<p><strong>ಗೋರಖಪುರ:</strong> ಉತ್ತರ ಪ್ರದೇಶ ಸರ್ಕಾರವು ಗೋರಖಪುರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶುಕ್ರವಾರ ಹೇಳಿದ್ದಾರೆ.</p>.<p>ಇಲ್ಲಿನ ಭಾತಿ ವಿಹಾರ್ ಕಾಲೊನಿಯಲ್ಲಿ ಗೋರಖ್ಪುರದ ಮೊದಲ ಮಿನಿ ಕ್ರೀಡಾ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಸರ್ಕಾರವು ಕ್ರೀಡೆಯನ್ನು ಉತ್ತೇಜಿಸಲು ಮತ್ತು ರಾಜ್ಯದೊಳಗಿನ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ ಎಂದು ಹೇಳಿದರು.</p>.<p>ಪ್ರತಿ ಗ್ರಾಮಗಳಲ್ಲಿ ಕ್ರೀಡಾ ಮೈದಾನಗಳನ್ನು ನಿರ್ಮಿಸಲಾಗುತ್ತಿದ್ದು, ಬ್ಲಾಕ್ ಮಟ್ಟದಲ್ಲಿ ಮಿನಿ ಕ್ರೀಡಾಂಗಣ ಹಾಗೂ ಜಿಲ್ಲಾ ಮಟ್ಟದಲ್ಲಿ ಪೂರ್ಣ ಪ್ರಮಾಣದ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಹಾಗೂ ಭೂಮಿ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಕ್ರೀಡೆ ಹಾಗೂ ಆಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂರಲ್ ಸ್ಪೋರ್ಟ್ಸ್ ಲೀಗ್ ಆರಂಭಿಸಿದ್ದು, ಯುವಕ ಮಂಗಳ ದಳ ಹಾಗೂ ಮಹಿಳಾ ಮಂಗಳ ದಳಗಳ ಮೂಲಕ ಗ್ರಾಮಗಳಲ್ಲಿ ಕ್ರೀಡಾ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರಖಪುರ:</strong> ಉತ್ತರ ಪ್ರದೇಶ ಸರ್ಕಾರವು ಗೋರಖಪುರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶುಕ್ರವಾರ ಹೇಳಿದ್ದಾರೆ.</p>.<p>ಇಲ್ಲಿನ ಭಾತಿ ವಿಹಾರ್ ಕಾಲೊನಿಯಲ್ಲಿ ಗೋರಖ್ಪುರದ ಮೊದಲ ಮಿನಿ ಕ್ರೀಡಾ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಸರ್ಕಾರವು ಕ್ರೀಡೆಯನ್ನು ಉತ್ತೇಜಿಸಲು ಮತ್ತು ರಾಜ್ಯದೊಳಗಿನ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ ಎಂದು ಹೇಳಿದರು.</p>.<p>ಪ್ರತಿ ಗ್ರಾಮಗಳಲ್ಲಿ ಕ್ರೀಡಾ ಮೈದಾನಗಳನ್ನು ನಿರ್ಮಿಸಲಾಗುತ್ತಿದ್ದು, ಬ್ಲಾಕ್ ಮಟ್ಟದಲ್ಲಿ ಮಿನಿ ಕ್ರೀಡಾಂಗಣ ಹಾಗೂ ಜಿಲ್ಲಾ ಮಟ್ಟದಲ್ಲಿ ಪೂರ್ಣ ಪ್ರಮಾಣದ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಹಾಗೂ ಭೂಮಿ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಕ್ರೀಡೆ ಹಾಗೂ ಆಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂರಲ್ ಸ್ಪೋರ್ಟ್ಸ್ ಲೀಗ್ ಆರಂಭಿಸಿದ್ದು, ಯುವಕ ಮಂಗಳ ದಳ ಹಾಗೂ ಮಹಿಳಾ ಮಂಗಳ ದಳಗಳ ಮೂಲಕ ಗ್ರಾಮಗಳಲ್ಲಿ ಕ್ರೀಡಾ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>