<p>ದಾವಣಗೆರೆ: ‘ನಗರದ ನಿಜಲಿಂಗಪ್ಪ ಬಡಾವಣೆಯ ದೇವನಗರಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಫುಟ್ಬಾಲ್ ಹಾಗೂ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಿಯನ್ನು ಮೇ 9ರಿಂದ 17ರವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ದೇವನಗರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಆರ್. ಚಂದ್ರಶೇಖರ್ ತಿಳಿಸಿದರು.</p>.<p>‘ಬಿಜೆಪಿ ಮುಖಂಡ ಶಿವನಳ್ಳಿ ರಮೇಶ್ ಅವರು ಮೇ 9ರಂದು ಬೆಳಿಗ್ಗೆ 8.30ಕ್ಕೆ ಟೂರ್ನಿಗೆ ಚಾಲನೆ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಪಾಲ್ಗೊಳ್ಳಲಿದ್ದಾರೆ. ಫುಟ್ಬಾಲ್ ಟೂರ್ನಿಯಲ್ಲಿ ಗೋವಾ, ಕೇರಳ ಸೇರಿ ಹಲವು ರಾಜ್ಯಗಳ ತಂಡಗಳು ಭಾಗವಹಿಸಲಿವೆ. ಪ್ರಥಮ ₹ 15,000, ದ್ವಿತೀಯ ಬಹುಮಾನ ₹ 8,000 ಮತ್ತು ಟ್ರೋಫಿ ನೀಡಲಾಗುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಕ್ರಿಕೆಟ್ ಟೂರ್ನಿಗೆ ₹ 15,000 ಪ್ರಥಮ, ₹ 8,000 ದ್ವಿತೀಯ, ಮಿನಿ ಕ್ರಿಕೆಟ್ ಟೂರ್ನಿಗೆ ₹ 20,000 ಪ್ರಥಮ ಹಾಗೂ ₹ 10,000 ದ್ವಿತೀಯ ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಮೇ 17ರಂದು ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.</p>.<p>ಸಂಘದ ಸಹಕಾರ್ಯದರ್ಶಿಗಳಾದ ವಿ.ಆನಂದ್, ಸಂದೇಶ ನಾಯಕ, ಡಿ.ಆರ್.ದೊಡ್ಡಪ್ಪ, ಕೆ.ಎಂ. ವಾಗೀಶ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-649713059</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ನಗರದ ನಿಜಲಿಂಗಪ್ಪ ಬಡಾವಣೆಯ ದೇವನಗರಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಫುಟ್ಬಾಲ್ ಹಾಗೂ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಿಯನ್ನು ಮೇ 9ರಿಂದ 17ರವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ದೇವನಗರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಆರ್. ಚಂದ್ರಶೇಖರ್ ತಿಳಿಸಿದರು.</p>.<p>‘ಬಿಜೆಪಿ ಮುಖಂಡ ಶಿವನಳ್ಳಿ ರಮೇಶ್ ಅವರು ಮೇ 9ರಂದು ಬೆಳಿಗ್ಗೆ 8.30ಕ್ಕೆ ಟೂರ್ನಿಗೆ ಚಾಲನೆ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಪಾಲ್ಗೊಳ್ಳಲಿದ್ದಾರೆ. ಫುಟ್ಬಾಲ್ ಟೂರ್ನಿಯಲ್ಲಿ ಗೋವಾ, ಕೇರಳ ಸೇರಿ ಹಲವು ರಾಜ್ಯಗಳ ತಂಡಗಳು ಭಾಗವಹಿಸಲಿವೆ. ಪ್ರಥಮ ₹ 15,000, ದ್ವಿತೀಯ ಬಹುಮಾನ ₹ 8,000 ಮತ್ತು ಟ್ರೋಫಿ ನೀಡಲಾಗುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಕ್ರಿಕೆಟ್ ಟೂರ್ನಿಗೆ ₹ 15,000 ಪ್ರಥಮ, ₹ 8,000 ದ್ವಿತೀಯ, ಮಿನಿ ಕ್ರಿಕೆಟ್ ಟೂರ್ನಿಗೆ ₹ 20,000 ಪ್ರಥಮ ಹಾಗೂ ₹ 10,000 ದ್ವಿತೀಯ ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಮೇ 17ರಂದು ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.</p>.<p>ಸಂಘದ ಸಹಕಾರ್ಯದರ್ಶಿಗಳಾದ ವಿ.ಆನಂದ್, ಸಂದೇಶ ನಾಯಕ, ಡಿ.ಆರ್.ದೊಡ್ಡಪ್ಪ, ಕೆ.ಎಂ. ವಾಗೀಶ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-649713059</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>