<p><strong>ನವದೆಹಲಿ:</strong> ಟೋಕಿಯೊ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಭಾರತದ ಬಾಕ್ಸರ್ಗಳು, ಪುರುಷರ ರಾಷ್ಟ್ರೀಯ ಚಾಂಪಿಯನ್ಷಿಪ್ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾದರೆ ಮುಂದಿನ ತಿಂಗಳು ಸರ್ಬಿಯಾದಲ್ಲಿ ನಿಗದಿಯಾಗಿರುವ ವಿಶ್ವಚಾಂಪಿಯನ್ಷಿಪ್ನಲ್ಲೂ ಅವರಿಗೆ ಕಣಕ್ಕಿಳಿಯುವ ಅವಕಾಶ ಸಿಗುವುದಿಲ್ಲ.</p>.<p>ಅಮಿತ್ ಪಂಘಲ್ (52 ಕೆಜಿ ವಿಭಾಗ), ಮನೀಷ್ ಕೌಶಿಕ್ (63 ಕೆಜಿ), ವಿಕಾಸ್ ಕ್ರಿಶನ್ (69 ಕೆಜಿ), ಆಶಿಶ್ ಚೌಧರಿ (75 ಕೆಜಿ) ಮತ್ತು ಸತೀಶ್ ಕುಮಾರ್ (+91 ಕೆಜಿ) ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದರು. ಸತೀಶ್ ಅವರು ಕ್ವಾರ್ಟರ್ಫೈನಲ್ನಲ್ಲಿ ಸೋತರೆ ಇನ್ನುಳಿದ ನಾಲ್ವರು ಪ್ರಿಲಿಮನರಿ ಸುತ್ತುಗಳಲ್ಲೇ ನಿರಾಸೆ ಅನುಭವಿಸಿದ್ದರು.</p>.<p>‘ಈ ಐವರು ಬಾಕ್ಸರ್ಗಳ ಪೈಕಿ ವಿಕಾಸ್, ಸತೀಶ್ ಮತ್ತು ಆಶಿಶ್ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಿತ್ ಹಾಗೂ ಮನೀಷ್ ಕುರಿತು ಯಾವುದೇ ಮಾಹಿತಿ ಇಲ್ಲವಾದರೂ ಸೂಕ್ತ ತಾಲೀಮಿನ ಕೊರತೆಯ ಕಾರಣ ಅವರು ಟೂರ್ನಿಯಿಂದ ಹೊರಗುಳಿಯಬಹುದು‘ ಎಂದು ಮೂಲಗಳು ತಿಳಿಸಿವೆ.</p>.<p><a href="https://www.prajavani.net/sports/cricket/icc-t20-batsman-ranking-2021-shafali-verma-retained-topper-864727.html" itemprop="url">ಟಿ20 ರ್ಯಾಂಕಿಂಗ್: ಅಗ್ರಸ್ಥಾನ ಕಾಯ್ದುಕೊಂಡ ಶೆಫಾಲಿ </a></p>.<p>ಕರ್ನಾಟಕದ ಬಳ್ಳಾರಿಯಲ್ಲಿ ಇದೇ 15ರಿಂದ ರಾಷ್ಟ್ರೀಯ ಚಾಂಪಿಯನ್ಷಿಪ್ ನಿಗದಿಯಾಗಿದೆ.</p>.<p>ಅಕ್ಟೋಬರ್ 26ರಂದು ಸರ್ಬಿಯಾದ ಬೆಲ್ಗ್ರೇಡ್ನಲ್ಲಿ ಆರಂಭವಾಗಲಿರುವ ವಿಶ್ವ ಚಾಂಪಿಯನ್ಷಿಪ್ಗೆ, ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದವರು ಮಾತ್ರ ತೆರಳಲಿದ್ದಾರೆ ಎಂದು ಭಾರತದ ಬಾಕ್ಸಿಂಗ್ ಫೆಡರೇಷನ್ (ಬಿಎಫ್ಐ) ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಟೋಕಿಯೊ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಭಾರತದ ಬಾಕ್ಸರ್ಗಳು, ಪುರುಷರ ರಾಷ್ಟ್ರೀಯ ಚಾಂಪಿಯನ್ಷಿಪ್ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾದರೆ ಮುಂದಿನ ತಿಂಗಳು ಸರ್ಬಿಯಾದಲ್ಲಿ ನಿಗದಿಯಾಗಿರುವ ವಿಶ್ವಚಾಂಪಿಯನ್ಷಿಪ್ನಲ್ಲೂ ಅವರಿಗೆ ಕಣಕ್ಕಿಳಿಯುವ ಅವಕಾಶ ಸಿಗುವುದಿಲ್ಲ.</p>.<p>ಅಮಿತ್ ಪಂಘಲ್ (52 ಕೆಜಿ ವಿಭಾಗ), ಮನೀಷ್ ಕೌಶಿಕ್ (63 ಕೆಜಿ), ವಿಕಾಸ್ ಕ್ರಿಶನ್ (69 ಕೆಜಿ), ಆಶಿಶ್ ಚೌಧರಿ (75 ಕೆಜಿ) ಮತ್ತು ಸತೀಶ್ ಕುಮಾರ್ (+91 ಕೆಜಿ) ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದರು. ಸತೀಶ್ ಅವರು ಕ್ವಾರ್ಟರ್ಫೈನಲ್ನಲ್ಲಿ ಸೋತರೆ ಇನ್ನುಳಿದ ನಾಲ್ವರು ಪ್ರಿಲಿಮನರಿ ಸುತ್ತುಗಳಲ್ಲೇ ನಿರಾಸೆ ಅನುಭವಿಸಿದ್ದರು.</p>.<p>‘ಈ ಐವರು ಬಾಕ್ಸರ್ಗಳ ಪೈಕಿ ವಿಕಾಸ್, ಸತೀಶ್ ಮತ್ತು ಆಶಿಶ್ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಿತ್ ಹಾಗೂ ಮನೀಷ್ ಕುರಿತು ಯಾವುದೇ ಮಾಹಿತಿ ಇಲ್ಲವಾದರೂ ಸೂಕ್ತ ತಾಲೀಮಿನ ಕೊರತೆಯ ಕಾರಣ ಅವರು ಟೂರ್ನಿಯಿಂದ ಹೊರಗುಳಿಯಬಹುದು‘ ಎಂದು ಮೂಲಗಳು ತಿಳಿಸಿವೆ.</p>.<p><a href="https://www.prajavani.net/sports/cricket/icc-t20-batsman-ranking-2021-shafali-verma-retained-topper-864727.html" itemprop="url">ಟಿ20 ರ್ಯಾಂಕಿಂಗ್: ಅಗ್ರಸ್ಥಾನ ಕಾಯ್ದುಕೊಂಡ ಶೆಫಾಲಿ </a></p>.<p>ಕರ್ನಾಟಕದ ಬಳ್ಳಾರಿಯಲ್ಲಿ ಇದೇ 15ರಿಂದ ರಾಷ್ಟ್ರೀಯ ಚಾಂಪಿಯನ್ಷಿಪ್ ನಿಗದಿಯಾಗಿದೆ.</p>.<p>ಅಕ್ಟೋಬರ್ 26ರಂದು ಸರ್ಬಿಯಾದ ಬೆಲ್ಗ್ರೇಡ್ನಲ್ಲಿ ಆರಂಭವಾಗಲಿರುವ ವಿಶ್ವ ಚಾಂಪಿಯನ್ಷಿಪ್ಗೆ, ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದವರು ಮಾತ್ರ ತೆರಳಲಿದ್ದಾರೆ ಎಂದು ಭಾರತದ ಬಾಕ್ಸಿಂಗ್ ಫೆಡರೇಷನ್ (ಬಿಎಫ್ಐ) ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>