<p><strong>ಕೋಲ್ಕತ್ತ:</strong> ಬಣ ಜಗಳದಲ್ಲಿ ತೊಡಗಿದ್ದ ರಾಷ್ಟ್ರೀಯ ಆರ್ಚರಿ ಫೆಡರೇಷನ್ (ಎಎಐ)ನ ಚುನಾವಣೆ ನಡೆದು ವಾರ ಕಳೆಯುವುದರೊಳಗೆ, ವಿಶ್ವ ಆರ್ಚರಿ ಸಂಸ್ಥೆಯು, ಭಾರತದ ಮೇಲೆ ಹೇರಿದ್ದ ನಿಷೇಧವನ್ನು ಷರತ್ತಿಗೊಳಪಟ್ಟು ಗುರುವಾರ ವಾಪಸು ಪಡೆಯಿತು.</p>.<p>ಉತ್ತಮ ಆಡಳಿತ ನೀಡುವುದರ ಜೊತೆಗೆ ವಿಶ್ವ ಆರ್ಚರಿ ಸಂಸ್ಥೆಯ ನಿಯಮಾವಳಿಗಳನ್ನು ಪಾಲಿಸಬೇಕು. ಮೂರು ತಿಂಗಳಿಗೊಮ್ಮೆ ವರದಿ ಮಾಡಿಕೊಳ್ಳಬೇಕು ಎಂದು ಸಂಸ್ಥೆಯ ಹೇಳಿಕೆಯಲ್ಲಿ ಸೂಚಿಸಲಾಗಿದೆ.</p>.<p>ಎಎಐ ಮೇಲಿನ ನಿಷೇಧದಿಂದ ಈ ಹಿಂದೆ ಏಷ್ಯನ್ ಚಾಂಪಿಯನ್ಷಿಪ್ನಲ್ಲಿ ಭಾರತದ ಬಿಲ್ಗಾರರು ‘ತಟಸ್ಥ ಅಥ್ಲೀಟ್ಸ್’ ತಂಡದ ಹೆಸರಿನಲ್ಲಿ ಭಾಗವಹಿಸಿದ್ದರು. ಇನ್ನು ಮುಂದೆ ದೇಶವನ್ನು ಪ್ರತಿನಿಧಿಸಲು ಅವಕಾಶ ಒದಗಿದೆ.</p>.<p>ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಕಳೆದ ಶನಿವಾರ ನಡೆದ ಚುನಾವಣೆಯಲ್ಲಿ ಎಎಐ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ವಿಶ್ವ ಆರ್ಚರಿ ಸಂಸ್ಥೆಯ ಪ್ರತಿನಿಧಿ ಸೇರಿದಂತೆ ಮೂವರು ವೀಕ್ಷಕರ ಸಮ್ಮುಖದಲ್ಲಿ ಈ ಚುನಾವಣೆ ನಡೆದಿತ್ತು. ಚುನಾವಣೆ 2–3 ಬಾರಿ ಮುಂದಕ್ಕೆ ಹೋಗಿತ್ತು.</p>.<p>ಎಎಐ ಮಾಜಿ ಅಧ್ಯಕ್ಷ ವಿಜಯಕುಮಾರ್ ಮಲ್ಹೋತ್ರಾ ಅವರ ಬೆಂಬಲ ಪಡೆದಿದ್ದ ಮುಂಡಾ, ವಿರೋಧಿ ಬಣದ ಬಿ.ವಿ.ಪಿ ರಾವ್ ಅವರನ್ನು 34–18 ಮತಗಳಿಂದ ಸೋಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಣ ಜಗಳದಲ್ಲಿ ತೊಡಗಿದ್ದ ರಾಷ್ಟ್ರೀಯ ಆರ್ಚರಿ ಫೆಡರೇಷನ್ (ಎಎಐ)ನ ಚುನಾವಣೆ ನಡೆದು ವಾರ ಕಳೆಯುವುದರೊಳಗೆ, ವಿಶ್ವ ಆರ್ಚರಿ ಸಂಸ್ಥೆಯು, ಭಾರತದ ಮೇಲೆ ಹೇರಿದ್ದ ನಿಷೇಧವನ್ನು ಷರತ್ತಿಗೊಳಪಟ್ಟು ಗುರುವಾರ ವಾಪಸು ಪಡೆಯಿತು.</p>.<p>ಉತ್ತಮ ಆಡಳಿತ ನೀಡುವುದರ ಜೊತೆಗೆ ವಿಶ್ವ ಆರ್ಚರಿ ಸಂಸ್ಥೆಯ ನಿಯಮಾವಳಿಗಳನ್ನು ಪಾಲಿಸಬೇಕು. ಮೂರು ತಿಂಗಳಿಗೊಮ್ಮೆ ವರದಿ ಮಾಡಿಕೊಳ್ಳಬೇಕು ಎಂದು ಸಂಸ್ಥೆಯ ಹೇಳಿಕೆಯಲ್ಲಿ ಸೂಚಿಸಲಾಗಿದೆ.</p>.<p>ಎಎಐ ಮೇಲಿನ ನಿಷೇಧದಿಂದ ಈ ಹಿಂದೆ ಏಷ್ಯನ್ ಚಾಂಪಿಯನ್ಷಿಪ್ನಲ್ಲಿ ಭಾರತದ ಬಿಲ್ಗಾರರು ‘ತಟಸ್ಥ ಅಥ್ಲೀಟ್ಸ್’ ತಂಡದ ಹೆಸರಿನಲ್ಲಿ ಭಾಗವಹಿಸಿದ್ದರು. ಇನ್ನು ಮುಂದೆ ದೇಶವನ್ನು ಪ್ರತಿನಿಧಿಸಲು ಅವಕಾಶ ಒದಗಿದೆ.</p>.<p>ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಕಳೆದ ಶನಿವಾರ ನಡೆದ ಚುನಾವಣೆಯಲ್ಲಿ ಎಎಐ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ವಿಶ್ವ ಆರ್ಚರಿ ಸಂಸ್ಥೆಯ ಪ್ರತಿನಿಧಿ ಸೇರಿದಂತೆ ಮೂವರು ವೀಕ್ಷಕರ ಸಮ್ಮುಖದಲ್ಲಿ ಈ ಚುನಾವಣೆ ನಡೆದಿತ್ತು. ಚುನಾವಣೆ 2–3 ಬಾರಿ ಮುಂದಕ್ಕೆ ಹೋಗಿತ್ತು.</p>.<p>ಎಎಐ ಮಾಜಿ ಅಧ್ಯಕ್ಷ ವಿಜಯಕುಮಾರ್ ಮಲ್ಹೋತ್ರಾ ಅವರ ಬೆಂಬಲ ಪಡೆದಿದ್ದ ಮುಂಡಾ, ವಿರೋಧಿ ಬಣದ ಬಿ.ವಿ.ಪಿ ರಾವ್ ಅವರನ್ನು 34–18 ಮತಗಳಿಂದ ಸೋಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>