<p><strong>ನವದೆಹಲಿ:</strong> ‘ಕಾಮನ್ವೆಲ್ತ್ ಕ್ರೀಡಾಕೂಟದ ತಂಡದಿಂದ ನನ್ನನ್ನು ಕೈಬಿಟ್ಟಾಗ ಮಾನಸಿಕವಾಗಿ ಕುಸಿದುಹೋಗಿದ್ದೆ. ಈ ವೇಳೆ ನನಗೆ ಧೈರ್ಯ ತುಂಬಿ ಪ್ರೇರೆಪಿಸಿದ್ದು ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್’ ಎಂದು ಹಿರಿಯ ಹಾಕಿ ಆಟಗಾರ ಸರ್ದಾರ್ ಸಿಂಗ್ ಹೇಳಿದ್ದಾರೆ.</p>.<p>32 ವರ್ಷದ ಸರ್ದಾರ್, ಅಂತರರಾಷ್ಟ್ರೀಯ ಹಾಕಿಗೆ ಬುಧವಾರವಷ್ಟೇ ನಿವೃತ್ತಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ನಿರೀಕ್ಷಿತ ಸಾಮರ್ಥ್ಯ ತೋರುವಲ್ಲಿ ತಂಡ ವಿಫಲವಾಗಿದ್ದಕ್ಕೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದರು.</p>.<p>‘ಹಿಂದಿನ 3–4 ತಿಂಗಳಲ್ಲಿ ಸಚಿನ್ ಅನೇಕ ಸಲಹೆಗಳನ್ನು ನೀಡಿದ್ದಾರೆ. ತಂಡದಲ್ಲಿ ಸ್ಥಾನ ಗಳಿಸಲು ವಿಫಲನಾಗಿದ್ದೆ. ಅವು ನನ್ನ ಕಷ್ಟದ ದಿನಗಳು. ಆಗೆಲ್ಲ ಅವರಿಗೆ ಹಲವು ಬಾರಿ ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿದ್ದೆ’ ಎಂದು ಸರ್ದಾರ್ ಸ್ಮರಿಸಿಕೊಂಡಿದ್ದಾರೆ.</p>.<p>‘ವಿಮರ್ಶೆಗೆ ಕುಗ್ಗದೇ ಕೇವಲ ನನ್ನ ಆಟದ ಮೇಲೆ ಗಮನ ಕೇಂದ್ರಿಕರಿಸಲು ತೆಂಡೂಲ್ಕರ್ ಹೇಳಿದ್ದರು. ನನ್ನ ಆಟದ ಹಳೆಯ ವಿಡಿಯೊಗಳನ್ನು ನೋಡಿ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದ್ದರು. ಈ ಎಲ್ಲ ಸಲಹೆಗಳು ನನಗೆ ನೆರವು ನೀಡಿದವು’ ಎಂದು ಅವರು ತಿಳಿಸಿದ್ದಾರೆ.</p>.<p>ಕಾಮನ್ವೆಲ್ತ್ ನಂತರ ನಡೆದ ಚಾಂಪಿಯನ್ಸ್ ಟ್ರೋಫಿ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ತಂಡಕ್ಕೆ ಮರಳಿದ್ದ ಸರ್ದಾರ್ ಉತ್ತಮ ಸಾಮರ್ಥ್ಯ ತೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕಾಮನ್ವೆಲ್ತ್ ಕ್ರೀಡಾಕೂಟದ ತಂಡದಿಂದ ನನ್ನನ್ನು ಕೈಬಿಟ್ಟಾಗ ಮಾನಸಿಕವಾಗಿ ಕುಸಿದುಹೋಗಿದ್ದೆ. ಈ ವೇಳೆ ನನಗೆ ಧೈರ್ಯ ತುಂಬಿ ಪ್ರೇರೆಪಿಸಿದ್ದು ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್’ ಎಂದು ಹಿರಿಯ ಹಾಕಿ ಆಟಗಾರ ಸರ್ದಾರ್ ಸಿಂಗ್ ಹೇಳಿದ್ದಾರೆ.</p>.<p>32 ವರ್ಷದ ಸರ್ದಾರ್, ಅಂತರರಾಷ್ಟ್ರೀಯ ಹಾಕಿಗೆ ಬುಧವಾರವಷ್ಟೇ ನಿವೃತ್ತಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ನಿರೀಕ್ಷಿತ ಸಾಮರ್ಥ್ಯ ತೋರುವಲ್ಲಿ ತಂಡ ವಿಫಲವಾಗಿದ್ದಕ್ಕೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದರು.</p>.<p>‘ಹಿಂದಿನ 3–4 ತಿಂಗಳಲ್ಲಿ ಸಚಿನ್ ಅನೇಕ ಸಲಹೆಗಳನ್ನು ನೀಡಿದ್ದಾರೆ. ತಂಡದಲ್ಲಿ ಸ್ಥಾನ ಗಳಿಸಲು ವಿಫಲನಾಗಿದ್ದೆ. ಅವು ನನ್ನ ಕಷ್ಟದ ದಿನಗಳು. ಆಗೆಲ್ಲ ಅವರಿಗೆ ಹಲವು ಬಾರಿ ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿದ್ದೆ’ ಎಂದು ಸರ್ದಾರ್ ಸ್ಮರಿಸಿಕೊಂಡಿದ್ದಾರೆ.</p>.<p>‘ವಿಮರ್ಶೆಗೆ ಕುಗ್ಗದೇ ಕೇವಲ ನನ್ನ ಆಟದ ಮೇಲೆ ಗಮನ ಕೇಂದ್ರಿಕರಿಸಲು ತೆಂಡೂಲ್ಕರ್ ಹೇಳಿದ್ದರು. ನನ್ನ ಆಟದ ಹಳೆಯ ವಿಡಿಯೊಗಳನ್ನು ನೋಡಿ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದ್ದರು. ಈ ಎಲ್ಲ ಸಲಹೆಗಳು ನನಗೆ ನೆರವು ನೀಡಿದವು’ ಎಂದು ಅವರು ತಿಳಿಸಿದ್ದಾರೆ.</p>.<p>ಕಾಮನ್ವೆಲ್ತ್ ನಂತರ ನಡೆದ ಚಾಂಪಿಯನ್ಸ್ ಟ್ರೋಫಿ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ತಂಡಕ್ಕೆ ಮರಳಿದ್ದ ಸರ್ದಾರ್ ಉತ್ತಮ ಸಾಮರ್ಥ್ಯ ತೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>