<p><strong>ಶಿಡ್ಲಘಟ್ಟ</strong>: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸೇವಾ ಕೇರಂ ಪಂದ್ಯಾವಳಿಗೆ ನಗರದ ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಮತ್ತು ತಾಲ್ಲೂಕಿನ ಕಂಬದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸುಂದರಾಚಾರಿ ಆಟಗಾರರಾಗಿ ಆಯ್ಕೆಯಾದರು.</p>.<p>ನವದೆಹಲಿ ತ್ಯಾಗರಾಜ ಕ್ರೀಡಾಂಗಣದಲ್ಲಿ ಫೆ.17ರಿಂದ 24ರವರೆಗೆ ನಡೆಯಲಿರುವ ಕೇರಂ ಪಂದ್ಯಾವಳಿಯಲ್ಲಿ 6 ಮಂದಿ ಪುರುಷರ ತಂಡ ಮತ್ತು 6 ಮಂದಿ ಮಹಿಳೆಯರ ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಒಟ್ಟು 12 ಮಂದಿ ತಂಡಕ್ಕೆ ಶಿಡ್ಲಘಟ್ಟದ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಆಯ್ಕೆಯಾಗಿದ್ದು, ಅವರೊಂದಿಗೆ ಒಬ್ಬರು ವ್ಯವಸ್ಥಾಪಕ ಜೊತೆಗಿರುವರು.</p>.<p>ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಶಿಡ್ಲಘಟ್ಟ ತಾಲ್ಲೂಕಿಗೆ ಇವರು ಕೀರ್ತಿ ತಂದಿದ್ದಾರೆ. ಇತರರಿಗೆ ತರಬೇತಿ ನೀಡುವ ಮೂಲಕ ತಾಲ್ಲೂಕಿನಲ್ಲಿ ಕೇರಂ ಆಟದ ಪ್ರತಿಭೆ ಹುಟ್ಟಿಗೆ ಕಾರಣರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ ತಿಳಿಸಿದರು.</p>
<p><strong>ಶಿಡ್ಲಘಟ್ಟ</strong>: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸೇವಾ ಕೇರಂ ಪಂದ್ಯಾವಳಿಗೆ ನಗರದ ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಮತ್ತು ತಾಲ್ಲೂಕಿನ ಕಂಬದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸುಂದರಾಚಾರಿ ಆಟಗಾರರಾಗಿ ಆಯ್ಕೆಯಾದರು.</p>.<p>ನವದೆಹಲಿ ತ್ಯಾಗರಾಜ ಕ್ರೀಡಾಂಗಣದಲ್ಲಿ ಫೆ.17ರಿಂದ 24ರವರೆಗೆ ನಡೆಯಲಿರುವ ಕೇರಂ ಪಂದ್ಯಾವಳಿಯಲ್ಲಿ 6 ಮಂದಿ ಪುರುಷರ ತಂಡ ಮತ್ತು 6 ಮಂದಿ ಮಹಿಳೆಯರ ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಒಟ್ಟು 12 ಮಂದಿ ತಂಡಕ್ಕೆ ಶಿಡ್ಲಘಟ್ಟದ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಆಯ್ಕೆಯಾಗಿದ್ದು, ಅವರೊಂದಿಗೆ ಒಬ್ಬರು ವ್ಯವಸ್ಥಾಪಕ ಜೊತೆಗಿರುವರು.</p>.<p>ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಶಿಡ್ಲಘಟ್ಟ ತಾಲ್ಲೂಕಿಗೆ ಇವರು ಕೀರ್ತಿ ತಂದಿದ್ದಾರೆ. ಇತರರಿಗೆ ತರಬೇತಿ ನೀಡುವ ಮೂಲಕ ತಾಲ್ಲೂಕಿನಲ್ಲಿ ಕೇರಂ ಆಟದ ಪ್ರತಿಭೆ ಹುಟ್ಟಿಗೆ ಕಾರಣರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ ತಿಳಿಸಿದರು.</p>