<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ಆಯೋಜಿಸುವ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ ಜುಲೈ 4ರಿಂದ 7ರ ವರೆಗೆ ನಗರದ ಫಾದರ್ ಮುಲ್ಲರ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.</p>.<p>ಪುರುಷ, ಮಹಿಳೆಯರ, 11, 13, 15, 17, 19 ವರ್ಷದೊಳಗಿನವರ ವಿಭಾಗ ಮತ್ತು ನಾನ್ ಮೆಡಲಿಸ್ಟ್ ಮತ್ತು ಕೆಡೆಟ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ ಎಂದು ಸಂಸ್ಥೆಯ ಅಧ್ಯಕ್ಷ ಗೌತಮ್ ಶೆಟ್ಟಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜ್ಯ ರ್ಯಾಂಕಿಂಗ್ ಪಟ್ಟಿಯಲ್ಲಿರುವ ಮಂಗಳೂರಿನ ತ್ರಿಶಾ ಕರ್ಕೇರ ಮತ್ತು ಏಂಜಲಿನ್ ಅವರು 13 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ, 15 ವರ್ಷದೊಳಗಿನವರ ವಿಭಾಗದ ಅಥರ್ವ ನವರಂಗೆ ಮತ್ತು 17 ವರ್ಷದೊಳಗಿನವರ ವಿಭಾಗದ ಪ್ರೇಕ್ಷಾ ತಿಲಾವತ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ ಎಂದು ಅವರು ವಿವರಿಸಿದರು.</p>.<p>ಇದು ಈ ಋತುವಿನಲ್ಲಿ ರಾಜ್ಯದ ಎರಡನೇ ರ್ಯಾಂಕಿಂಗ್ ಟೂರ್ನಿಯಾಗಿದೆ. ಎಂಟು ವರ್ಷಗಳ ಹಿಂದೆ ಹಳೆಯಂಗಡಿಯ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ರಾಜ್ಯ ರ್ಯಾಂಕಿಂಗ್ ಟೂರ್ನಿ ಆಯೋಜಿಸಲಾಗಿತ್ತು. ಆ ನಂತರ ಉತ್ತಮ ಕ್ರೀಡಾಪಟುಗಳು ಬೆಳಕಿಗೆ ಬಂದಿದ್ದರು. ಈಗ ಜಿಲ್ಲೆಯಲ್ಲಿ ಟೇಬಲ್ ಟೆನಿಸ್ಗೆ ಉತ್ತೇಜನ ನೀಡಲು ಮತ್ತೊಮ್ಮೆ ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ಕೋಚ್ ಹಾಗೂ ಸಂಸ್ಥೆಯ ಕಾರ್ಯದರ್ಶಿ ಅಶ್ವಿನ್ ಕುಮಾರ್ ಪಡುಕೋಣೆ, ಸಂಘಟನಾ ಸಮಿತಿಯ ಅರ್ಚನಾ, ಕ್ಲಾರಾ ಮರಿಯ, ಪ್ರದೀಪ್, ನಿತೀಶ್ ಪಿ.ಎಂ ಮತ್ತು ಎಲ್ಸನ್ ನೊರೋನ್ಹ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ಆಯೋಜಿಸುವ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ ಜುಲೈ 4ರಿಂದ 7ರ ವರೆಗೆ ನಗರದ ಫಾದರ್ ಮುಲ್ಲರ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.</p>.<p>ಪುರುಷ, ಮಹಿಳೆಯರ, 11, 13, 15, 17, 19 ವರ್ಷದೊಳಗಿನವರ ವಿಭಾಗ ಮತ್ತು ನಾನ್ ಮೆಡಲಿಸ್ಟ್ ಮತ್ತು ಕೆಡೆಟ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ ಎಂದು ಸಂಸ್ಥೆಯ ಅಧ್ಯಕ್ಷ ಗೌತಮ್ ಶೆಟ್ಟಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜ್ಯ ರ್ಯಾಂಕಿಂಗ್ ಪಟ್ಟಿಯಲ್ಲಿರುವ ಮಂಗಳೂರಿನ ತ್ರಿಶಾ ಕರ್ಕೇರ ಮತ್ತು ಏಂಜಲಿನ್ ಅವರು 13 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ, 15 ವರ್ಷದೊಳಗಿನವರ ವಿಭಾಗದ ಅಥರ್ವ ನವರಂಗೆ ಮತ್ತು 17 ವರ್ಷದೊಳಗಿನವರ ವಿಭಾಗದ ಪ್ರೇಕ್ಷಾ ತಿಲಾವತ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ ಎಂದು ಅವರು ವಿವರಿಸಿದರು.</p>.<p>ಇದು ಈ ಋತುವಿನಲ್ಲಿ ರಾಜ್ಯದ ಎರಡನೇ ರ್ಯಾಂಕಿಂಗ್ ಟೂರ್ನಿಯಾಗಿದೆ. ಎಂಟು ವರ್ಷಗಳ ಹಿಂದೆ ಹಳೆಯಂಗಡಿಯ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ರಾಜ್ಯ ರ್ಯಾಂಕಿಂಗ್ ಟೂರ್ನಿ ಆಯೋಜಿಸಲಾಗಿತ್ತು. ಆ ನಂತರ ಉತ್ತಮ ಕ್ರೀಡಾಪಟುಗಳು ಬೆಳಕಿಗೆ ಬಂದಿದ್ದರು. ಈಗ ಜಿಲ್ಲೆಯಲ್ಲಿ ಟೇಬಲ್ ಟೆನಿಸ್ಗೆ ಉತ್ತೇಜನ ನೀಡಲು ಮತ್ತೊಮ್ಮೆ ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ಕೋಚ್ ಹಾಗೂ ಸಂಸ್ಥೆಯ ಕಾರ್ಯದರ್ಶಿ ಅಶ್ವಿನ್ ಕುಮಾರ್ ಪಡುಕೋಣೆ, ಸಂಘಟನಾ ಸಮಿತಿಯ ಅರ್ಚನಾ, ಕ್ಲಾರಾ ಮರಿಯ, ಪ್ರದೀಪ್, ನಿತೀಶ್ ಪಿ.ಎಂ ಮತ್ತು ಎಲ್ಸನ್ ನೊರೋನ್ಹ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>