ಕಲಬುರ್ಗಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಫಜಲಪುರಕ್ಕೆ ಭೇಟಿ ನೀಡಲಿದ್ದು, ಅವರ ಸ್ವಾಗತಕ್ಕೆ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಫ್ಲೆಕ್ಸ್ ಹಾಕಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಮಾಲೀಕಯ್ಯ ಗುತ್ತೇದಾರ ಅವರು ‘ದೇವೇಗೌಡ ಹಿರಿಯರು. ಅವರು ಅಧಿಕಾರದಲ್ಲಿ ಇದ್ದಾಗ ಭೀಮಾ ಏತನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಅವರಿಗೆ ಗೌರವ ನೀಡಲು ಹೆಲಿಪ್ಯಾಡ್ ನಲ್ಲಿ ಫ್ಲೆಕ್ಸ್ ಹಾಕಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.