<p><strong>ಶಿಡ್ಲಘಟ್ಟ</strong>: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸೇವಾ ಕೇರಂ ಪಂದ್ಯಾವಳಿಗೆ ನಗರದ ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಮತ್ತು ತಾಲ್ಲೂಕಿನ ಕಂಬದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸುಂದರಾಚಾರಿ ಆಟಗಾರರಾಗಿ ಆಯ್ಕೆಯಾದರು.</p>.<p>ನವದೆಹಲಿ ತ್ಯಾಗರಾಜ ಕ್ರೀಡಾಂಗಣದಲ್ಲಿ ಫೆ.17ರಿಂದ 24ರವರೆಗೆ ನಡೆಯಲಿರುವ ಕೇರಂ ಪಂದ್ಯಾವಳಿಯಲ್ಲಿ 6 ಮಂದಿ ಪುರುಷರ ತಂಡ ಮತ್ತು 6 ಮಂದಿ ಮಹಿಳೆಯರ ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಒಟ್ಟು 12 ಮಂದಿ ತಂಡಕ್ಕೆ ಶಿಡ್ಲಘಟ್ಟದ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಆಯ್ಕೆಯಾಗಿದ್ದು, ಅವರೊಂದಿಗೆ ಒಬ್ಬರು ವ್ಯವಸ್ಥಾಪಕ ಜೊತೆಗಿರುವರು.</p>.<p>ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಶಿಡ್ಲಘಟ್ಟ ತಾಲ್ಲೂಕಿಗೆ ಇವರು ಕೀರ್ತಿ ತಂದಿದ್ದಾರೆ. ಇತರರಿಗೆ ತರಬೇತಿ ನೀಡುವ ಮೂಲಕ ತಾಲ್ಲೂಕಿನಲ್ಲಿ ಕೇರಂ ಆಟದ ಪ್ರತಿಭೆ ಹುಟ್ಟಿಗೆ ಕಾರಣರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸೇವಾ ಕೇರಂ ಪಂದ್ಯಾವಳಿಗೆ ನಗರದ ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಮತ್ತು ತಾಲ್ಲೂಕಿನ ಕಂಬದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸುಂದರಾಚಾರಿ ಆಟಗಾರರಾಗಿ ಆಯ್ಕೆಯಾದರು.</p>.<p>ನವದೆಹಲಿ ತ್ಯಾಗರಾಜ ಕ್ರೀಡಾಂಗಣದಲ್ಲಿ ಫೆ.17ರಿಂದ 24ರವರೆಗೆ ನಡೆಯಲಿರುವ ಕೇರಂ ಪಂದ್ಯಾವಳಿಯಲ್ಲಿ 6 ಮಂದಿ ಪುರುಷರ ತಂಡ ಮತ್ತು 6 ಮಂದಿ ಮಹಿಳೆಯರ ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಒಟ್ಟು 12 ಮಂದಿ ತಂಡಕ್ಕೆ ಶಿಡ್ಲಘಟ್ಟದ ಟಿ.ಟಿ.ನರಸಿಂಹಪ್ಪ ತರಬೇತುದಾರರಾಗಿ ಆಯ್ಕೆಯಾಗಿದ್ದು, ಅವರೊಂದಿಗೆ ಒಬ್ಬರು ವ್ಯವಸ್ಥಾಪಕ ಜೊತೆಗಿರುವರು.</p>.<p>ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಶಿಡ್ಲಘಟ್ಟ ತಾಲ್ಲೂಕಿಗೆ ಇವರು ಕೀರ್ತಿ ತಂದಿದ್ದಾರೆ. ಇತರರಿಗೆ ತರಬೇತಿ ನೀಡುವ ಮೂಲಕ ತಾಲ್ಲೂಕಿನಲ್ಲಿ ಕೇರಂ ಆಟದ ಪ್ರತಿಭೆ ಹುಟ್ಟಿಗೆ ಕಾರಣರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>