<p><strong>ಬ್ಯಾಂಕಾಕ್: </strong>ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ಕಿದಂಬಿ ಶ್ರೀಕಾಂತ್ ಅವರ ಕ್ವಾರಂಟೈನ್ ಅವಧಿಯನ್ನು ಒಂದು ವಾರಕ್ಕೆ ಕಡಿತಗೊಳಿಸಿದ್ದರಿಂದ ಅವರು ಭಾನುವಾರ ಅಭ್ಯಾಸಕ್ಕೆ ಮರಳಿದ್ದಾರೆ.</p>.<p>ಸಹ ಆಟಗಾರ ಬಿ.ಸಾಯಿ ಪ್ರಣೀತ್ ಅವರಿಗೆ ಕೋವಿಡ್–19 ದೃಢಪಟ್ಟ ಕಾರಣ ಅವರ ಜೊತೆ ರೂಮ್ ಹಂಚಿಕೊಂಡಿದ್ದ ಶ್ರೀಕಾಂತ್ ಅವರು ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿಯಬೇಕಾಯಿತು. ಅವರಿಗೆ 14 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು.</p>.<p>ಹೋದ ಸೋಮವಾರ ಶ್ರೀಕಾಂತ್ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ’ನೆಗೆಟಿವ್‘ ಬಂದಿತ್ತು. ಭಾರತ ತಂಡದ ಎಲ್ಲ ಆಟಗಾರರಿಗೂ ಸೋಮವಾರ ಕಡ್ಡಾಯ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಬಿಎಐ ಸೂಚಿಸಿದೆ.</p>.<p>ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿಯುವ ಮೊದಲು, ಮೊದಲ ಸುತ್ತಿನಲ್ಲಿ ಶ್ರೀಕಾಂತ್ 21–11, 21–11ರಿಂದ ಥಾಯ್ಲೆಂಡ್ನ ಸಿಥ್ಥಿಕೋಮ್ ತಮಾಸಿನ್ ಅವರನ್ನು ಪರಾಭವಗೊಳಿಸಿದ್ದರು.</p>.<p>ಹೋದ ವಾರ ಕೊನೆಗೊಂಡಿದ್ದ ಮೊದಲ ಥಾಯ್ಲೆಂಡ್ ಓಪನ್ ಟೂರ್ನಿಯಲ್ಲಿ ಬಲಗಾಲಿನ ಮೀನಖಂಡದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಶ್ರೀಕಾಂತ್ ಹಿಂದೆ ಸರಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್: </strong>ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ಕಿದಂಬಿ ಶ್ರೀಕಾಂತ್ ಅವರ ಕ್ವಾರಂಟೈನ್ ಅವಧಿಯನ್ನು ಒಂದು ವಾರಕ್ಕೆ ಕಡಿತಗೊಳಿಸಿದ್ದರಿಂದ ಅವರು ಭಾನುವಾರ ಅಭ್ಯಾಸಕ್ಕೆ ಮರಳಿದ್ದಾರೆ.</p>.<p>ಸಹ ಆಟಗಾರ ಬಿ.ಸಾಯಿ ಪ್ರಣೀತ್ ಅವರಿಗೆ ಕೋವಿಡ್–19 ದೃಢಪಟ್ಟ ಕಾರಣ ಅವರ ಜೊತೆ ರೂಮ್ ಹಂಚಿಕೊಂಡಿದ್ದ ಶ್ರೀಕಾಂತ್ ಅವರು ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿಯಬೇಕಾಯಿತು. ಅವರಿಗೆ 14 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು.</p>.<p>ಹೋದ ಸೋಮವಾರ ಶ್ರೀಕಾಂತ್ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ’ನೆಗೆಟಿವ್‘ ಬಂದಿತ್ತು. ಭಾರತ ತಂಡದ ಎಲ್ಲ ಆಟಗಾರರಿಗೂ ಸೋಮವಾರ ಕಡ್ಡಾಯ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಬಿಎಐ ಸೂಚಿಸಿದೆ.</p>.<p>ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿಯುವ ಮೊದಲು, ಮೊದಲ ಸುತ್ತಿನಲ್ಲಿ ಶ್ರೀಕಾಂತ್ 21–11, 21–11ರಿಂದ ಥಾಯ್ಲೆಂಡ್ನ ಸಿಥ್ಥಿಕೋಮ್ ತಮಾಸಿನ್ ಅವರನ್ನು ಪರಾಭವಗೊಳಿಸಿದ್ದರು.</p>.<p>ಹೋದ ವಾರ ಕೊನೆಗೊಂಡಿದ್ದ ಮೊದಲ ಥಾಯ್ಲೆಂಡ್ ಓಪನ್ ಟೂರ್ನಿಯಲ್ಲಿ ಬಲಗಾಲಿನ ಮೀನಖಂಡದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಶ್ರೀಕಾಂತ್ ಹಿಂದೆ ಸರಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>