<p>ಬೆಂಗಳೂರು: ಕರ್ನಾಟಕ ರಾಜ್ಯ ಚೆಸ್ ಚಾಂಪಿಯನ್ಷಿಪ್ ಗೆದ್ದ ಅತಿ ಕಿರಿಯ ಆಟಗಾರ ಎಂಬ ಗೌರವಕ್ಕೆ ನಗರದ ಹತ್ತು ವರ್ಷ ವಯಸ್ಸಿನ ಪ್ರತಿಭೆ ಅಯಾನ್ ಫುಟಾಣೆ ಪಾತ್ರರಾಗಿದ್ದಾರೆ. ಭಾನುವಾರ ಮುಕ್ತಾಯಗೊಂಡ ಈ ಚಾಂಪಿಯನ್ ಷಿಪ್ನಲ್ಲಿ ಅಯಾನ್ 9 ಸುತ್ತುಗಳಿಂದ 8 ಪಾಯಿಂಟ್ಸ್ ಕಲೆಹಾಕಿದನು.</p>.<p>ತೀವ್ರ ಪೈಪೋಟಿ ಕಂಡುಬಂದ ಈ ಕೂಟದಲ್ಲಿ ಬೆಂಗಳೂರಿನವರೇ ಆದ ಕೃಷ್ಣ, ಸುದರ್ಶನ ಭಟ್ ಮತ್ತು ಸಿದ್ಧಾರ್ಥ ಪೂಂಜಾ ಅವರೂ ಎಂಟು ಪಾಯಿಂಟ್ಸ್ ಪಡೆದರು. ಆದರೆ ಟೈಬ್ರೇಕ್ ಆಧಾರದಲ್ಲಿ ಕ್ರಮವಾಗಿ ಎರಡು, ಮೂರು ಮತ್ತು ನಾಲ್ಕನೇ ಸ್ಥಾನ ಗಳಿಸಿದರು.</p>.<p>ಕನಕಪುರ ರಸ್ತೆಯ ಪ್ರೆಸ್ಟೀಜ್ ಸ್ರೀಹರಿ ಖೋಡೆ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಭಾಂಗಣದಲ್ಲಿ ಅಕ್ಷಯಕಲ್ಪ ಪ್ರಾಯೋ ಜಕತ್ವದಲ್ಲಿ ಈ ಟೂರ್ನಿ ನಡೆಯಿತು.</p>.<p>ಅನುಭವಿ ಆಟಗಾರರಿದ್ದ ಕಣದಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿಂದ ಆಡಿದ ಅಯಾನ್ ಸಂಯಮ, ಏಕಾಗ್ರತೆಯಿಂದ ಆಡಿ ಟೂರ್ನಿಯುದ್ದಕ್ಕೂ ಅಜೇಯನಾದ. ಏಳು ಸುತ್ತುಗಳಲ್ಲಿ ಗೆಲುವು, ಎರಡು ಸುತ್ತುಗಳಲ್ಲಿ ಡ್ರಾ ಮಾಡಿಕೊಂಡ.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು. ಮೊದಲ ನಾಲ್ಕು ಸ್ಥಾನ ಪಡೆದ ಆಟಗಾರರು ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-51-772560868</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ರಾಜ್ಯ ಚೆಸ್ ಚಾಂಪಿಯನ್ಷಿಪ್ ಗೆದ್ದ ಅತಿ ಕಿರಿಯ ಆಟಗಾರ ಎಂಬ ಗೌರವಕ್ಕೆ ನಗರದ ಹತ್ತು ವರ್ಷ ವಯಸ್ಸಿನ ಪ್ರತಿಭೆ ಅಯಾನ್ ಫುಟಾಣೆ ಪಾತ್ರರಾಗಿದ್ದಾರೆ. ಭಾನುವಾರ ಮುಕ್ತಾಯಗೊಂಡ ಈ ಚಾಂಪಿಯನ್ ಷಿಪ್ನಲ್ಲಿ ಅಯಾನ್ 9 ಸುತ್ತುಗಳಿಂದ 8 ಪಾಯಿಂಟ್ಸ್ ಕಲೆಹಾಕಿದನು.</p>.<p>ತೀವ್ರ ಪೈಪೋಟಿ ಕಂಡುಬಂದ ಈ ಕೂಟದಲ್ಲಿ ಬೆಂಗಳೂರಿನವರೇ ಆದ ಕೃಷ್ಣ, ಸುದರ್ಶನ ಭಟ್ ಮತ್ತು ಸಿದ್ಧಾರ್ಥ ಪೂಂಜಾ ಅವರೂ ಎಂಟು ಪಾಯಿಂಟ್ಸ್ ಪಡೆದರು. ಆದರೆ ಟೈಬ್ರೇಕ್ ಆಧಾರದಲ್ಲಿ ಕ್ರಮವಾಗಿ ಎರಡು, ಮೂರು ಮತ್ತು ನಾಲ್ಕನೇ ಸ್ಥಾನ ಗಳಿಸಿದರು.</p>.<p>ಕನಕಪುರ ರಸ್ತೆಯ ಪ್ರೆಸ್ಟೀಜ್ ಸ್ರೀಹರಿ ಖೋಡೆ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಭಾಂಗಣದಲ್ಲಿ ಅಕ್ಷಯಕಲ್ಪ ಪ್ರಾಯೋ ಜಕತ್ವದಲ್ಲಿ ಈ ಟೂರ್ನಿ ನಡೆಯಿತು.</p>.<p>ಅನುಭವಿ ಆಟಗಾರರಿದ್ದ ಕಣದಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿಂದ ಆಡಿದ ಅಯಾನ್ ಸಂಯಮ, ಏಕಾಗ್ರತೆಯಿಂದ ಆಡಿ ಟೂರ್ನಿಯುದ್ದಕ್ಕೂ ಅಜೇಯನಾದ. ಏಳು ಸುತ್ತುಗಳಲ್ಲಿ ಗೆಲುವು, ಎರಡು ಸುತ್ತುಗಳಲ್ಲಿ ಡ್ರಾ ಮಾಡಿಕೊಂಡ.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು. ಮೊದಲ ನಾಲ್ಕು ಸ್ಥಾನ ಪಡೆದ ಆಟಗಾರರು ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-51-772560868</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>