ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ನೂತನ ಆಡಳಿತ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತು ಮಾಡಿ, ತಾತ್ಕಾಲಿಕ ಸಮಿತಿ ನೇಮಕ ಮಾಡಿರುವುದಕ್ಕೆ ಮಾನ್ಯತೆ ನೀಡುವುದಿಲ್ಲ. ಶೀಘ್ರದಲ್ಲೇ ರಾಷ್ಟ್ರೀಯ ಸೀನಿಯರ್ ಕುಸ್ತಿ ಚಾಂಪಿಯನ್ಷಿಪ್ ಆಯೋಜಿಸಲಾಗುವುದು ಎಂದು ಚುನಾಯಿತ ಅಧ್ಯಕ್ಷ ಸಂಜಯ್ ಸಿಂಗ್ ಸೋಮವಾರ ಹೇಳಿದ್ದಾರೆ.