ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣೀತ್‌ಗೆ ಕೋವಿಡ್‌: ಇಂಡಿಯನ್ ಓಪನ್ ಸೂಪರ್‌ 500 ಟೂರ್ನಿಯಿಂದ ಹೊರಗೆ

Last Updated 10 ಜನವರಿ 2022, 4:14 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಬಿ.ಸಾಯ್ ಪ್ರಣೀತ್‌ ಅವರಿಗೆ ಕೋವಿಡ್–19 ಇರುವುದ ದೃಢಪಟ್ಟಿದ್ದು ಇಂಡಿಯನ್ ಓಪನ್ ಸೂಪರ್‌ 500 ಟೂರ್ನಿಯಿಂದ ಹೊರಗೆ ಉಳಿಯಲಿದ್ದಾರೆ.ಈ ವಿಷಯವನ್ನು ಭಾನುವಾರ ಅವರೇ ಸ್ಪಷ್ಟಪಡಿಸಿದ್ದಾರೆ. ಟೂರ್ನಿಯಲ್ಲಿ ಅವರು ಆಡುವುದಿಲ್ಲ ಎಂದು ಭಾರತ ಬ್ಯಾಡ್ಮಿಂಟನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ಕೂಡ ತಿಳಿಸಿದ್ದಾರೆ.

ಧ್ರುವ್ ರಾವತ್‌ ಕೂಡ ಸೋಂಕಿಗೆ ಒಳಗಾಗಿದ್ದಾರೆ ಎಂದಿದ್ದಾರೆ.

ಪಿ.ವಿ.ಸಿಂಧು ಮತ್ತು ಕಿದಂಬಿ ಶ್ರೀಕಾಂತ್ ಅವರಿಗೆ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಅಗ್ರ ಶ್ರೇಯಾಂಕ ನೀಡಲಾಗಿದ್ದು ಸಿಂಧು ಈಗಾಗಲೇ ಇಲ್ಲಿಗೆ ಬಂದಿಳಿದಿದ್ದಾರೆ. ಯುವ ಆಟಗಾರ ಲಕ್ಷ್ಯ ಸೇನ್ ಕೂಡ ಬಂದಿದ್ದಾರೆ. ಇದೇ 11ರಂದು ಟೂರ್ನಿ ಆರಂಭವಾಗಲಿದ್ದು ಪ್ರೇಕ್ಷಕರಿಗೆ ಅವಕಾಶವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT