ ಮನೆಗೆ ತೆರಳಲು ಕಾತರಳಾಗಿದ್ದೇನೆ‘ ಎಂದು ಮೀರಾ ಹೇಳಿದರು.</p>.<p>ವಿಶ್ವ ಚಾಂಪಿಯನ್ ಆಗಿರುವ ಮೀರಾ ಒಲಿಂಪಿಕ್ಸ್ಗೂ ಮುನ್ನ ತರಬೇತಿಗಾಗಿ ಅಮೆರಿಕದಲ್ಲಿಯೇ ಹೆಚ್ಚು ಸಮಯ ಇದ್ದರು.</p>.<p><strong>ಒಂದು</strong> <strong>ಕೋಟಿ</strong> <strong>ಬಹುಮಾನ</strong></p>.<p>ಮೀರಾಬಾಯಿ ಅವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಣಿಪುರದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಘೋಷಿಸಿದ್ದಾರೆ.</p>.<p>‘ಚಾನು ಅವರನ್ನು ಹೆಚ್ಚುವರಿ ಪೊಲೀಸ್ ಸೂಪರಿಟೆಂಡೆಂಟ್ ಆಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ವಿಶ್ವದರ್ಜೆಯ ವೇಟ್ಲಿಫ್ಟಿಂಗ್ ಆಕಾಡೆಮಿಯನ್ನೂ ಆರಂಭಿಸಲಾಗುವುದು‘ ಎಂದು ಸಿಂಗ್ ತಿಳಿಸಿದ್ದಾರೆ.</p>.<p>ಇದೇ ಒಲಿಂಪಿಕ್ನಲ್ಲಿ ಸ್ಪರ್ಧಿಸಿದ್ದ ಮಣಿಪುರದವರೇ ಆದ ಜುಡೋ ಪಟು ಎಲ್. ಸುಶೀಲಾದೇವಿ ಅವರಿಗೆ ಕಾನ್ಸ್ಟೇಬಲ್ ನಿಂದ ಸಬ್ ಇನ್ಸ್ಪೆಕ್ಟರ್ ಆಗಿ ಬಡ್ತಿ ನೀಡಲಾಗಿದೆ.</p>.<p>ಮಣಿಪುರದಿಂದ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿರುವ ಐವರು ಕ್ರೀಡಾಪಟುಗಳಿಗೆ ತಲಾ ₹ 25 ಲಕ್ಷ ನೀಡಲಾಗುವುದು ಎಂದೂ ಸಿಂಗ್ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>/<strong>ಇಂಫಾಲ</strong> (ಪಿಟಿಐ): ಟೋಕಿಯೊ ಒಲಿಂಪಿಕ್ಸ್ನಲ್ಲಿ ಮಹಿಳೆಯರ ವೇಟ್ಲಿಫ್ಟಿಂಗ್ನಲ್ಲಿ ಬೆಳ್ಳಿ ಪದಕ ಜಯಿಸಿದ ಮೀರಾಬಾಯಿ ಚಾನು ಸೋಮವಾರ ಭಾರತಕ್ಕೆ ಮರಳಿದರು. </p>.<p>ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಆದರೆ ಈ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಸಾಮಾಜಿಕ ಅಂತರ ನಿಯಮ ಮಾಯವಾಗಿತ್ತು.</p>.<p>ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತಿತರರು ಭಾರತ್ ಮಾತಾ ಕೀ ಜೈ, ಮೀರಾಬಾಯಿಗೆ ಜಯವಾಗಲಿ ಎಂದು ಕೂಗಿದರು. ಭಾರತ ಕ್ರೀಡಾ ಪ್ರಾಧಿಕಾರ ಅಧಿಕಾರಿಗಳು ಮೀರಾಬಾಯಿಯನ್ನು ಗೌರವಿಸಿ ಬರಮಾಡಿಕೊಂಡರು.</p>.<p>‘ಕಳೆದ ಐದು ವರ್ಷಗಳಿಂದ ಕುಟುಂಬದೊಂದಿಗೆ ಬಹಳ ಸಮಯ ಕಳೆಯಲು ಸಾಧ್ಯವಾಗಿಲ್ಲ. ಈಗ ಮನೆಗೆ ತೆರಳಲು ಕಾತರಳಾಗಿದ್ದೇನೆ‘ ಎಂದು ಮೀರಾ ಹೇಳಿದರು.</p>.<p>ವಿಶ್ವ ಚಾಂಪಿಯನ್ ಆಗಿರುವ ಮೀರಾ ಒಲಿಂಪಿಕ್ಸ್ಗೂ ಮುನ್ನ ತರಬೇತಿಗಾಗಿ ಅಮೆರಿಕದಲ್ಲಿಯೇ ಹೆಚ್ಚು ಸಮಯ ಇದ್ದರು.</p>.<p><strong>ಒಂದು</strong> <strong>ಕೋಟಿ</strong> <strong>ಬಹುಮಾನ</strong></p>.<p>ಮೀರಾಬಾಯಿ ಅವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಣಿಪುರದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಘೋಷಿಸಿದ್ದಾರೆ.</p>.<p>‘ಚಾನು ಅವರನ್ನು ಹೆಚ್ಚುವರಿ ಪೊಲೀಸ್ ಸೂಪರಿಟೆಂಡೆಂಟ್ ಆಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ವಿಶ್ವದರ್ಜೆಯ ವೇಟ್ಲಿಫ್ಟಿಂಗ್ ಆಕಾಡೆಮಿಯನ್ನೂ ಆರಂಭಿಸಲಾಗುವುದು‘ ಎಂದು ಸಿಂಗ್ ತಿಳಿಸಿದ್ದಾರೆ.</p>.<p>ಇದೇ ಒಲಿಂಪಿಕ್ನಲ್ಲಿ ಸ್ಪರ್ಧಿಸಿದ್ದ ಮಣಿಪುರದವರೇ ಆದ ಜುಡೋ ಪಟು ಎಲ್. ಸುಶೀಲಾದೇವಿ ಅವರಿಗೆ ಕಾನ್ಸ್ಟೇಬಲ್ ನಿಂದ ಸಬ್ ಇನ್ಸ್ಪೆಕ್ಟರ್ ಆಗಿ ಬಡ್ತಿ ನೀಡಲಾಗಿದೆ.</p>.<p>ಮಣಿಪುರದಿಂದ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿರುವ ಐವರು ಕ್ರೀಡಾಪಟುಗಳಿಗೆ ತಲಾ ₹ 25 ಲಕ್ಷ ನೀಡಲಾಗುವುದು ಎಂದೂ ಸಿಂಗ್ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>