ಕಳೆದ ಮೂರು ತಿಂಗಳಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಶಾಂತಿ ನೆಲೆಸಿಲ್ಲ. ಹಿಂಸಾಚಾರದಿಂದಾಗಿ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಉಂಟಾಗಿದೆ. ಅನೇಕ ಮಂದಿ ಮೃತಪಟ್ಟಿದ್ದು, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಮತ್ತು ಶಾಂತಿ ನೆಲೆಸಲು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಮನವಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಸದ್ಯ ಅಮೆರಿಕದಲ್ಲಿರುವ ಚಾನು, ಮುಂಬರುವ ವಿಶ್ವ ಚಾಂಪಿಯನ್ಶಿಪ್ ಮತ್ತು ಏಷ್ಯನ್ ಗೇಮ್ಸ್ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಆದರೂ ತಮ್ಮ ಹುಟ್ಟೂರಾದ ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಅತೀವ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.