<p><strong>ಚೆನ್ನೈ</strong>: ಕರ್ನಾಟಕ ತಂಡವು ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದೆ.</p>.<p>ಮಂಗಳವಾರ ನಡೆದ ಬಿ ಗುಂಪಿನ ಪಂದ್ಯದಲ್ಲಿ ಶಶಾಂಕ್ ರೈ ಗಳಿಸಿದ 14 ಪಾಯಿಂಟ್ಸ್ ನೆರವಿನಿಂದ 69–44ರಿಂದ ರಾಜಸ್ಥಾನ ತಂಡವನ್ನು ಪರಾಭವಗೊಳಿಸಿತು. ರಾಜ್ಯ ತಂಡದ ಪರ ಪ್ರತ್ಯಾಂಶು ತೋಮರ್ 12, ಹರೀಶ್ ಮುತ್ತು ಮತ್ತು ಅಭಿಷೇಕ್ ಗೌಡ ತಲಾ 11 ಪಾಯಿಂಟ್ಸ್ ಗಳಿಸಿದರು.</p>.<p>ಈ ಜಯದೊಂದಿಗೆ ಕರ್ನಾಟಕ ತಂಡವು ಟೂರ್ನಿಯ ಎರಡನೇ ಸುತ್ತು ಪ್ರವೇಶಿಸಿತು. ಪುರುಷರ ವಿಭಾಗದಲ್ಲಿ ಪಂಜಾಬ್, ಸರ್ವಿಸಸ್, ತಮಿಳುನಾಡು, ಉತ್ತರಾಖಂಡ, ಹರಿಯಾಣ, ರೈಲ್ವೇಸ್ ತಂಡಗಳೂ ಎರಡನೇ ಸುತ್ತಿಗೆ ಕಾಲಿಟ್ಟವು.</p>.<p>ದಿನದ ಇನ್ನುಳಿದ ಪಂದ್ಯಗಳಲ್ಲಿ ಹರಿಯಾಣ 74–57ರಿಂದ ಪಶ್ಚಿಮ ಬಂಗಾಳ ಎದುರು, ಸರ್ವಿಸಸ್ 77–55ರಿಂದ ಉತ್ತರ ಪ್ರದೇಶ ಎದುರು, ಪಂಜಾಬ್ 96–58ರಿಂದ ತೆಲಂಗಾಣ ವಿರುದ್ಧ ಜಯ ಸಾಧಿಸಿದವು.</p>.<p>ಮಹಿಳೆಯರ ವಿಭಾಗದಲ್ಲಿ ರೈಲ್ವೇಸ್ 120–66ರಿಂದ ದೆಹಲಿ ಎದುರು, ತೆಲಂಗಾಣ 54–37ರಿಂದ ಒಡಿಶಾ ಎದುರು ಜಯ ಗೆಲುವು ಸಾಧಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಕರ್ನಾಟಕ ತಂಡವು ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದೆ.</p>.<p>ಮಂಗಳವಾರ ನಡೆದ ಬಿ ಗುಂಪಿನ ಪಂದ್ಯದಲ್ಲಿ ಶಶಾಂಕ್ ರೈ ಗಳಿಸಿದ 14 ಪಾಯಿಂಟ್ಸ್ ನೆರವಿನಿಂದ 69–44ರಿಂದ ರಾಜಸ್ಥಾನ ತಂಡವನ್ನು ಪರಾಭವಗೊಳಿಸಿತು. ರಾಜ್ಯ ತಂಡದ ಪರ ಪ್ರತ್ಯಾಂಶು ತೋಮರ್ 12, ಹರೀಶ್ ಮುತ್ತು ಮತ್ತು ಅಭಿಷೇಕ್ ಗೌಡ ತಲಾ 11 ಪಾಯಿಂಟ್ಸ್ ಗಳಿಸಿದರು.</p>.<p>ಈ ಜಯದೊಂದಿಗೆ ಕರ್ನಾಟಕ ತಂಡವು ಟೂರ್ನಿಯ ಎರಡನೇ ಸುತ್ತು ಪ್ರವೇಶಿಸಿತು. ಪುರುಷರ ವಿಭಾಗದಲ್ಲಿ ಪಂಜಾಬ್, ಸರ್ವಿಸಸ್, ತಮಿಳುನಾಡು, ಉತ್ತರಾಖಂಡ, ಹರಿಯಾಣ, ರೈಲ್ವೇಸ್ ತಂಡಗಳೂ ಎರಡನೇ ಸುತ್ತಿಗೆ ಕಾಲಿಟ್ಟವು.</p>.<p>ದಿನದ ಇನ್ನುಳಿದ ಪಂದ್ಯಗಳಲ್ಲಿ ಹರಿಯಾಣ 74–57ರಿಂದ ಪಶ್ಚಿಮ ಬಂಗಾಳ ಎದುರು, ಸರ್ವಿಸಸ್ 77–55ರಿಂದ ಉತ್ತರ ಪ್ರದೇಶ ಎದುರು, ಪಂಜಾಬ್ 96–58ರಿಂದ ತೆಲಂಗಾಣ ವಿರುದ್ಧ ಜಯ ಸಾಧಿಸಿದವು.</p>.<p>ಮಹಿಳೆಯರ ವಿಭಾಗದಲ್ಲಿ ರೈಲ್ವೇಸ್ 120–66ರಿಂದ ದೆಹಲಿ ಎದುರು, ತೆಲಂಗಾಣ 54–37ರಿಂದ ಒಡಿಶಾ ಎದುರು ಜಯ ಗೆಲುವು ಸಾಧಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>