<p><strong>ನವದೆಹಲಿ</strong>: ಭಾರತ ಕುಸ್ತಿ ಫೆಡರೇಷನ್ನ ಅಡ್ಹಾಕ್ ಸಮಿತಿಯು ಜೈಪುರದಲ್ಲಿ ಅಯೋಜಿಸಿರುವ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಕುಸ್ತಿಪಟುಗಳು ಸ್ಪರ್ಧಿಸಿ. ಆದರೆ ಅಮಾನತುಗೊಂಡಿರುವ ಸಂಜಯ್ ಸಿಂಗ್ ನೇತೃತ್ವದ ಸಮಿತಿಯು ಪುಣೆಯಲ್ಲಿ ನಡೆಸಲಿರುವ ಟೂರ್ನಿಯಲ್ಲಿ ಬೇಡ ಎಂದು ಒಲಿಂಪಿಯನ್ ಸಾಕ್ಷಿ ಮಲಿಕ್ ಹೇಳಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹೇಳಿಕೆ ನೀಡಿರುವ ಅವರು, ‘ಅಡ್ಹಾಕ್ ಸಮಿತಿಯು ನಡೆಸಲಿರುವ ಟೂರ್ನಿಯು ಅಧಿಕೃತವಾಗಿದೆ. ಅಮಾನತುಗೊಂಡಿರುವ ಸಮಿತಿಯಿಂದ ನಡೆಸುವ ಟೂರ್ನಿಯಲ್ಲಿ ಭಾಗವಹಿಸಬೇಡಿ’ ಎಂದಿದ್ದಾರೆ.</p>.<p>ಜೈಪುರದಲ್ಲಿ ರಾಷ್ಟ್ರೀಯ ಚಾಂಪಿಯನ್ಷಿಪ್ ಫೆ.2ರಿಂದ 5ರವರೆಗೆ ನಡೆಯಲಿದೆ.</p>.<p>ಈಚೆಗೆ ಡಬ್ಲ್ಯುಎಫ್ಐಗೆ ನಡೆದಿದ್ದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಗುಂಪು ಗೆಲುವು ಸಾಧಿಸಿತ್ತು. ಆದರೆ ರಾಷ್ಟ್ರೀಯ ಚಾಂಪಿಯನ್ಷಿಪ್ಗಳನ್ನು ತರಾತುರಿಯಲ್ಲಿ ಘೋಷಿಸಿದ್ದು ನಿಯಮಬಾಹಿರ ಎಂದು ಆಕ್ಷೇಪಿಸಿದ್ದ ಕೇಂದ್ರ ಕ್ರೀಡಾ ಸಚಿವಾಲಯವು ಸಂಜಯ್ ಅಧ್ಯಕ್ಷತೆಯ ಆಡಳಿತ ಸಮಿತಿಯನ್ನು ಅಮಾನತುಗೊಳಿಸಿತ್ತು.</p>.<p>ಇದರಿಂದಾಗಿ ಭಾರತ ಒಲಿಂಪಿಕ್ ಸಂಸ್ಥೆ (ಐಒಎ)ಯು ಭೂಪಿಂದರ್ ಸಿಂಗ್ ಬಜ್ವಾ ನೇತೃತ್ವದ ಅಡ್ಹಾಕ್ ಸಮಿತಿಯನ್ನು ರಚಿಸಿತ್ತು.</p>.<p>ಆದರೆ ಕೆಲವು ಕುಸ್ತಿಪಟುಗಳು ಪುಣೆಯಲ್ಲಿ ನಡೆಯಲಿರುವ ಟೂರ್ನಿಗೆ ಹೋಗುವುದಾಗಿ ಈಗಾಗಲೇ ಘೋಷಿಸಿದ್ದಾರೆ. </p>.<p>‘ಡಬ್ಲ್ಯುಎಫ್ಐ ಪುಣೆಯಲ್ಲಿ ಸಂಘಟಿಸಲಿರುವ ಟೂರ್ನಿಯಲ್ಲಿ ಆಡುತ್ತೇವೆ. ನಮ್ಮ ಅಖಾಡದ ಎಲ್ಲರೂ ಅಲ್ಲಿಗೆ ಹೋಗುತ್ತೇವೆ. ಈ ವಿವಾದವು ಹರಿಯಾಣಕ್ಕೆ ಮಾತ್ರ ಸೀಮಿತವಾಗಿದೆ. ದೆಹಲಿ, ಪಂಜಾಬ್ ಮತ್ತು ರಾಜಸ್ಥಾನದ ಎಲ್ಲ ಕುಸ್ತಿಪಟುಗಳೂ ಪುಣೆಗೆ ಹೋಗುತ್ತಿದ್ದಾರೆ‘ ಎಂದು ರೋಹ್ಟಕ್ನ ಹೆಸರು ಹೇಳಲು ಇಚ್ಛಿಸದ ಮಹಿಳಾ ಕುಸ್ತಿಪಟು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಕುಸ್ತಿ ಫೆಡರೇಷನ್ನ ಅಡ್ಹಾಕ್ ಸಮಿತಿಯು ಜೈಪುರದಲ್ಲಿ ಅಯೋಜಿಸಿರುವ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಕುಸ್ತಿಪಟುಗಳು ಸ್ಪರ್ಧಿಸಿ. ಆದರೆ ಅಮಾನತುಗೊಂಡಿರುವ ಸಂಜಯ್ ಸಿಂಗ್ ನೇತೃತ್ವದ ಸಮಿತಿಯು ಪುಣೆಯಲ್ಲಿ ನಡೆಸಲಿರುವ ಟೂರ್ನಿಯಲ್ಲಿ ಬೇಡ ಎಂದು ಒಲಿಂಪಿಯನ್ ಸಾಕ್ಷಿ ಮಲಿಕ್ ಹೇಳಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹೇಳಿಕೆ ನೀಡಿರುವ ಅವರು, ‘ಅಡ್ಹಾಕ್ ಸಮಿತಿಯು ನಡೆಸಲಿರುವ ಟೂರ್ನಿಯು ಅಧಿಕೃತವಾಗಿದೆ. ಅಮಾನತುಗೊಂಡಿರುವ ಸಮಿತಿಯಿಂದ ನಡೆಸುವ ಟೂರ್ನಿಯಲ್ಲಿ ಭಾಗವಹಿಸಬೇಡಿ’ ಎಂದಿದ್ದಾರೆ.</p>.<p>ಜೈಪುರದಲ್ಲಿ ರಾಷ್ಟ್ರೀಯ ಚಾಂಪಿಯನ್ಷಿಪ್ ಫೆ.2ರಿಂದ 5ರವರೆಗೆ ನಡೆಯಲಿದೆ.</p>.<p>ಈಚೆಗೆ ಡಬ್ಲ್ಯುಎಫ್ಐಗೆ ನಡೆದಿದ್ದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಗುಂಪು ಗೆಲುವು ಸಾಧಿಸಿತ್ತು. ಆದರೆ ರಾಷ್ಟ್ರೀಯ ಚಾಂಪಿಯನ್ಷಿಪ್ಗಳನ್ನು ತರಾತುರಿಯಲ್ಲಿ ಘೋಷಿಸಿದ್ದು ನಿಯಮಬಾಹಿರ ಎಂದು ಆಕ್ಷೇಪಿಸಿದ್ದ ಕೇಂದ್ರ ಕ್ರೀಡಾ ಸಚಿವಾಲಯವು ಸಂಜಯ್ ಅಧ್ಯಕ್ಷತೆಯ ಆಡಳಿತ ಸಮಿತಿಯನ್ನು ಅಮಾನತುಗೊಳಿಸಿತ್ತು.</p>.<p>ಇದರಿಂದಾಗಿ ಭಾರತ ಒಲಿಂಪಿಕ್ ಸಂಸ್ಥೆ (ಐಒಎ)ಯು ಭೂಪಿಂದರ್ ಸಿಂಗ್ ಬಜ್ವಾ ನೇತೃತ್ವದ ಅಡ್ಹಾಕ್ ಸಮಿತಿಯನ್ನು ರಚಿಸಿತ್ತು.</p>.<p>ಆದರೆ ಕೆಲವು ಕುಸ್ತಿಪಟುಗಳು ಪುಣೆಯಲ್ಲಿ ನಡೆಯಲಿರುವ ಟೂರ್ನಿಗೆ ಹೋಗುವುದಾಗಿ ಈಗಾಗಲೇ ಘೋಷಿಸಿದ್ದಾರೆ. </p>.<p>‘ಡಬ್ಲ್ಯುಎಫ್ಐ ಪುಣೆಯಲ್ಲಿ ಸಂಘಟಿಸಲಿರುವ ಟೂರ್ನಿಯಲ್ಲಿ ಆಡುತ್ತೇವೆ. ನಮ್ಮ ಅಖಾಡದ ಎಲ್ಲರೂ ಅಲ್ಲಿಗೆ ಹೋಗುತ್ತೇವೆ. ಈ ವಿವಾದವು ಹರಿಯಾಣಕ್ಕೆ ಮಾತ್ರ ಸೀಮಿತವಾಗಿದೆ. ದೆಹಲಿ, ಪಂಜಾಬ್ ಮತ್ತು ರಾಜಸ್ಥಾನದ ಎಲ್ಲ ಕುಸ್ತಿಪಟುಗಳೂ ಪುಣೆಗೆ ಹೋಗುತ್ತಿದ್ದಾರೆ‘ ಎಂದು ರೋಹ್ಟಕ್ನ ಹೆಸರು ಹೇಳಲು ಇಚ್ಛಿಸದ ಮಹಿಳಾ ಕುಸ್ತಿಪಟು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>