<p>ಬ್ಯಾಡಗಿ: ಪಟ್ಟಣದಲ್ಲಿ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳಾ ಕಬಡ್ಡಿ ಪಂದ್ಯಾವಳಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹಾವೇರಿ ವಿವಿ ಉಪಕುಲಪತಿ ಸುರೇಶ ಜಂಗಮಶೆಟ್ಟಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧವಾರದಿಂದ ಆರಂಭವಾದ ಹಾವೇರಿ ವಿವಿ ವ್ಯಾಪ್ತಿಯ ಪುರುಷ ಹಾಗೂ ಮಹಿಳಾ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉದಯೋನ್ಮುಖ ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಾವೇರಿ ವಿವಿ ಕೆಲಸ ಮಾಡುತ್ತಿದೆ. ಪ್ರಥಮ ಬಾರಿಗೆ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಪಂದ್ಯಾವಳಿಗೆ ಶಾಸಕರ ಹಾಗೂ ಸಂಸದರ ನೆರವು ಕೋರಲಾಗುವುದು ಎಂದರು.</p>.<p>ಹಾವೇರಿ ವಿವಿ ಆವರಣದಲ್ಲಿ ಕ್ರೀಡಾ ಸಂಕೀರ್ಣ ಸಿದ್ಧಪಡಿಸಿ, ಒಂದೇ ಸೂರಿನಡಿ ಕ್ರೀಡಾ ತರಬೇತಿ ಶಿಬಿರಗಳು ಹಾಗೂ ಕ್ರೀಡೆಗಳನ್ನು ನಡೆಸಲು ಸರ್ಕಾರದ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಈ ವೇಳೆ ಪ್ರಾಚಾರ್ಯರಾದ ಮಲ್ಲಿಕಾರ್ಜುನ ಕಡ್ಡಿಪುಡಿ, ಮಂಜುನಾಥ ಪಾಟೀಲ, ಎನ್.ಬಿ.ನಾಗಲಾಪುರ, ವಿರೇಶ ಕುಮ್ಮೂರ, ಡಿ.ಟಿ.ಪಾಟೀಲ ಹಾಗೂ ಹಾವೇರಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಸಿ.ಜಿ.ಚಕ್ರಸಾಲಿ, ಕೋಚ್ ಮಂಜುಳಾ ಭಜಂತ್ರಿ ಹಾಗೂ ತೀರ್ಪುಗಾರ ಮಂಡಳಿ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-22-245216937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ಪಟ್ಟಣದಲ್ಲಿ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳಾ ಕಬಡ್ಡಿ ಪಂದ್ಯಾವಳಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹಾವೇರಿ ವಿವಿ ಉಪಕುಲಪತಿ ಸುರೇಶ ಜಂಗಮಶೆಟ್ಟಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧವಾರದಿಂದ ಆರಂಭವಾದ ಹಾವೇರಿ ವಿವಿ ವ್ಯಾಪ್ತಿಯ ಪುರುಷ ಹಾಗೂ ಮಹಿಳಾ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉದಯೋನ್ಮುಖ ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಾವೇರಿ ವಿವಿ ಕೆಲಸ ಮಾಡುತ್ತಿದೆ. ಪ್ರಥಮ ಬಾರಿಗೆ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಪಂದ್ಯಾವಳಿಗೆ ಶಾಸಕರ ಹಾಗೂ ಸಂಸದರ ನೆರವು ಕೋರಲಾಗುವುದು ಎಂದರು.</p>.<p>ಹಾವೇರಿ ವಿವಿ ಆವರಣದಲ್ಲಿ ಕ್ರೀಡಾ ಸಂಕೀರ್ಣ ಸಿದ್ಧಪಡಿಸಿ, ಒಂದೇ ಸೂರಿನಡಿ ಕ್ರೀಡಾ ತರಬೇತಿ ಶಿಬಿರಗಳು ಹಾಗೂ ಕ್ರೀಡೆಗಳನ್ನು ನಡೆಸಲು ಸರ್ಕಾರದ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಈ ವೇಳೆ ಪ್ರಾಚಾರ್ಯರಾದ ಮಲ್ಲಿಕಾರ್ಜುನ ಕಡ್ಡಿಪುಡಿ, ಮಂಜುನಾಥ ಪಾಟೀಲ, ಎನ್.ಬಿ.ನಾಗಲಾಪುರ, ವಿರೇಶ ಕುಮ್ಮೂರ, ಡಿ.ಟಿ.ಪಾಟೀಲ ಹಾಗೂ ಹಾವೇರಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಸಿ.ಜಿ.ಚಕ್ರಸಾಲಿ, ಕೋಚ್ ಮಂಜುಳಾ ಭಜಂತ್ರಿ ಹಾಗೂ ತೀರ್ಪುಗಾರ ಮಂಡಳಿ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-22-245216937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>