<p><strong>ಬ್ಯಾಂಕಾಕ್</strong>: ಬಲಿಷ್ಠ ಡೆನ್ಮಾರ್ಕ್ ವಿರುದ್ಧ ಅಮೋಘ ಸಾಮರ್ಥ್ಯ ಪ್ರದರ್ಶಿಸಿದ ಭಾರತ ತಂಡ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪ್ರವೇಶಿಸಿತು.</p>.<p>ಶುಕ್ರವಾರ ನಡೆದ ನಾಲ್ಕರ ಘಟ್ಟದ ಹಣಾಹಣಿಯಲ್ಲಿ ಕಿದಂಬಿ ಶ್ರೀಕಾಂತ್ ಮತ್ತು ಬಳಗ 3–2ರಲ್ಲಿ ಗೆಲುವು ಸಾಧಿಸಿತು. ಈ ಮೂಲಕ ಟೂರ್ನಿಯಲ್ಲಿ ಭಾರತ ಇದೇ ಮೊದಲ ಬಾರಿ ಪ್ರಶಸ್ತಿ ಸುತ್ತು ಪ್ರವೇಶಿಸಿತು.</p>.<p>ಗುರುವಾರ ಕ್ವಾರ್ಟರ್ ಫೈನಲ್ನ ಮೊದಲ ಪಂದ್ಯದಲ್ಲಿ ಸೋತಿದ್ದ ಯುವ ಆಟಗಾರ ಲಕ್ಷ್ಯಸೇನ್ ಸೆಮಿಫೈನಲ್ನಲ್ಲೂ ಆರಂಭದ ಪಂದ್ಯದಲ್ಲಿ ನಿರಾಸೆ ಉಂಟುಮಾಡಿದರು. ವಿಕ್ಟರ್ ಅಕ್ಸೆಲ್ಸನ್ ಎದುರು ಅವರು 21–13, 21–13ರಲ್ಲಿ ಸೋತರು.</p>.<p>ನಂತರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಮಿಂಚಿದರು. ಕಿಮ್ ಆಸ್ಟ್ರಪ್ ಮತ್ತು ಮಥಾಯಸ್ ಕ್ರಿಸ್ಟಿಯನ್ಸೆನ್ ಎದುರಿನ ರೋಚಕ ಪಂದ್ಯದಲ್ಲಿ ಭಾರತದ ಆಟಗಾರರು 21–18, 21–23, 22–20ರಲ್ಲಿ ಜಯ ಸಾಧಿಸಿ ಹಣಾಹಣಿಯನ್ನು 1–1ರಲ್ಲಿ ಸಮ ಮಾಡಿದರು.</p>.<p>ಆ್ಯಂಡರ್ಸ್ ಆ್ಯಂಟೊನ್ಸೆನ್ ಎದುರಿನ ಸಿಂಗಲ್ಸ್ ಪಂದ್ಯದಲ್ಲಿ 21–18, 12–21, 21–15ರಲ್ಲಿ ಗೆದ್ದು ಕಿದಂಬಿ ಶ್ರೀಕಾಂತ್ ಮುನ್ನಡೆ ಗಳಿಸಿಕೊಟ್ಟರು. ಆದರೆ ಎರಡನೇ ಡಬಲ್ಸ್ನಲ್ಲಿ ಕೃಷ್ಣಪ್ರಸಾದ್ ಗರಗ–ವಿಷ್ಣುವರ್ಧನ್ ಗೌಡ್ ಜೋಡಿ ರಸ್ಮುಸೀನ್–ಸೊಗಾರ್ಡ್ಗೆ 16–21, 13–21ರಲ್ಲಿ ಮಣಿದರು. ಹೀಗಾಗಿ ಕೊನೆಯ ಪಂದ್ಯ ನಿರ್ಣಾಯಕವಾಯಿತು.</p>.<p>ರಾಸ್ಮಸನ್ ಗೆಮ್ಕೆ ಎದುರಿನ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟಗಾಡಿದ ಎಚ್.ಎಸ್.ಪ್ರಣಯ್ 13–21, 21–9, 21–12ರಲ್ಲಿ ಗೆದ್ದು ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್</strong>: ಬಲಿಷ್ಠ ಡೆನ್ಮಾರ್ಕ್ ವಿರುದ್ಧ ಅಮೋಘ ಸಾಮರ್ಥ್ಯ ಪ್ರದರ್ಶಿಸಿದ ಭಾರತ ತಂಡ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪ್ರವೇಶಿಸಿತು.</p>.<p>ಶುಕ್ರವಾರ ನಡೆದ ನಾಲ್ಕರ ಘಟ್ಟದ ಹಣಾಹಣಿಯಲ್ಲಿ ಕಿದಂಬಿ ಶ್ರೀಕಾಂತ್ ಮತ್ತು ಬಳಗ 3–2ರಲ್ಲಿ ಗೆಲುವು ಸಾಧಿಸಿತು. ಈ ಮೂಲಕ ಟೂರ್ನಿಯಲ್ಲಿ ಭಾರತ ಇದೇ ಮೊದಲ ಬಾರಿ ಪ್ರಶಸ್ತಿ ಸುತ್ತು ಪ್ರವೇಶಿಸಿತು.</p>.<p>ಗುರುವಾರ ಕ್ವಾರ್ಟರ್ ಫೈನಲ್ನ ಮೊದಲ ಪಂದ್ಯದಲ್ಲಿ ಸೋತಿದ್ದ ಯುವ ಆಟಗಾರ ಲಕ್ಷ್ಯಸೇನ್ ಸೆಮಿಫೈನಲ್ನಲ್ಲೂ ಆರಂಭದ ಪಂದ್ಯದಲ್ಲಿ ನಿರಾಸೆ ಉಂಟುಮಾಡಿದರು. ವಿಕ್ಟರ್ ಅಕ್ಸೆಲ್ಸನ್ ಎದುರು ಅವರು 21–13, 21–13ರಲ್ಲಿ ಸೋತರು.</p>.<p>ನಂತರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಮಿಂಚಿದರು. ಕಿಮ್ ಆಸ್ಟ್ರಪ್ ಮತ್ತು ಮಥಾಯಸ್ ಕ್ರಿಸ್ಟಿಯನ್ಸೆನ್ ಎದುರಿನ ರೋಚಕ ಪಂದ್ಯದಲ್ಲಿ ಭಾರತದ ಆಟಗಾರರು 21–18, 21–23, 22–20ರಲ್ಲಿ ಜಯ ಸಾಧಿಸಿ ಹಣಾಹಣಿಯನ್ನು 1–1ರಲ್ಲಿ ಸಮ ಮಾಡಿದರು.</p>.<p>ಆ್ಯಂಡರ್ಸ್ ಆ್ಯಂಟೊನ್ಸೆನ್ ಎದುರಿನ ಸಿಂಗಲ್ಸ್ ಪಂದ್ಯದಲ್ಲಿ 21–18, 12–21, 21–15ರಲ್ಲಿ ಗೆದ್ದು ಕಿದಂಬಿ ಶ್ರೀಕಾಂತ್ ಮುನ್ನಡೆ ಗಳಿಸಿಕೊಟ್ಟರು. ಆದರೆ ಎರಡನೇ ಡಬಲ್ಸ್ನಲ್ಲಿ ಕೃಷ್ಣಪ್ರಸಾದ್ ಗರಗ–ವಿಷ್ಣುವರ್ಧನ್ ಗೌಡ್ ಜೋಡಿ ರಸ್ಮುಸೀನ್–ಸೊಗಾರ್ಡ್ಗೆ 16–21, 13–21ರಲ್ಲಿ ಮಣಿದರು. ಹೀಗಾಗಿ ಕೊನೆಯ ಪಂದ್ಯ ನಿರ್ಣಾಯಕವಾಯಿತು.</p>.<p>ರಾಸ್ಮಸನ್ ಗೆಮ್ಕೆ ಎದುರಿನ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟಗಾಡಿದ ಎಚ್.ಎಸ್.ಪ್ರಣಯ್ 13–21, 21–9, 21–12ರಲ್ಲಿ ಗೆದ್ದು ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>