<p><strong>ನವದೆಹಲಿ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆ ಗುರಿಯಾಗಿಸಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಕ್ರೀಡಾಪಟುಗಳಿಂದಲೂ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. </p><p>ಕ್ರಿಕೆಟ್ನ ಆರಾಧ್ಯ ದೈವ, ದಿಗ್ಗಜ ಸಚಿನ್ ತೆಂಡೂಲ್ಕರ್, ದೇಶದ ಒಗ್ಗಟ್ಟು ಹಾಗೂ ಶಕ್ತಿಯ ಬಗ್ಗೆ ಪ್ರಶಂಸಿಸಿದ್ದಾರೆ. 'ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ನಾವೆಲ್ಲರೂ ಒಂದೇ ತಂಡ, ಜೈ ಹಿಂದ್' ಎಂದು ಹೇಳಿದ್ದಾರೆ. </p>. <p>ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗೌಂಭೀರ್, ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಸುರೇಶ್ ರೈನ್, ಶಿಖರ್ ಧವನ್ ಸೇರಿದಂತೆ ಪ್ರಮುಖರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಸಶಸ್ತ್ರ ಪಡೆಯ ಕಾರ್ಯಾಚರಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಸಶಸ್ತ್ರ ಪಡೆಯ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. </p><p>ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಒಲಿಂಪಿಕ್ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್, ಕುಸ್ತಿಪಟು ಯೋಗೇಶ್ವರ್ ದತ್ ಸಹ ಸೇನೆಯ ಕಾರ್ಯಾಚರಣೆಯನ್ನು ಹೊಗಳಿದ್ದಾರೆ.</p>.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor| ರಜೆಯಲ್ಲಿರುವ ಸಿಬ್ಬಂದಿಯನ್ನು ವಾಪಸ್ ಕರೆಸಿ; ಅಮಿತ್ ಶಾ.Operation Sindoor: ಸೇನಾ ದಾಳಿಯಲ್ಲಿ ಮುರಿಡ್ಕೆ ಪ್ರಮುಖ ಗುರಿಯಾಗಿದ್ದು ಏಕೆ.?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆ ಗುರಿಯಾಗಿಸಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಕ್ರೀಡಾಪಟುಗಳಿಂದಲೂ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. </p><p>ಕ್ರಿಕೆಟ್ನ ಆರಾಧ್ಯ ದೈವ, ದಿಗ್ಗಜ ಸಚಿನ್ ತೆಂಡೂಲ್ಕರ್, ದೇಶದ ಒಗ್ಗಟ್ಟು ಹಾಗೂ ಶಕ್ತಿಯ ಬಗ್ಗೆ ಪ್ರಶಂಸಿಸಿದ್ದಾರೆ. 'ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ನಾವೆಲ್ಲರೂ ಒಂದೇ ತಂಡ, ಜೈ ಹಿಂದ್' ಎಂದು ಹೇಳಿದ್ದಾರೆ. </p>. <p>ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗೌಂಭೀರ್, ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಸುರೇಶ್ ರೈನ್, ಶಿಖರ್ ಧವನ್ ಸೇರಿದಂತೆ ಪ್ರಮುಖರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಸಶಸ್ತ್ರ ಪಡೆಯ ಕಾರ್ಯಾಚರಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಸಶಸ್ತ್ರ ಪಡೆಯ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. </p><p>ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಒಲಿಂಪಿಕ್ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್, ಕುಸ್ತಿಪಟು ಯೋಗೇಶ್ವರ್ ದತ್ ಸಹ ಸೇನೆಯ ಕಾರ್ಯಾಚರಣೆಯನ್ನು ಹೊಗಳಿದ್ದಾರೆ.</p>.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor| ರಜೆಯಲ್ಲಿರುವ ಸಿಬ್ಬಂದಿಯನ್ನು ವಾಪಸ್ ಕರೆಸಿ; ಅಮಿತ್ ಶಾ.Operation Sindoor: ಸೇನಾ ದಾಳಿಯಲ್ಲಿ ಮುರಿಡ್ಕೆ ಪ್ರಮುಖ ಗುರಿಯಾಗಿದ್ದು ಏಕೆ.?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>