<p><strong>ಮಂಗಳೂರು</strong>: ನೀರಿನೊಳಗೆ ಉಸಿರು ಬಿಗಿ ಹಿಡಿದು ಸೋಮರ್ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ‘ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ನಲ್ಲಿ ಸ್ಥಾನ ಪಡೆದಿದ್ದ ಈಜುಪಟು ಕೆ. ಚಂದ್ರಶೇಖರ ರೈ ಸೂರಿಕುಮೇರು (52) ಈಜುಕೊಳದಲ್ಲಿ ಮುಳುಗಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. </p>.<p>ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಸೂರಿಕುಮೇರು ಬರಿಬರದ ನಿವಾಸಿಯಾದ ಅವರು ಮಂಗಳೂರಿನ ಕುದ್ರೋಳಿಯಲ್ಲಿ ವಾಸವಾಗಿದ್ದರು. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. </p>.<p>ಉಡುಪಿ ಈಜುಕೊಳದಲ್ಲಿ ಗುತ್ತಿಗೆ ಆಧಾರದಲ್ಲಿ ಲೈಫ್ ಗಾರ್ಡ್ ಆಗಿದ್ದ ಅವರು ಮೂರು ವರ್ಷದ ಹಿಂದೆ ಮಂಗಳೂರಿಗೆ ಬಂದು ಮಹಾನಗರಪಾಲಿಕೆ ಈಜುಕೊಳದ ನಿರ್ವಹಣೆ ಮಾಡುತ್ತಿದ್ದರು.</p>.<p>ಜೀವರಕ್ಷಕರಾಗಿ, ಕೆಲವರಿಗೆ ಈಜು ತರಬೇತುದಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.</p>.<p>‘ಭಾನುವಾರ ಈಜುಕೊಳಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ನಿರ್ವಹಣೆಗೆ ಬಂದಿದ್ದ ಚಂದ್ರಶೇಖರ ರೈ ಕೊಳದ ನಿರ್ವಹಣೆಗೆ ತೆರಳಿದ್ದರು’ ಎಂದು ಪ್ರಭಾರ ವ್ಯವಸ್ಥಾಪಕ ರಮೇಶ್ ಬಿಜೈ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸ್ವಲ್ಪ ಹೊತ್ತು ಅಭ್ಯಾಸ ಮಾಡುವುದಾಗಿ ಕಾವಲುಗಾರನಿಗೆ ತಿಳಿಸಿ ಮೊಬೈಲ್ ಫೋನ್ ಕೈಗಿತ್ತು ಡೈವ್ ಮಾಡಿದ್ದಾರೆ. ಮಧ್ಯಕ್ಕೆ ತಲುಪುತ್ತಿದ್ದಂತೆ ಉಸಿರುಕಟ್ಟಿ ಸಾವಿಗೀಡಾಗಿರುವುದಾಗಿ ಕಾವಲುಗಾರ ಹೇಳಿದ್ದಾರೆ. ಅಭ್ಯಾಸ ಮಾಡುವಾಗ ಆಘಾತವಾಗಿರುವ ಸಾಧ್ಯತೆ ಇದೆ’ ಎಂದು ರಮೇಶ್ ತಿಳಿಸಿದರು. </p>.<p>ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಿತು ಎಂದು ಚಂದ್ರಶೇಖರ್ ಅವರ ಸಹೋದರ ರಾಧಾಕೃಷ್ಣ ರೈ ತಿಳಿಸಿದರು.</p>.<p>ಒಂದೇ ಉಸಿರಿನಲ್ಲಿ 28 ಬಾರಿ ಮುಂಭಾಗಕ್ಕೆ ತಿರುಗಿ (ಫ್ರಂಟ್ ಫ್ಲಿಪ್ ಸೋಮರ್ಸಾಲ್ಟ್) ಕೆ. ಚಂದ್ರಶೇಖರ ರೈ ‘ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ನಲ್ಲಿ 2023ರಲ್ಲಿ ಸ್ಥಾನ ಗಳಿಸಿದ್ದರು. ಅದಕ್ಕೂ ಮೊದಲು ಎರಡು ಬಾರಿ ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ನಲ್ಲಿ ಸ್ಥಾನ ಗಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನೀರಿನೊಳಗೆ ಉಸಿರು ಬಿಗಿ ಹಿಡಿದು ಸೋಮರ್ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ‘ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ನಲ್ಲಿ ಸ್ಥಾನ ಪಡೆದಿದ್ದ ಈಜುಪಟು ಕೆ. ಚಂದ್ರಶೇಖರ ರೈ ಸೂರಿಕುಮೇರು (52) ಈಜುಕೊಳದಲ್ಲಿ ಮುಳುಗಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. </p>.<p>ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಸೂರಿಕುಮೇರು ಬರಿಬರದ ನಿವಾಸಿಯಾದ ಅವರು ಮಂಗಳೂರಿನ ಕುದ್ರೋಳಿಯಲ್ಲಿ ವಾಸವಾಗಿದ್ದರು. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. </p>.<p>ಉಡುಪಿ ಈಜುಕೊಳದಲ್ಲಿ ಗುತ್ತಿಗೆ ಆಧಾರದಲ್ಲಿ ಲೈಫ್ ಗಾರ್ಡ್ ಆಗಿದ್ದ ಅವರು ಮೂರು ವರ್ಷದ ಹಿಂದೆ ಮಂಗಳೂರಿಗೆ ಬಂದು ಮಹಾನಗರಪಾಲಿಕೆ ಈಜುಕೊಳದ ನಿರ್ವಹಣೆ ಮಾಡುತ್ತಿದ್ದರು.</p>.<p>ಜೀವರಕ್ಷಕರಾಗಿ, ಕೆಲವರಿಗೆ ಈಜು ತರಬೇತುದಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.</p>.<p>‘ಭಾನುವಾರ ಈಜುಕೊಳಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ನಿರ್ವಹಣೆಗೆ ಬಂದಿದ್ದ ಚಂದ್ರಶೇಖರ ರೈ ಕೊಳದ ನಿರ್ವಹಣೆಗೆ ತೆರಳಿದ್ದರು’ ಎಂದು ಪ್ರಭಾರ ವ್ಯವಸ್ಥಾಪಕ ರಮೇಶ್ ಬಿಜೈ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸ್ವಲ್ಪ ಹೊತ್ತು ಅಭ್ಯಾಸ ಮಾಡುವುದಾಗಿ ಕಾವಲುಗಾರನಿಗೆ ತಿಳಿಸಿ ಮೊಬೈಲ್ ಫೋನ್ ಕೈಗಿತ್ತು ಡೈವ್ ಮಾಡಿದ್ದಾರೆ. ಮಧ್ಯಕ್ಕೆ ತಲುಪುತ್ತಿದ್ದಂತೆ ಉಸಿರುಕಟ್ಟಿ ಸಾವಿಗೀಡಾಗಿರುವುದಾಗಿ ಕಾವಲುಗಾರ ಹೇಳಿದ್ದಾರೆ. ಅಭ್ಯಾಸ ಮಾಡುವಾಗ ಆಘಾತವಾಗಿರುವ ಸಾಧ್ಯತೆ ಇದೆ’ ಎಂದು ರಮೇಶ್ ತಿಳಿಸಿದರು. </p>.<p>ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಿತು ಎಂದು ಚಂದ್ರಶೇಖರ್ ಅವರ ಸಹೋದರ ರಾಧಾಕೃಷ್ಣ ರೈ ತಿಳಿಸಿದರು.</p>.<p>ಒಂದೇ ಉಸಿರಿನಲ್ಲಿ 28 ಬಾರಿ ಮುಂಭಾಗಕ್ಕೆ ತಿರುಗಿ (ಫ್ರಂಟ್ ಫ್ಲಿಪ್ ಸೋಮರ್ಸಾಲ್ಟ್) ಕೆ. ಚಂದ್ರಶೇಖರ ರೈ ‘ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ನಲ್ಲಿ 2023ರಲ್ಲಿ ಸ್ಥಾನ ಗಳಿಸಿದ್ದರು. ಅದಕ್ಕೂ ಮೊದಲು ಎರಡು ಬಾರಿ ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ನಲ್ಲಿ ಸ್ಥಾನ ಗಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>