ಒಡೆನ್ಸ್: ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಕಿದಂಬಿ ಶ್ರೀಕಾಂತ್ ಅವರ ಸವಾಲು ಅಂತ್ಯವಾಗಿದೆ. ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ಫೈನಲ್ ಹಣಾಹಣಿಯಲ್ಲಿ ಅವರು 22–20, 13–21, 16–21ರಿಂದ ತೈಪೆಯ ಚೌ ಟಿನ್ ಚೆನ್ ಅವರಿಗೆ ಸೋತರು. ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲೂ ಕೊನೆಗೊಂಡಿತು.