<p><strong>ನವದೆಹಲಿ: </strong>ದೇಶದಾದ್ಯಂತ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ನಿರ್ಧರಿಸಿದೆ. ಆದರೆ ಎಲೀಟ್ ಅಥ್ಲೀಟ್ಗಳ ರಾಷ್ಟ್ರೀಯ ಶಿಬಿರಗಳು ಬಯೋಬಬಲ್ ವ್ಯವಸ್ಥೆಯಲ್ಲಿ ಮುಂದುವರಿಯಲಿವೆ.</p>.<p>ಪಟಿಯಾಲ ಮತ್ತು ಬೆಂಗಳೂರಿನಲ್ಲಿರುವಂತಹ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳ ಮೇಲೆ (ಎನ್ಸಿಒಇ)ಈ ನಿರ್ಧಾರವು ಪರಿಣಾಮ ಬೀರುವುದಿಲ್ಲ, ಅಲ್ಲಿರುವ ಎಲೀಟ್ ಕ್ರೀಡಾಪಟುಗಳಿಗೆ ವಿವಿಧ ವಿಭಾಗಗಳಲ್ಲಿ ಶಿಬಿರಗಳು ಪ್ರಗತಿಯಲ್ಲಿವೆ.</p>.<p>‘ಕೋವಿಡ್ಪ್ರಕರಣಗಳು ಹೆಚ್ಚುತ್ತಿರುವ ದೃಷ್ಟಿಯಿಂದ, ದೇಶದಾದ್ಯಂತ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.ಕ್ರೀಡಾಪಟುಗಳ ಸುರಕ್ಷತೆಗಾಗಿ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ವಿವಿಧ ರಾಜ್ಯಗಳು ನೀಡಿದ ನಿರ್ದೇಶನಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ‘ ಎಂದು ಸಾಯ್ ತಿಳಿಸಿದೆ.</p>.<p>ಹಲವು ತರಬೇತಿ ಕೇಂದ್ರಗಳಲ್ಲಿರುವ ಅಥ್ಲೀಟ್ಗಳಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.</p>.<p>ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ತರಬೇತಿ ಕೇಂದ್ರಗಳನ್ನು ಪುನರಾರಂಭಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಾದ್ಯಂತ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ನಿರ್ಧರಿಸಿದೆ. ಆದರೆ ಎಲೀಟ್ ಅಥ್ಲೀಟ್ಗಳ ರಾಷ್ಟ್ರೀಯ ಶಿಬಿರಗಳು ಬಯೋಬಬಲ್ ವ್ಯವಸ್ಥೆಯಲ್ಲಿ ಮುಂದುವರಿಯಲಿವೆ.</p>.<p>ಪಟಿಯಾಲ ಮತ್ತು ಬೆಂಗಳೂರಿನಲ್ಲಿರುವಂತಹ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳ ಮೇಲೆ (ಎನ್ಸಿಒಇ)ಈ ನಿರ್ಧಾರವು ಪರಿಣಾಮ ಬೀರುವುದಿಲ್ಲ, ಅಲ್ಲಿರುವ ಎಲೀಟ್ ಕ್ರೀಡಾಪಟುಗಳಿಗೆ ವಿವಿಧ ವಿಭಾಗಗಳಲ್ಲಿ ಶಿಬಿರಗಳು ಪ್ರಗತಿಯಲ್ಲಿವೆ.</p>.<p>‘ಕೋವಿಡ್ಪ್ರಕರಣಗಳು ಹೆಚ್ಚುತ್ತಿರುವ ದೃಷ್ಟಿಯಿಂದ, ದೇಶದಾದ್ಯಂತ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.ಕ್ರೀಡಾಪಟುಗಳ ಸುರಕ್ಷತೆಗಾಗಿ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ವಿವಿಧ ರಾಜ್ಯಗಳು ನೀಡಿದ ನಿರ್ದೇಶನಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ‘ ಎಂದು ಸಾಯ್ ತಿಳಿಸಿದೆ.</p>.<p>ಹಲವು ತರಬೇತಿ ಕೇಂದ್ರಗಳಲ್ಲಿರುವ ಅಥ್ಲೀಟ್ಗಳಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.</p>.<p>ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ತರಬೇತಿ ಕೇಂದ್ರಗಳನ್ನು ಪುನರಾರಂಭಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>