<p><strong>ದಾವಣಗೆರೆ</strong>: ಕರ್ನಾಟಕ ಕುಸ್ತಿ ಸಂಘವು ಇದೇ ಮೊದಲ ಬಾರಿಗೆ ತೀರ್ಪುಗಾರರಿಗಾಗಿ ರಾಜ್ಯಮಟ್ಟದ ಕಾರ್ಯಾಗಾರ ಹಮ್ಮಿಕೊಂಡಿದೆ. ಆಗಸ್ಟ್ 24 ಮತ್ತು 25ರಂದು ನಗರದ ಆಂಜನೇಯ ಬಡಾವಣೆಯ ಒಳಾಂಗಣ ಕ್ರೀಡಾಂಗಣ ದಲ್ಲಿ ಕಾರ್ಯಾಗಾರ ನಡೆಯಲಿದೆ. </p><p>‘ಡಬ್ಲ್ಯುಎಫ್ಐನ ಪ್ರತಿನಿಧಿಯೊಬ್ಬರು ಪಾಲ್ಗೊಳ್ಳುತ್ತಿದ್ದು, ತೀರ್ಪುಗಾರರಿಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ. ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿದ ಅನುಭವವುಳ್ಳ 60 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ₹3,000 ಪ್ರವೇಶ ಶುಲ್ಕ ಇದ್ದು, ಇಲ್ಲಿ ತೇರ್ಗಡೆ ಹೊಂದಿದವರಿಗೆ ಪ್ರಮಾಣ ಪತ್ರದೊಂದಿಗೆ ಕಿಟ್ ನೀಡಲಾಗುತ್ತದೆ. ಆ.24ರಂದು ಬೆಳಿಗ್ಗೆ 8 ರಿಂದ 10 ಗಂಟೆಯೊಳಗೆ ಒಳಾಂಗಣ ಕ್ರೀಡಾಂಗಣದಲ್ಲಿ ಹೆಸರು ನೋಂದಾಯಿಸಿಕೊಳ್ಳ ಬಹುದು’ ಎಂದು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.</p><p>ಮಾಹಿತಿಗೆ ಕರ್ನಾಟಕ ಕುಸ್ತಿ ಸಂಘದ ತಾಂತ್ರಿಕ ಸಮಿತಿ ಅಧ್ಯಕ್ಷ ಕೆ. ವಿನೋದ್ ಕುಮಾರ್ (ಮೊ 8971388143) ಸಂಪರ್ಕಿಸಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕರ್ನಾಟಕ ಕುಸ್ತಿ ಸಂಘವು ಇದೇ ಮೊದಲ ಬಾರಿಗೆ ತೀರ್ಪುಗಾರರಿಗಾಗಿ ರಾಜ್ಯಮಟ್ಟದ ಕಾರ್ಯಾಗಾರ ಹಮ್ಮಿಕೊಂಡಿದೆ. ಆಗಸ್ಟ್ 24 ಮತ್ತು 25ರಂದು ನಗರದ ಆಂಜನೇಯ ಬಡಾವಣೆಯ ಒಳಾಂಗಣ ಕ್ರೀಡಾಂಗಣ ದಲ್ಲಿ ಕಾರ್ಯಾಗಾರ ನಡೆಯಲಿದೆ. </p><p>‘ಡಬ್ಲ್ಯುಎಫ್ಐನ ಪ್ರತಿನಿಧಿಯೊಬ್ಬರು ಪಾಲ್ಗೊಳ್ಳುತ್ತಿದ್ದು, ತೀರ್ಪುಗಾರರಿಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ. ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿದ ಅನುಭವವುಳ್ಳ 60 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ₹3,000 ಪ್ರವೇಶ ಶುಲ್ಕ ಇದ್ದು, ಇಲ್ಲಿ ತೇರ್ಗಡೆ ಹೊಂದಿದವರಿಗೆ ಪ್ರಮಾಣ ಪತ್ರದೊಂದಿಗೆ ಕಿಟ್ ನೀಡಲಾಗುತ್ತದೆ. ಆ.24ರಂದು ಬೆಳಿಗ್ಗೆ 8 ರಿಂದ 10 ಗಂಟೆಯೊಳಗೆ ಒಳಾಂಗಣ ಕ್ರೀಡಾಂಗಣದಲ್ಲಿ ಹೆಸರು ನೋಂದಾಯಿಸಿಕೊಳ್ಳ ಬಹುದು’ ಎಂದು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.</p><p>ಮಾಹಿತಿಗೆ ಕರ್ನಾಟಕ ಕುಸ್ತಿ ಸಂಘದ ತಾಂತ್ರಿಕ ಸಮಿತಿ ಅಧ್ಯಕ್ಷ ಕೆ. ವಿನೋದ್ ಕುಮಾರ್ (ಮೊ 8971388143) ಸಂಪರ್ಕಿಸಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>