<p><strong>ಬೆಂಗಳೂರು</strong>: ಶುಕ್ರವಾರ ನಿಧನರಾದ ‘ವೃಕ್ಷಮಾತೆ’, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರಿಗೆ ಕ್ವೀನ್ಸ್ ಪ್ರೀಮಿಯರ್ ಲೀಗ್ (ಕ್ಯೂಪಿಎಲ್) ಕ್ರೀಡೋತ್ಸವದಲ್ಲಿ ಗೌರವ ನಮನ ಸಲ್ಲಿಸಲಾಯಿತು.</p>.<p>ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಪರ್ಧೆಗಳ ನಡುವೆ ಆಟಗಾರ್ತಿಯರು ಮೌನಾಚರಣೆ ನಡೆಸಿ ಸಂತಾಪ ಸೂಚಿಸಿದರು. ಜೊತೆಗೆ, ತಿಮ್ಮಕ್ಕ ಅವರ ಸ್ಮರಣಾರ್ಥವಾಗಿ ಕ್ರೀಡಾಂಗಣದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.</p>.<p>ನಟರಾದ ಉಗ್ರಂ ಮಂಜು, ಮನೋಜ್ ರವಿಚಂದ್ರನ್ ಹಾಗೂ ಚಲನಚಿತ್ರ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರು ಎರಡನೇ ಐದನೇ ದಿನವಾದ ಶುಕ್ರವಾರ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದರು.</p>.<p>ಲಗೋರಿ, ಕ್ರಿಕೆಟ್, ಚೆಸ್, ಲೂಡೊ, ಕೇರಂ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಯ ಅರ್ಹತಾ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದ್ದು, ಶನಿವಾರ ಫೈನಲ್ ಪಂದ್ಯಗಳು ನಡೆಯಲಿವೆ. ಸ್ಟಾರ್ ನಾಯಕಿಯರ ತಂಡಗಳು ಪ್ರಶಸ್ತಿಗಾಗಿ ಕಠಿಣ ಪೈಪೋಟಿ ಒಡ್ಡಲು ಸಿದ್ಧವಾಗಿವೆ.</p>.<p>ಟೂರ್ನಿಯ ಪ್ರಚಾರ ರಾಯಭಾರಿ, ನಟಿ ರಮ್ಯಾ ಅವರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಂದ್ಯ ವೀಕ್ಷಣೆಗೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶುಕ್ರವಾರ ನಿಧನರಾದ ‘ವೃಕ್ಷಮಾತೆ’, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರಿಗೆ ಕ್ವೀನ್ಸ್ ಪ್ರೀಮಿಯರ್ ಲೀಗ್ (ಕ್ಯೂಪಿಎಲ್) ಕ್ರೀಡೋತ್ಸವದಲ್ಲಿ ಗೌರವ ನಮನ ಸಲ್ಲಿಸಲಾಯಿತು.</p>.<p>ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಪರ್ಧೆಗಳ ನಡುವೆ ಆಟಗಾರ್ತಿಯರು ಮೌನಾಚರಣೆ ನಡೆಸಿ ಸಂತಾಪ ಸೂಚಿಸಿದರು. ಜೊತೆಗೆ, ತಿಮ್ಮಕ್ಕ ಅವರ ಸ್ಮರಣಾರ್ಥವಾಗಿ ಕ್ರೀಡಾಂಗಣದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.</p>.<p>ನಟರಾದ ಉಗ್ರಂ ಮಂಜು, ಮನೋಜ್ ರವಿಚಂದ್ರನ್ ಹಾಗೂ ಚಲನಚಿತ್ರ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರು ಎರಡನೇ ಐದನೇ ದಿನವಾದ ಶುಕ್ರವಾರ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದರು.</p>.<p>ಲಗೋರಿ, ಕ್ರಿಕೆಟ್, ಚೆಸ್, ಲೂಡೊ, ಕೇರಂ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಯ ಅರ್ಹತಾ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದ್ದು, ಶನಿವಾರ ಫೈನಲ್ ಪಂದ್ಯಗಳು ನಡೆಯಲಿವೆ. ಸ್ಟಾರ್ ನಾಯಕಿಯರ ತಂಡಗಳು ಪ್ರಶಸ್ತಿಗಾಗಿ ಕಠಿಣ ಪೈಪೋಟಿ ಒಡ್ಡಲು ಸಿದ್ಧವಾಗಿವೆ.</p>.<p>ಟೂರ್ನಿಯ ಪ್ರಚಾರ ರಾಯಭಾರಿ, ನಟಿ ರಮ್ಯಾ ಅವರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಂದ್ಯ ವೀಕ್ಷಣೆಗೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>