<p>ಕುದುರೆಗುಂಡಿ (ನರಸಿಂಹರಾಜಪುರ): ತಾಲ್ಲೂಕಿನ ಗಡಿಭಾಗದ ಕುದುರೆಗುಂಡಿಯ ಸರ್ಕಾರಿ ಪ್ರೌಢ ಶಾಲೆಯ ಆಟದ ಮೈದಾನದಲ್ಲಿ ಈಚೆಗೆ ಶೃಂಗೇರಿ ಶಿಷ್ಯ ಮಲೆನಾಡ ಹೆಬ್ಬಾರ ಬ್ರಾಹ್ಮಣ ಸಭಾದ ನರಸಿಂಹರಾಜಪುರ ಘಟಕ ಹಾಗೂ ಯುವ ಬಳಗದ ಸಹಯೋಗದಲ್ಲಿ ಹೆಬ್ಬಾರ ಕ್ರಿಕೆಟ್ ಲೀಗ್ ಶ್ರೀಪಾದ ಕಪ್ ಟೂರ್ನಿ ಮುಕ್ತಾಯಗೊಂಡಿತು.</p>.<p>ಹೊಸನಗರ ತಂಡ ಪ್ರಥಮ, ಹೊಕ್ಕಳಿಕೆ ತಂಡ ದ್ವಿತೀಯ ಸ್ಥಾನ ಪಡೆಯಿತು. ಕ್ರಿಕೆಟ್ ಟೂರ್ನಿಯಲ್ಲಿ ವಿವಿಧ ಜಿಲ್ಲೆಗಳ ಒಟ್ಟು 13 ತಂಡಗಳು ಭಾಗವಹಿಸಿದ್ದವು. ಗೆದ್ದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಕೇಂದ್ರ ಸಮಿತಿಯ ಗೌರವ ಅಧ್ಯಕ್ಷ ಜಿ.ಸಿ. ಗೋಪಾಲಕೃಷ್ಣ, ನಮ್ಮ ಸಂಘಟನೆಯು 20 ವರ್ಷದ ಹಿಂದೆ ಆರಂಭವಾಗಿದ್ದು ಯುವಕರು ಸಂಘಟನೆಯ ಆಶಯವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.</p>.<p>ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಕೇಂದ್ರ ಸಮಿತಿ ಅಧ್ಯಕ್ಷ ಕೋಟೆತೋಟ ವಿಜಯರಂಗ ಮಾತನಾಡಿ, ಕ್ರೀಡಾ ಕೂಟದಲ್ಲಿ ಕಾಣಿಸಿಕೊಂಡ ಯುವ ಶಕ್ತಿಯು ಭವಿಷ್ಯದಲ್ಲಿ ನಮ್ಮ ಸಂಘಟನೆಯ ಶಕ್ತಿಯೂ ಆಗಿದೆ. ನಮ್ಮ ಸಮಾಜವು ಯುವ ಶಕ್ತಿಯನ್ನು ಪೂರಕವಾಗಿ ಬಳಸಿಕೊಳ್ಳಲಿದೆ. ಎಂದರು.</p>.<p>ಶಿವಮೊಗ್ಗ ಶಾರದಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕಿ ಸಂದ್ಯಾ ಶ್ರೀನಾಥ್ ಮಾತನಾಡಿದರು.</p>.<p>ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಚರಣ ಹೆಬ್ಬಾರ, ನರಸಿಂಹರಾಜಪುರ ಘಟಕದ ಅಧ್ಯಕ್ಷ ಎ.ವಿ. ಪ್ರಶಾಂತ್, ಕೊಪ್ಪದ ಯಡಗೆರೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್ ಅಧ್ಯಕ್ಷ ವೈ.ಎಸ್. ಸುಬ್ರಹ್ಮಣ್ಯ, ಕೆ.ವಿ. ಪ್ರಭಾಕರ್, ಎ.ಎಸ್. ವೆಂಕಟರಮಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-126-1654723786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುದುರೆಗುಂಡಿ (ನರಸಿಂಹರಾಜಪುರ): ತಾಲ್ಲೂಕಿನ ಗಡಿಭಾಗದ ಕುದುರೆಗುಂಡಿಯ ಸರ್ಕಾರಿ ಪ್ರೌಢ ಶಾಲೆಯ ಆಟದ ಮೈದಾನದಲ್ಲಿ ಈಚೆಗೆ ಶೃಂಗೇರಿ ಶಿಷ್ಯ ಮಲೆನಾಡ ಹೆಬ್ಬಾರ ಬ್ರಾಹ್ಮಣ ಸಭಾದ ನರಸಿಂಹರಾಜಪುರ ಘಟಕ ಹಾಗೂ ಯುವ ಬಳಗದ ಸಹಯೋಗದಲ್ಲಿ ಹೆಬ್ಬಾರ ಕ್ರಿಕೆಟ್ ಲೀಗ್ ಶ್ರೀಪಾದ ಕಪ್ ಟೂರ್ನಿ ಮುಕ್ತಾಯಗೊಂಡಿತು.</p>.<p>ಹೊಸನಗರ ತಂಡ ಪ್ರಥಮ, ಹೊಕ್ಕಳಿಕೆ ತಂಡ ದ್ವಿತೀಯ ಸ್ಥಾನ ಪಡೆಯಿತು. ಕ್ರಿಕೆಟ್ ಟೂರ್ನಿಯಲ್ಲಿ ವಿವಿಧ ಜಿಲ್ಲೆಗಳ ಒಟ್ಟು 13 ತಂಡಗಳು ಭಾಗವಹಿಸಿದ್ದವು. ಗೆದ್ದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಕೇಂದ್ರ ಸಮಿತಿಯ ಗೌರವ ಅಧ್ಯಕ್ಷ ಜಿ.ಸಿ. ಗೋಪಾಲಕೃಷ್ಣ, ನಮ್ಮ ಸಂಘಟನೆಯು 20 ವರ್ಷದ ಹಿಂದೆ ಆರಂಭವಾಗಿದ್ದು ಯುವಕರು ಸಂಘಟನೆಯ ಆಶಯವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.</p>.<p>ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಕೇಂದ್ರ ಸಮಿತಿ ಅಧ್ಯಕ್ಷ ಕೋಟೆತೋಟ ವಿಜಯರಂಗ ಮಾತನಾಡಿ, ಕ್ರೀಡಾ ಕೂಟದಲ್ಲಿ ಕಾಣಿಸಿಕೊಂಡ ಯುವ ಶಕ್ತಿಯು ಭವಿಷ್ಯದಲ್ಲಿ ನಮ್ಮ ಸಂಘಟನೆಯ ಶಕ್ತಿಯೂ ಆಗಿದೆ. ನಮ್ಮ ಸಮಾಜವು ಯುವ ಶಕ್ತಿಯನ್ನು ಪೂರಕವಾಗಿ ಬಳಸಿಕೊಳ್ಳಲಿದೆ. ಎಂದರು.</p>.<p>ಶಿವಮೊಗ್ಗ ಶಾರದಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕಿ ಸಂದ್ಯಾ ಶ್ರೀನಾಥ್ ಮಾತನಾಡಿದರು.</p>.<p>ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಚರಣ ಹೆಬ್ಬಾರ, ನರಸಿಂಹರಾಜಪುರ ಘಟಕದ ಅಧ್ಯಕ್ಷ ಎ.ವಿ. ಪ್ರಶಾಂತ್, ಕೊಪ್ಪದ ಯಡಗೆರೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್ ಅಧ್ಯಕ್ಷ ವೈ.ಎಸ್. ಸುಬ್ರಹ್ಮಣ್ಯ, ಕೆ.ವಿ. ಪ್ರಭಾಕರ್, ಎ.ಎಸ್. ವೆಂಕಟರಮಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-126-1654723786</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>