ಟೋಕಿಯೊ: ಜಪಾನ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಬಾಕ್ಸರ್ ಸತೀಶ್ ಕುಮಾರ್, ಕ್ವಾರ್ಟರ್ಫೈನಲ್ನಲ್ಲಿ ಸೋಲು ಅನುಭವಿಸಿದ್ದಾರೆ. ಇದರೊಂದಿಗೆ ಕಂಚಿನ ಪದಕ ಕೈತಪ್ಪಿದೆ.
ಭಾನುವಾರ ನಡೆದ ಪುರುಷರ ಸೂಪರ್ ಹೆವಿವೇಟ್ (91+ ಕೆ.ಜಿ.) ವಿಭಾಗದಲ್ಲಿ ಸತೀಶ್ ಕುಮಾರ್, ವಿಶ್ವ ನಂ.1 ರ್ಯಾಂಕ್ನ ಉಜ್ಬೇಕಿಸ್ತಾನದ ಬಖೋದಿರ್ ಜಲೋಲೋವ್ ವಿರುದ್ಧ 0-5ರಲ್ಲಿ ಸೋಲು ಅನುಭವಿಸಿದರು.