ನವದೆಹಲಿ: ಭಾರತ ಕುಸ್ತಿ ಫೆಡರೇಷನ್ನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಏಕೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.
ಆರೋಪ ಕುರಿತ ತನಿಖೆಯು ಪೂರ್ಣಗೊಳ್ಳುವವರೆಗೂ ಬ್ರಿಜ್ ಭೂಷಣ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸುವುದಿಲ್ಲವೇ? ಚುನಾವಣೆ ದೃಷ್ಟಿಯಿಂದ ಉತ್ತರ ಪ್ರದೇಶದಲ್ಲಿ ಅವರಿಗೆ ಅಷ್ಟೊಂದು ಮಹತ್ವ ಇದೆಯೇ ಎಂದೂ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಅಧ್ಯಕ್ಷ ಸ್ಥಾನದಿಂದ ತೆಗೆಯದಷ್ಟು ಮುಖ್ಯವಾದ ವ್ಯಕ್ತಿಯೆ? ಹಾಗಿದ್ದರೆ ಬೇಟಿ ಬಚಾವೋ ಘೋಷಣೆ ಏನಾಯ್ತು’ ಎಂದು ಕೇಳಿದ್ದಾರೆ.
ಲೈಂಗಿಕ ಕಿರುಕುಳ ಆರೋಪ ಕುರಿತಂತೆ ಏಳು ಮಂದಿ ಕುಸ್ತಿಪಟುಗಳ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ ಹಿಂದೆಯೇ ಸಿಬಲ್ ಈ ಬಗ್ಗೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಕುಸ್ತಿಪಟುಗಳ ಪರವಾಗಿ ಸಿಬಲ್ ಅವರು ವಾದ ಮಂಡಿಸುತ್ತಿದ್ದಾರೆ. ದೆಹಲಿ ಪೊಲೀಸರು ಏಪ್ರಿಲ್ 28ರಂದು ಕುಸ್ತಿ ಫೆಡರೇಷನ್ನ ಮುಖ್ಯಸ್ಥರ ವಿರುದ್ಧ ಎರಡು ಎಫ್ಐಆರ್ ದಾಖಲಿಸಿದ್ದರು.