<p>ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಚುನಾವಣೆಗೆ ಸ್ಪರ್ಧಿಸಲಿರುವ ತಮ್ಮ ನಿಷ್ಠ ಗುಂಪಿನ ಅಭ್ಯರ್ಥಿಗಳ ಹೆಸರುಗಳನ್ನು ಸೋಮವಾರ ಪ್ರಕಟಿಸಲಾಗುವುದು ಎಂದು ಫೆಡರೇಷನ್ನ ನಿರ್ಗಮಿತ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ಹೇಳಿದರು.</p>.<p>ಡಬ್ಲ್ಯುಎಫ್ಐಗೆ ಆಗಸ್ಟ್ 12ರಂದು ಚುನಾವಣೆ ನಿಗದಿ ಆಗಿದ್ದು, ನಾಮಪತ್ರ ಸಲ್ಲಿಕೆಗೆ ಜುಲೈ 31 ಕೊನೆಯ ದಿನ. ಅಂದೇ ಅಭ್ಯರ್ಥಿಗಳ ಹೆಸರನ್ನು ಅವರು ಪ್ರಕಟಿಸಲಿದ್ದಾರೆ. ಬ್ರಿಜ್ಭೂಷಣ್, ತಮ್ಮ ಪರವಾಗಿರುವ ರಾಜ್ಯ ಕುಸ್ತಿ ಸಂಸ್ಥೆಗಳ ಪ್ರತಿನಿಧಿಗಳ ಜತೆ ಭಾನುವಾರ ಸಭೆ ನಡೆಸಿದರು.</p>.<p>‘ಡಬ್ಲ್ಯುಎಫ್ಐ ಮಾನ್ಯತೆ ಹೊಂದಿರುವ 25 ರಾಜ್ಯ ಕುಸ್ತಿ ಸಂಸ್ಥೆಗಳಲ್ಲಿ 22 ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು’ ಎಂದು ಅವರು ಹೇಳಿದರು.</p>.<p>ಬ್ರಿಜ್ ಭೂಷಣ್ ಮತ್ತು ಅವರ ಪುತ್ರ ಕರಣ್ ಈ ಬಾರಿ ಕಣದಲ್ಲಿರುವುದಿಲ್ಲ. ಬ್ರಿಜ್ಭೂಷಣ್ ಈಗಾಗಲೇ 12 ವರ್ಷ ಅಧಿಕಾರ ಪೂರೈಸಿರುವ ಕಾರಣ ಸ್ಪರ್ಧಿಸುವಂತಿಲ್ಲ. ಅವರ ಅಳಿಯ ವಿಶಾಲ್ ಸಿಂಗ್ ಕೂಡಾ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ವಿಶಾಲ್ ಅವರು ಬಿಹಾರದ ಪ್ರತಿನಿಧಿಯಾಗಿ ಉನ್ನತ ಹುದ್ದೆಗೆ ಸ್ಪರ್ಧಿಸುವರು ಎನ್ನಲಾಗಿತ್ತು.</p>.<p>‘ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ ಎಂದು ಅವರು (ವಿಶಾಲ್) ಸ್ಪಷ್ಟಪಡಿಸಿದ್ದಾರೆ. ಪದಾಧಿಕಾರಿಯಾಗಿ ಆಯ್ಕೆಯಾದರೆ ತಮ್ಮ ಹುದ್ದೆಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ’ ಎಂಬುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಸಂಸ್ಥೆಯ ಕಾರ್ಯದರ್ಶಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಚುನಾವಣೆಗೆ ಸ್ಪರ್ಧಿಸಲಿರುವ ತಮ್ಮ ನಿಷ್ಠ ಗುಂಪಿನ ಅಭ್ಯರ್ಥಿಗಳ ಹೆಸರುಗಳನ್ನು ಸೋಮವಾರ ಪ್ರಕಟಿಸಲಾಗುವುದು ಎಂದು ಫೆಡರೇಷನ್ನ ನಿರ್ಗಮಿತ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ಹೇಳಿದರು.</p>.<p>ಡಬ್ಲ್ಯುಎಫ್ಐಗೆ ಆಗಸ್ಟ್ 12ರಂದು ಚುನಾವಣೆ ನಿಗದಿ ಆಗಿದ್ದು, ನಾಮಪತ್ರ ಸಲ್ಲಿಕೆಗೆ ಜುಲೈ 31 ಕೊನೆಯ ದಿನ. ಅಂದೇ ಅಭ್ಯರ್ಥಿಗಳ ಹೆಸರನ್ನು ಅವರು ಪ್ರಕಟಿಸಲಿದ್ದಾರೆ. ಬ್ರಿಜ್ಭೂಷಣ್, ತಮ್ಮ ಪರವಾಗಿರುವ ರಾಜ್ಯ ಕುಸ್ತಿ ಸಂಸ್ಥೆಗಳ ಪ್ರತಿನಿಧಿಗಳ ಜತೆ ಭಾನುವಾರ ಸಭೆ ನಡೆಸಿದರು.</p>.<p>‘ಡಬ್ಲ್ಯುಎಫ್ಐ ಮಾನ್ಯತೆ ಹೊಂದಿರುವ 25 ರಾಜ್ಯ ಕುಸ್ತಿ ಸಂಸ್ಥೆಗಳಲ್ಲಿ 22 ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು’ ಎಂದು ಅವರು ಹೇಳಿದರು.</p>.<p>ಬ್ರಿಜ್ ಭೂಷಣ್ ಮತ್ತು ಅವರ ಪುತ್ರ ಕರಣ್ ಈ ಬಾರಿ ಕಣದಲ್ಲಿರುವುದಿಲ್ಲ. ಬ್ರಿಜ್ಭೂಷಣ್ ಈಗಾಗಲೇ 12 ವರ್ಷ ಅಧಿಕಾರ ಪೂರೈಸಿರುವ ಕಾರಣ ಸ್ಪರ್ಧಿಸುವಂತಿಲ್ಲ. ಅವರ ಅಳಿಯ ವಿಶಾಲ್ ಸಿಂಗ್ ಕೂಡಾ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ವಿಶಾಲ್ ಅವರು ಬಿಹಾರದ ಪ್ರತಿನಿಧಿಯಾಗಿ ಉನ್ನತ ಹುದ್ದೆಗೆ ಸ್ಪರ್ಧಿಸುವರು ಎನ್ನಲಾಗಿತ್ತು.</p>.<p>‘ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ ಎಂದು ಅವರು (ವಿಶಾಲ್) ಸ್ಪಷ್ಟಪಡಿಸಿದ್ದಾರೆ. ಪದಾಧಿಕಾರಿಯಾಗಿ ಆಯ್ಕೆಯಾದರೆ ತಮ್ಮ ಹುದ್ದೆಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ’ ಎಂಬುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಸಂಸ್ಥೆಯ ಕಾರ್ಯದರ್ಶಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>