<p><strong>ಬೆಂಗಳೂರು:</strong> ನಗರದ ಯುವನೇಶ್ ಎ. ಮತ್ತು ಶ್ರೇಯಾ ರಾಜೇಶ್ ಅವರು ಹಾಸನದಲ್ಲಿ ಇತ್ತೀಚೆಗೆ ನಡೆದ ರಾಜ್ಯ 13 ವರ್ಷದೊಳಗಿನವರ ಚೆಸ್ ಚಾಂಪಿಯನ್ಷಿಪ್ನಲ್ಲಿ ಕ್ರಮವಾಗಿ ಓಪನ್ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡರು.</p>.<p>ಹಾಸನ ಜಿಲ್ಲಾ ಚೆಸ್ ಸಂಸ್ಥೆಯು ಹಾರನಹಳ್ಳಿ ರಾಮಸ್ವಾಮಿ ಇನ್ಸ್ಟಿಟ್ಯೂಷನ್ ಆಫ್ ಹೈಯರ್ ಎಜುಕೇಷನ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಈ ಚಾಂಪಿಯನ್ಷಿಪ್ನಲ್ಲಿ, ಕ್ರೈಸ್ಟ್ (ಐಸಿಎಸ್ಇ) ಶಾಲೆಯ ಯುವನೇಶ್ 9 ಸುತ್ತುಗಳಿಂದ 8 ಪಾಯಿಂಟ್ಸ್ ಸಂಗ್ರಹಿಸಿದರು. ಇಂದಿರಾನಗರದ ಎನ್ಪಿಎಸ್ ಶಾಲೆಯ ಅಭಿನವ್ ಆನಂದ್ (7.5 ಪಾಯಿಂಟ್ಸ್) ಎರಡನೇ ಸ್ಥಾನ ಪಡೆದರು.</p>.<p>ಬಾಲಕಿಯರ ವಿಭಾಗದಲ್ಲಿ ಇಂದಿರಾನಗರದ ಡಿಪಿಎಸ್ ಈಸ್ಟ್ ಶಾಲೆಯ ಶ್ರೇಯಾ ರಾಜೇಶ್ 9 ಸುತ್ತುಗಳಿಂದ 8 ಪಾಯಿಂಟ್ಸ್ ಕಲೆಹಾಕಿದರೆ, ಉತ್ತರ ಕನ್ನಡ ಜಿಲ್ಲೆ ಕೈಗಾದ ಅಟೊಮಿಕ್ ಎನರ್ಜಿ ಸೆಂಟ್ರಲ್ ಸ್ಕೂಲ್ನ ಅನ್ವಿತಾ ಸಾತಿ (7.5) ಎರಡನೇ ಸ್ಥಾನ ಪಡೆದರು.</p>.<p>350 ಮಂದಿ ಈ ಚಾಂಪಿಯನ್ಷಿಪ್ನಲ್ಲಿ ಭಾಗವಹಿಸಿದ್ದರು. ಮೇಲ್ಕಂಡ ವಿಜೇತ ಆಟಗಾರರು ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ರಾಜ್ಯ ತಂಡ ಪ್ರತಿನಿಧಿಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಯುವನೇಶ್ ಎ. ಮತ್ತು ಶ್ರೇಯಾ ರಾಜೇಶ್ ಅವರು ಹಾಸನದಲ್ಲಿ ಇತ್ತೀಚೆಗೆ ನಡೆದ ರಾಜ್ಯ 13 ವರ್ಷದೊಳಗಿನವರ ಚೆಸ್ ಚಾಂಪಿಯನ್ಷಿಪ್ನಲ್ಲಿ ಕ್ರಮವಾಗಿ ಓಪನ್ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡರು.</p>.<p>ಹಾಸನ ಜಿಲ್ಲಾ ಚೆಸ್ ಸಂಸ್ಥೆಯು ಹಾರನಹಳ್ಳಿ ರಾಮಸ್ವಾಮಿ ಇನ್ಸ್ಟಿಟ್ಯೂಷನ್ ಆಫ್ ಹೈಯರ್ ಎಜುಕೇಷನ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಈ ಚಾಂಪಿಯನ್ಷಿಪ್ನಲ್ಲಿ, ಕ್ರೈಸ್ಟ್ (ಐಸಿಎಸ್ಇ) ಶಾಲೆಯ ಯುವನೇಶ್ 9 ಸುತ್ತುಗಳಿಂದ 8 ಪಾಯಿಂಟ್ಸ್ ಸಂಗ್ರಹಿಸಿದರು. ಇಂದಿರಾನಗರದ ಎನ್ಪಿಎಸ್ ಶಾಲೆಯ ಅಭಿನವ್ ಆನಂದ್ (7.5 ಪಾಯಿಂಟ್ಸ್) ಎರಡನೇ ಸ್ಥಾನ ಪಡೆದರು.</p>.<p>ಬಾಲಕಿಯರ ವಿಭಾಗದಲ್ಲಿ ಇಂದಿರಾನಗರದ ಡಿಪಿಎಸ್ ಈಸ್ಟ್ ಶಾಲೆಯ ಶ್ರೇಯಾ ರಾಜೇಶ್ 9 ಸುತ್ತುಗಳಿಂದ 8 ಪಾಯಿಂಟ್ಸ್ ಕಲೆಹಾಕಿದರೆ, ಉತ್ತರ ಕನ್ನಡ ಜಿಲ್ಲೆ ಕೈಗಾದ ಅಟೊಮಿಕ್ ಎನರ್ಜಿ ಸೆಂಟ್ರಲ್ ಸ್ಕೂಲ್ನ ಅನ್ವಿತಾ ಸಾತಿ (7.5) ಎರಡನೇ ಸ್ಥಾನ ಪಡೆದರು.</p>.<p>350 ಮಂದಿ ಈ ಚಾಂಪಿಯನ್ಷಿಪ್ನಲ್ಲಿ ಭಾಗವಹಿಸಿದ್ದರು. ಮೇಲ್ಕಂಡ ವಿಜೇತ ಆಟಗಾರರು ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ರಾಜ್ಯ ತಂಡ ಪ್ರತಿನಿಧಿಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>