<p><strong>ಕೋಲ್ಕತ್ತ:</strong> ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಪ್ರಸಿದ್ಧ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಕೋಲ್ಕತ್ತ ಭೇಟಿಯ ವೇಳೆ ಸಾಲ್ಟ್ ಲೇಕ್ ಮೈದಾನದಿಂದ ನಿಗದಿತ ಸಮಯಕ್ಕಿಂತ ಮುನ್ನವೇ ನಿರ್ಗಮಿಸಿದ್ದರಿಂದ, ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಆಕ್ರೋಶಗೊಂಡು ಬಾಟಲ್ ಹಾಗೂ ಕುರ್ಚಿಗಳನ್ನು ಮೈದಾನದತ್ತ ಎಸೆದಿದ್ದಾರೆ. </p><p>ಉದ್ರಿಕ್ತ ಅಭಿಮಾನಿಗಳು ಮೈದಾನದೊಳಗೆ ನುಗ್ಗಿ ದಾಂಧಲೆ ಮಾಡುತ್ತಿರುವ ಹಾಗೂ ಪೊಲೀಸರು ಲಾಠಿಚಾರ್ಜ್ ಮಾಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. </p><p>ಸಾಲ್ಟ್ ಲೇಕ್ ಮೈದಾನದಲ್ಲಿ ನಡೆದ ಘಟನೆಯು, ಈ ಹಿಂದೆ ಕೋಲ್ಕತ್ತದ ಕ್ರೀಡಾಂಗಣಗಳಲ್ಲಿ ನಡೆದ ಗಲಭೆಗಳನ್ನು ನೆನಪಿಸಿದೆ.</p>.Messi In India: ರಣರಂಗವಾಯ್ತು ಕ್ರೀಡಾಂಗಣ; ಮಮತಾ ವಿರುದ್ಧ ಬಿಜೆಪಿ ಕಿಡಿ.<h3><strong>ವಿಶ್ವಕಪ್ ಪಂದ್ಯದ ವೇಳೆ ಈಡನ್ ಗಾರ್ಡನ್ನಲ್ಲಿ ಗಲಾಟೆ</strong></h3><p>ಅದು 1996ರ ಮಾರ್ಚ್ 13. ಭಾರತದ ಆತಿಥ್ಯದಲ್ಲಿ ನಡೆಯುತ್ತಿದ್ದ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯ ಕೋಲ್ಕತ್ತದ ಈಡನ್ ಗಾರ್ಡನ್ನಲ್ಲಿ ಆಯೋಜನೆಗೊಂಡಿತ್ತು. </p><p>ಅತಿಥೇಯ ಭಾರತ ಹಾಗೂ ಶ್ರೀಲಂಕಾ ತಂಡಗಳು ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಭಾರತ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. </p><p>ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು ಅರವಿಂದ ಡಿ ಸಿಲ್ವ (66 ರನ್) ಹಾಗೂ ರೋಷನ್ ಮಹಾನಾಮ (58 ರನ್) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 50 ಓವರ್ಗಳ ಅಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು.</p><p>252 ರನ್ಗಳ ಗುರಿ ಬೆನ್ನತ್ತಿದ್ದ ಭಾರತ ತಂಡವು ಸಚಿನ್ ತೆಂಡೂಲ್ಕರ್ (65 ರನ್) ಆಟದ ನೆರವಿನಿಂದ ಮೊದಲ ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿತ್ತು.</p><p>ಆದರೆ, ತೆಂಡೂಲ್ಕರ್ ವಿಕೆಟ್ ಒಪ್ಪಿಸುತ್ತಿದ್ದಂತೆ, ನಾಟಕೀಯ ಕುಸಿತ ಕಂಡಿತ್ತು. ಕೇವಲ 22 ರನ್ಗಳ ಅಂತರದಲ್ಲಿ 7 ವಿಕೆಟ್ ಕಳೆದುಕೊಂಡಿತ್ತು. </p><p>34.1 ಓವರ್ಗಳ ಅಂತ್ಯಕ್ಕೆ 120 ರನ್ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು.</p><p>ಭಾರತವು ಪಂದ್ಯವನ್ನು ಸೋಲುತ್ತದೆ ಎನ್ನುವ ನಿರಾಸೆಯಲ್ಲಿ ಕ್ರೀಡಾಂಗಣದಲ್ಲಿದ್ದ ಒಂದು ಲಕ್ಷಕ್ಕೂ ಅಭಿಮಾನಿಗಳು ಆಕ್ರೋಶಗೊಂಡು ಮೈದಾನದತ್ತ ಬಾಟಲ್, ಕುರ್ಚಿ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಡತೊಡಗಿದರು. </p><p>ಇದೇ ವೇಳೆ ಕ್ರೀಡಾಂಗಣದ ಸ್ಟಾಂಡ್ಗಳಲ್ಲಿ ಬೆಂಕಿ ಕೂಡ ಕಾಣಿಸಿಕೊಂಡ ಕಾರಣ, ಪಂದ್ಯವನ್ನು 20 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.</p><p>ಆದರೆ, ಅಧಿಕಾರಿಗಳು ಅಪಾರ ಸಂಖ್ಯೆಯಲ್ಲಿದ್ದ ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣ, ಮ್ಯಾಚ್ ರೆಫ್ರಿ ಕ್ಲೈವ್ ಲಾಯ್ಡ್ ಪಂದ್ಯವನ್ನು ಶ್ರೀಲಂಕಾ ಗೆದ್ದಿದೆ ಎಂದು ಘೋಷಿಸಿದರು. ಫೈನಲ್ನಲ್ಲಿ ಆಸ್ಟೇಲಿಯಾ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದ ಶ್ರೀಲಂಕಾ ತಂಡವು ವಿಶ್ವಕಪ್ ಮುಡಿಗೇರಿಸಿಕೊಂಡಿತು.</p><p>1996ರ ವಿಶ್ವಕಪ್ ಸೆಮಿಫೈನಲ್ ಘಟನೆಯು ಭಾರತದ ಕ್ರಿಕೆಟ್ ಇತಿಹಾಸದ ಕರಾಳ ಘಟನೆಗಳಲ್ಲಿ ಒಂದಾಗಿದೆ.</p>.ವಿಡಿಯೊ | ಕಾದರೂ ಸಿಗಲಿಲ್ಲ ಮೆಸ್ಸಿ: ಕೋಲ್ಕತ್ತದ ಅಭಿಮಾನಿಗಳಲ್ಲಿ ನಿರಾಸೆ.<h3><strong>ಫುಟ್ಬಾಲ್ ಪಂದ್ಯದಲ್ಲಿ ನಡೆದ ಕಾಲ್ತುಳಿತದಲ್ಲಿ ಸತ್ತಿದ್ದರು 16 ಜನ</strong></h3><p>1980ರಲ್ಲಿ ಆ.16ರಂದು ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ಫುಟ್ಬಾಲ್ ಅಂಗಳದ ಬದ್ಧವೈರಿಗಳಾದ ಈಸ್ಟ್ ಬೆಂಗಾಲ್ ಮತ್ತು ಮೋಹನ್ ಬಾಗನ್ ನಡುವಿನ ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣ ಜರುಗಿದ ಕಾಲ್ತುಳಿತದಲ್ಲಿ 16 ಜನರು ಮೃತಪಟ್ಟಿದ್ದರು.</p><p>ಭಾರತದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ನಡೆದ ಅತಿ ದೊಡ್ಡ ದುರಂತ ಇದಾಗಿದೆ. ಈ ಘಟನೆಯ ನೆನಪಿಗಾಗಿ ಆ.16 ಅನ್ನು ‘ಫುಟ್ಬಾಲ್ ಪ್ರೇಮಿಗಳ ದಿನ’ ಎಂದು ಗುರುತಿಸಲಾಗುತ್ತದೆ. </p>.ಕೋಲ್ಕತ್ತದಲ್ಲಿ ಮೆಸ್ಸಿ ಮೇನಿಯಾ: ನೆಚ್ಚಿನ ತಾರೆ ನೋಡಲು ಜನರ ನೂಕುನುಗ್ಗಲು.ಕೋಲ್ಕತ್ತ | ಮೆಸ್ಸಿ ಕಾರ್ಯಕ್ರಮದಲ್ಲಿ ಗದ್ದಲ: ಕ್ಷಮೆ ಕೋರಿದ ಮಮತಾ; ತನಿಖೆಗೆ ಆದೇಶ.ಮೆಸ್ಸಿ ಸುತ್ತಲೂ ರಾಜಕಾರಣಿಗಳ ದಂಡು: ಮೈದಾನಕ್ಕೆ ಬಾಟಲಿ,ಕುರ್ಚಿ ಎಸೆದ ಅಭಿಮಾನಿಗಳು.ಮೆಸ್ಸಿ ಕಾರ್ಯಕ್ರಮದ ವೇಳೆ ಅವ್ಯವಸ್ಥೆ: ಸಂಘಟನೆಯ ರೂವಾರಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಪ್ರಸಿದ್ಧ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಕೋಲ್ಕತ್ತ ಭೇಟಿಯ ವೇಳೆ ಸಾಲ್ಟ್ ಲೇಕ್ ಮೈದಾನದಿಂದ ನಿಗದಿತ ಸಮಯಕ್ಕಿಂತ ಮುನ್ನವೇ ನಿರ್ಗಮಿಸಿದ್ದರಿಂದ, ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಆಕ್ರೋಶಗೊಂಡು ಬಾಟಲ್ ಹಾಗೂ ಕುರ್ಚಿಗಳನ್ನು ಮೈದಾನದತ್ತ ಎಸೆದಿದ್ದಾರೆ. </p><p>ಉದ್ರಿಕ್ತ ಅಭಿಮಾನಿಗಳು ಮೈದಾನದೊಳಗೆ ನುಗ್ಗಿ ದಾಂಧಲೆ ಮಾಡುತ್ತಿರುವ ಹಾಗೂ ಪೊಲೀಸರು ಲಾಠಿಚಾರ್ಜ್ ಮಾಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. </p><p>ಸಾಲ್ಟ್ ಲೇಕ್ ಮೈದಾನದಲ್ಲಿ ನಡೆದ ಘಟನೆಯು, ಈ ಹಿಂದೆ ಕೋಲ್ಕತ್ತದ ಕ್ರೀಡಾಂಗಣಗಳಲ್ಲಿ ನಡೆದ ಗಲಭೆಗಳನ್ನು ನೆನಪಿಸಿದೆ.</p>.Messi In India: ರಣರಂಗವಾಯ್ತು ಕ್ರೀಡಾಂಗಣ; ಮಮತಾ ವಿರುದ್ಧ ಬಿಜೆಪಿ ಕಿಡಿ.<h3><strong>ವಿಶ್ವಕಪ್ ಪಂದ್ಯದ ವೇಳೆ ಈಡನ್ ಗಾರ್ಡನ್ನಲ್ಲಿ ಗಲಾಟೆ</strong></h3><p>ಅದು 1996ರ ಮಾರ್ಚ್ 13. ಭಾರತದ ಆತಿಥ್ಯದಲ್ಲಿ ನಡೆಯುತ್ತಿದ್ದ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯ ಕೋಲ್ಕತ್ತದ ಈಡನ್ ಗಾರ್ಡನ್ನಲ್ಲಿ ಆಯೋಜನೆಗೊಂಡಿತ್ತು. </p><p>ಅತಿಥೇಯ ಭಾರತ ಹಾಗೂ ಶ್ರೀಲಂಕಾ ತಂಡಗಳು ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಭಾರತ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. </p><p>ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು ಅರವಿಂದ ಡಿ ಸಿಲ್ವ (66 ರನ್) ಹಾಗೂ ರೋಷನ್ ಮಹಾನಾಮ (58 ರನ್) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 50 ಓವರ್ಗಳ ಅಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು.</p><p>252 ರನ್ಗಳ ಗುರಿ ಬೆನ್ನತ್ತಿದ್ದ ಭಾರತ ತಂಡವು ಸಚಿನ್ ತೆಂಡೂಲ್ಕರ್ (65 ರನ್) ಆಟದ ನೆರವಿನಿಂದ ಮೊದಲ ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿತ್ತು.</p><p>ಆದರೆ, ತೆಂಡೂಲ್ಕರ್ ವಿಕೆಟ್ ಒಪ್ಪಿಸುತ್ತಿದ್ದಂತೆ, ನಾಟಕೀಯ ಕುಸಿತ ಕಂಡಿತ್ತು. ಕೇವಲ 22 ರನ್ಗಳ ಅಂತರದಲ್ಲಿ 7 ವಿಕೆಟ್ ಕಳೆದುಕೊಂಡಿತ್ತು. </p><p>34.1 ಓವರ್ಗಳ ಅಂತ್ಯಕ್ಕೆ 120 ರನ್ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು.</p><p>ಭಾರತವು ಪಂದ್ಯವನ್ನು ಸೋಲುತ್ತದೆ ಎನ್ನುವ ನಿರಾಸೆಯಲ್ಲಿ ಕ್ರೀಡಾಂಗಣದಲ್ಲಿದ್ದ ಒಂದು ಲಕ್ಷಕ್ಕೂ ಅಭಿಮಾನಿಗಳು ಆಕ್ರೋಶಗೊಂಡು ಮೈದಾನದತ್ತ ಬಾಟಲ್, ಕುರ್ಚಿ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಡತೊಡಗಿದರು. </p><p>ಇದೇ ವೇಳೆ ಕ್ರೀಡಾಂಗಣದ ಸ್ಟಾಂಡ್ಗಳಲ್ಲಿ ಬೆಂಕಿ ಕೂಡ ಕಾಣಿಸಿಕೊಂಡ ಕಾರಣ, ಪಂದ್ಯವನ್ನು 20 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.</p><p>ಆದರೆ, ಅಧಿಕಾರಿಗಳು ಅಪಾರ ಸಂಖ್ಯೆಯಲ್ಲಿದ್ದ ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣ, ಮ್ಯಾಚ್ ರೆಫ್ರಿ ಕ್ಲೈವ್ ಲಾಯ್ಡ್ ಪಂದ್ಯವನ್ನು ಶ್ರೀಲಂಕಾ ಗೆದ್ದಿದೆ ಎಂದು ಘೋಷಿಸಿದರು. ಫೈನಲ್ನಲ್ಲಿ ಆಸ್ಟೇಲಿಯಾ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದ ಶ್ರೀಲಂಕಾ ತಂಡವು ವಿಶ್ವಕಪ್ ಮುಡಿಗೇರಿಸಿಕೊಂಡಿತು.</p><p>1996ರ ವಿಶ್ವಕಪ್ ಸೆಮಿಫೈನಲ್ ಘಟನೆಯು ಭಾರತದ ಕ್ರಿಕೆಟ್ ಇತಿಹಾಸದ ಕರಾಳ ಘಟನೆಗಳಲ್ಲಿ ಒಂದಾಗಿದೆ.</p>.ವಿಡಿಯೊ | ಕಾದರೂ ಸಿಗಲಿಲ್ಲ ಮೆಸ್ಸಿ: ಕೋಲ್ಕತ್ತದ ಅಭಿಮಾನಿಗಳಲ್ಲಿ ನಿರಾಸೆ.<h3><strong>ಫುಟ್ಬಾಲ್ ಪಂದ್ಯದಲ್ಲಿ ನಡೆದ ಕಾಲ್ತುಳಿತದಲ್ಲಿ ಸತ್ತಿದ್ದರು 16 ಜನ</strong></h3><p>1980ರಲ್ಲಿ ಆ.16ರಂದು ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ಫುಟ್ಬಾಲ್ ಅಂಗಳದ ಬದ್ಧವೈರಿಗಳಾದ ಈಸ್ಟ್ ಬೆಂಗಾಲ್ ಮತ್ತು ಮೋಹನ್ ಬಾಗನ್ ನಡುವಿನ ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣ ಜರುಗಿದ ಕಾಲ್ತುಳಿತದಲ್ಲಿ 16 ಜನರು ಮೃತಪಟ್ಟಿದ್ದರು.</p><p>ಭಾರತದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ನಡೆದ ಅತಿ ದೊಡ್ಡ ದುರಂತ ಇದಾಗಿದೆ. ಈ ಘಟನೆಯ ನೆನಪಿಗಾಗಿ ಆ.16 ಅನ್ನು ‘ಫುಟ್ಬಾಲ್ ಪ್ರೇಮಿಗಳ ದಿನ’ ಎಂದು ಗುರುತಿಸಲಾಗುತ್ತದೆ. </p>.ಕೋಲ್ಕತ್ತದಲ್ಲಿ ಮೆಸ್ಸಿ ಮೇನಿಯಾ: ನೆಚ್ಚಿನ ತಾರೆ ನೋಡಲು ಜನರ ನೂಕುನುಗ್ಗಲು.ಕೋಲ್ಕತ್ತ | ಮೆಸ್ಸಿ ಕಾರ್ಯಕ್ರಮದಲ್ಲಿ ಗದ್ದಲ: ಕ್ಷಮೆ ಕೋರಿದ ಮಮತಾ; ತನಿಖೆಗೆ ಆದೇಶ.ಮೆಸ್ಸಿ ಸುತ್ತಲೂ ರಾಜಕಾರಣಿಗಳ ದಂಡು: ಮೈದಾನಕ್ಕೆ ಬಾಟಲಿ,ಕುರ್ಚಿ ಎಸೆದ ಅಭಿಮಾನಿಗಳು.ಮೆಸ್ಸಿ ಕಾರ್ಯಕ್ರಮದ ವೇಳೆ ಅವ್ಯವಸ್ಥೆ: ಸಂಘಟನೆಯ ರೂವಾರಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>