<p><strong>ಉಡುಪಿ:</strong> ಮೈಸೂರಿನ ಈಶ್ವರ್ ಅಯ್ಯಪ್ಪನ್, ದಕ್ಷಿಣ ಕನ್ನಡದ ಅದ್ವೈತ್ ಮತ್ತು ಬೆಂಗಳೂರಿನ ವಿಹಾನ್ ಸಚ್ದೇವ್ ಅವರು ಉಡುಪಿ ಜಿಲ್ಲೆ ಪಡುಬಿದ್ರಿಯ ಕಾಪುವಿನಲ್ಲಿ ಶುಕ್ರವಾರ ಆರಂಭಗೊಂಡ 15 ವರ್ಷದೊಳಗಿನವರ ರಾಜ್ಯ ಫಿಡೆ ರೇಟೆಡ್ ಮುಕ್ತ ಚೆಸ್ ಚಾಂಪಿಯನ್ಷಿಪ್ನ ಮೂರು ಸುತ್ತುಗಳ ಮುಕ್ತಾಯಕ್ಕೆ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. </p>.<p>ಅಖಿಲ ಭಾರತ ಚೆಸ್ ಫೆಡರೇಷನ್, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಮತ್ತು ಉಡುಪಿ ಜಿಲ್ಲಾ ಚೆಸ್ ಸಂಸ್ಥೆಯ ಸಹಯೋಗದಲ್ಲಿ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಗೃಹದಲ್ಲಿ ಆಯೋಜಿಸಿರುವ ಚಾಂಪಿಯನ್ಷಿಪ್ನಲ್ಲಿ ಮೂವರೂ ತಲಾ 3 ಪಾಯಿಂಟ್ ಗಳಿಸಿದ್ದಾರೆ. 15 ವರ್ಷದೊಳಗಿನ ಬಾಲಕಿಯರ ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ ಮಾಯಾ ಅಮೀನ್, ದಕ್ಷಿಣ ಕನ್ನಡದ ಆರುಷಿ ಸೆವೆರಿನ್ ಹೆಲೆನ್ ಡಿಸಿಲ್ವಾ ಮತ್ತು ಬೆಂಗಳೂರಿನ ಧನುಷ್ಕಾ ತಲಾ 3 ಪಾಯಿಂಟ್ಗಳೊಂದಿಗೆ ಅಗ್ರಸ್ಥಾನಗಳನ್ನು ಹಂಚಿಕೊಂಡರು.</p>.<p>ಮುಕ್ತ ವಿಭಾಗದಲ್ಲಿ ಋಷಿಕೇಶ್ ಗಣಪತಿ ಸುಬ್ರಹ್ಮಣ್ಯನ್, ರಜಸ್ ದಹಳೆ, ವಿಹಾನ್ ಶೆಟ್ಟಿ ಮತ್ತು ಇತರ 12 ಮಂದಿ ತಲಾ 3 ಪಾಯಿಂಟ್ ಗಳಿಸಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಒಟ್ಟು 10 ಮಂದಿ ತಲಾ 3 ಪಾಯಿಂಟ್ ಗಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮೈಸೂರಿನ ಈಶ್ವರ್ ಅಯ್ಯಪ್ಪನ್, ದಕ್ಷಿಣ ಕನ್ನಡದ ಅದ್ವೈತ್ ಮತ್ತು ಬೆಂಗಳೂರಿನ ವಿಹಾನ್ ಸಚ್ದೇವ್ ಅವರು ಉಡುಪಿ ಜಿಲ್ಲೆ ಪಡುಬಿದ್ರಿಯ ಕಾಪುವಿನಲ್ಲಿ ಶುಕ್ರವಾರ ಆರಂಭಗೊಂಡ 15 ವರ್ಷದೊಳಗಿನವರ ರಾಜ್ಯ ಫಿಡೆ ರೇಟೆಡ್ ಮುಕ್ತ ಚೆಸ್ ಚಾಂಪಿಯನ್ಷಿಪ್ನ ಮೂರು ಸುತ್ತುಗಳ ಮುಕ್ತಾಯಕ್ಕೆ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. </p>.<p>ಅಖಿಲ ಭಾರತ ಚೆಸ್ ಫೆಡರೇಷನ್, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಮತ್ತು ಉಡುಪಿ ಜಿಲ್ಲಾ ಚೆಸ್ ಸಂಸ್ಥೆಯ ಸಹಯೋಗದಲ್ಲಿ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಗೃಹದಲ್ಲಿ ಆಯೋಜಿಸಿರುವ ಚಾಂಪಿಯನ್ಷಿಪ್ನಲ್ಲಿ ಮೂವರೂ ತಲಾ 3 ಪಾಯಿಂಟ್ ಗಳಿಸಿದ್ದಾರೆ. 15 ವರ್ಷದೊಳಗಿನ ಬಾಲಕಿಯರ ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ ಮಾಯಾ ಅಮೀನ್, ದಕ್ಷಿಣ ಕನ್ನಡದ ಆರುಷಿ ಸೆವೆರಿನ್ ಹೆಲೆನ್ ಡಿಸಿಲ್ವಾ ಮತ್ತು ಬೆಂಗಳೂರಿನ ಧನುಷ್ಕಾ ತಲಾ 3 ಪಾಯಿಂಟ್ಗಳೊಂದಿಗೆ ಅಗ್ರಸ್ಥಾನಗಳನ್ನು ಹಂಚಿಕೊಂಡರು.</p>.<p>ಮುಕ್ತ ವಿಭಾಗದಲ್ಲಿ ಋಷಿಕೇಶ್ ಗಣಪತಿ ಸುಬ್ರಹ್ಮಣ್ಯನ್, ರಜಸ್ ದಹಳೆ, ವಿಹಾನ್ ಶೆಟ್ಟಿ ಮತ್ತು ಇತರ 12 ಮಂದಿ ತಲಾ 3 ಪಾಯಿಂಟ್ ಗಳಿಸಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಒಟ್ಟು 10 ಮಂದಿ ತಲಾ 3 ಪಾಯಿಂಟ್ ಗಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>