<p><strong>ಬೆಂಗಳೂರು:</strong> ಕರ್ನಾಟಕದ ಶ್ವೇತಾ ಎಸ್.ಅಣ್ಣಿಕೆರೆ ಅವರು ಅಹಮದಾಬಾದಿನಲ್ಲಿ ಭಾನುವಾರ ಮುಕ್ತಾಯಗೊಂಡ ಸೀನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ನ ಮಹಿಳೆಯರ 50 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡರು.</p>.<p>ಹಳಿಯಾಳದ ಅರ್ಲವಾಡ ಗ್ರಾಮದ ಶ್ವೇತಾ ಅವರು ಫೈನಲ್ನಲ್ಲಿ ರೈಲ್ವೇಸ್ನ ಅಂತರರಾಷ್ಟ್ರೀಯ ಕುಸ್ತಿಪಟು, ಅಗ್ರ ಶ್ರೇಯಾಂಕದ ನೀಲಂ ಅವರಿಗೆ ಮಣಿದರು.</p>.<p>ಕರ್ನಾಟಕದ ಆಟಗಾರ್ತಿ ಸೆಮಿಫೈನಲ್ನಲ್ಲಿ ಮಹಾರಾಷ್ಟ್ರದ ಗೌರಿ ಪಾಟೀಲ್ ಅವರನ್ನು 2 ಪಾಯಿಂಟ್ಗಳಿಂದ, ಕ್ವಾರ್ಟರ್ಫೈನಲ್ನಲ್ಲಿ ಹರಿಯಾಣದ ಮುಸ್ಕಾನ್ ಅವರನ್ನು 10–0 ಪಾಯಿಂಟ್ಗಳಿಂದ ಸೋಲಿಸಿದ್ದರು.</p>.<p>19 ವರ್ಷ ವಯಸ್ಸಿನ ಶ್ವೇತಾ, ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಗಳಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು.</p>.<p>ಪುರುಷರ 70 ಕೆ.ಜಿ. ವಿಭಾಗದಲ್ಲಿ ರೈಲ್ವೇಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ರೋಹನ್ ಎನ್.ಘೆವಡಿ ಅವರು ಕಂಚಿನ ಪದಕ ತಮ್ಮದಾಗಿಸಿಕೊಂಡರು.</p>.<p>ಹಳಿಯಾಳದ ರೋಹನ್ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಸರ್ವಿಸಸ್ನ ನವೀನ್ ಅವರನ್ನು 8–4 ಪಾಯಿಂಟ್ಗಳಿಂದ ಸೋಲಿಸಿದರು. ಹರಿಯಾಣದ ಅಭಿಮನ್ಯು ಚಿನ್ನದ ಪದಕ ಗೆದ್ದರೆ, ಉತ್ತರ ಪ್ರದೇಶದ ರವಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದ ಶ್ವೇತಾ ಎಸ್.ಅಣ್ಣಿಕೆರೆ ಅವರು ಅಹಮದಾಬಾದಿನಲ್ಲಿ ಭಾನುವಾರ ಮುಕ್ತಾಯಗೊಂಡ ಸೀನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ನ ಮಹಿಳೆಯರ 50 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡರು.</p>.<p>ಹಳಿಯಾಳದ ಅರ್ಲವಾಡ ಗ್ರಾಮದ ಶ್ವೇತಾ ಅವರು ಫೈನಲ್ನಲ್ಲಿ ರೈಲ್ವೇಸ್ನ ಅಂತರರಾಷ್ಟ್ರೀಯ ಕುಸ್ತಿಪಟು, ಅಗ್ರ ಶ್ರೇಯಾಂಕದ ನೀಲಂ ಅವರಿಗೆ ಮಣಿದರು.</p>.<p>ಕರ್ನಾಟಕದ ಆಟಗಾರ್ತಿ ಸೆಮಿಫೈನಲ್ನಲ್ಲಿ ಮಹಾರಾಷ್ಟ್ರದ ಗೌರಿ ಪಾಟೀಲ್ ಅವರನ್ನು 2 ಪಾಯಿಂಟ್ಗಳಿಂದ, ಕ್ವಾರ್ಟರ್ಫೈನಲ್ನಲ್ಲಿ ಹರಿಯಾಣದ ಮುಸ್ಕಾನ್ ಅವರನ್ನು 10–0 ಪಾಯಿಂಟ್ಗಳಿಂದ ಸೋಲಿಸಿದ್ದರು.</p>.<p>19 ವರ್ಷ ವಯಸ್ಸಿನ ಶ್ವೇತಾ, ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಗಳಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು.</p>.<p>ಪುರುಷರ 70 ಕೆ.ಜಿ. ವಿಭಾಗದಲ್ಲಿ ರೈಲ್ವೇಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ರೋಹನ್ ಎನ್.ಘೆವಡಿ ಅವರು ಕಂಚಿನ ಪದಕ ತಮ್ಮದಾಗಿಸಿಕೊಂಡರು.</p>.<p>ಹಳಿಯಾಳದ ರೋಹನ್ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಸರ್ವಿಸಸ್ನ ನವೀನ್ ಅವರನ್ನು 8–4 ಪಾಯಿಂಟ್ಗಳಿಂದ ಸೋಲಿಸಿದರು. ಹರಿಯಾಣದ ಅಭಿಮನ್ಯು ಚಿನ್ನದ ಪದಕ ಗೆದ್ದರೆ, ಉತ್ತರ ಪ್ರದೇಶದ ರವಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>