<p>ಬಳ್ಳಾರಿ: ‘ಮಲೇಶಿಯಾದಲ್ಲಿ ನಡೆಯಲಿರುವ 22ನೇ ಅಂತರಾಷ್ಟ್ರೀಯ ‘ಒಕಿನೊವ ಗೋಜು ರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ-2026’ಕ್ಕೆ ಬಳ್ಳಾರಿಯ ‘ಶ್ರೀ ಪಂಚಾಕ್ಷರಿ ಮಾರ್ಷಲ್ ಆರ್ಟ್ಸ್ ಟ್ರಸ್ಟ್’ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ’ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ತರಬೇತಿದಾರ ಬಂಡಾಳ್ ಎಂ. ಮೃತ್ಯುಂಜಯ ಸ್ವಾಮಿ ಹೇಳಿದರು.</p>.<p>‘ಮೇ 8ರಿಂದ 10ರವರೆಗೆ ನಡೆಯಲಿರುವ ಸ್ಪರ್ಧೆಗೆ ನಯೋನಿಕ ಮಂಗಳಂ, ನಕ್ಷತ್ರ ವರ್ಣ ಮಂಗಳಂ, ಪ್ರಜ್ವಲ ಗಣೇಶ್ ಹಾಗೂ ಮುದಿಯಮಂ ದೇವಗನ್ ಶ್ರೀವತ್ಸ ಆಯ್ಕೆಯಾಗಿದ್ದಾರೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕಳೆದ 25 ವರ್ಷಗಳಿಂದ ಟ್ರಸ್ಟ್ ಮೂಲಕ ಬಾಲ ಭಾರತಿ ಶಾಲೆಯಲ್ಲಿ ಉಚಿತ ಕರಾಟೆ, ಯೋಗ ಹಾಗೂ ಧ್ಯಾನ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಗಳು, ತರಬೇತಿ ಶಿಬಿರಗಳು, ಶ್ರೀಲಂಕಾ, ಇಂಡೋನೇಷಿಯಾ, ಸಿಂಗಾಪುರ್, ಮಲೇಶಿಯಾ ಹಾಗೂ ಜಪಾನ್ನಲ್ಲಿ ನಡೆದ ಕೂಟಗಳಲ್ಲಿ ಟ್ರಸ್ಟ್ನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ಟ್ರಸ್ಟ್, ಕ್ರೀಡಾಸಕ್ತಿ ಬೆಳೆಸಲು ಕಾರ್ಯನಿರ್ವಹಿಸುತ್ತಿದೆ. ವಿಕ್ರಮ ಮಹಿಪಾಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-248875178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ‘ಮಲೇಶಿಯಾದಲ್ಲಿ ನಡೆಯಲಿರುವ 22ನೇ ಅಂತರಾಷ್ಟ್ರೀಯ ‘ಒಕಿನೊವ ಗೋಜು ರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ-2026’ಕ್ಕೆ ಬಳ್ಳಾರಿಯ ‘ಶ್ರೀ ಪಂಚಾಕ್ಷರಿ ಮಾರ್ಷಲ್ ಆರ್ಟ್ಸ್ ಟ್ರಸ್ಟ್’ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ’ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ತರಬೇತಿದಾರ ಬಂಡಾಳ್ ಎಂ. ಮೃತ್ಯುಂಜಯ ಸ್ವಾಮಿ ಹೇಳಿದರು.</p>.<p>‘ಮೇ 8ರಿಂದ 10ರವರೆಗೆ ನಡೆಯಲಿರುವ ಸ್ಪರ್ಧೆಗೆ ನಯೋನಿಕ ಮಂಗಳಂ, ನಕ್ಷತ್ರ ವರ್ಣ ಮಂಗಳಂ, ಪ್ರಜ್ವಲ ಗಣೇಶ್ ಹಾಗೂ ಮುದಿಯಮಂ ದೇವಗನ್ ಶ್ರೀವತ್ಸ ಆಯ್ಕೆಯಾಗಿದ್ದಾರೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕಳೆದ 25 ವರ್ಷಗಳಿಂದ ಟ್ರಸ್ಟ್ ಮೂಲಕ ಬಾಲ ಭಾರತಿ ಶಾಲೆಯಲ್ಲಿ ಉಚಿತ ಕರಾಟೆ, ಯೋಗ ಹಾಗೂ ಧ್ಯಾನ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಗಳು, ತರಬೇತಿ ಶಿಬಿರಗಳು, ಶ್ರೀಲಂಕಾ, ಇಂಡೋನೇಷಿಯಾ, ಸಿಂಗಾಪುರ್, ಮಲೇಶಿಯಾ ಹಾಗೂ ಜಪಾನ್ನಲ್ಲಿ ನಡೆದ ಕೂಟಗಳಲ್ಲಿ ಟ್ರಸ್ಟ್ನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ಟ್ರಸ್ಟ್, ಕ್ರೀಡಾಸಕ್ತಿ ಬೆಳೆಸಲು ಕಾರ್ಯನಿರ್ವಹಿಸುತ್ತಿದೆ. ವಿಕ್ರಮ ಮಹಿಪಾಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-248875178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>