<p>ದೇವನಹಳ್ಳಿ: ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣ ಸಂಘದಿಂದ ಮಂಗಳವಾರ ಆಯೋಜಿಸಿದ್ದ 50 ವರ್ಷಕ್ಕಿಂತ ಕಡಿಮೆ ಹಾಗೂ 50 ವರ್ಷ ಮೇಲ್ಪಟ್ಟವರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್–2026ರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>50 ವರ್ಷಕ್ಕಿಂತ ಕಡಿಮೆ ವಯೋಮಿತಿಯಲ್ಲಿ ಅಭಿ–ಅಕ್ಷಯ್ ಪ್ರಥಮ, ವೆಂಕಿ–ಬಾಬು ದ್ವಿತೀಯ, ಪ್ರಜ್ವಲ್–ಚಿರಾಗ್ ತೃತೀಯ, ಪರಿಣಿತ್ –ಚಮಂತ್ ನಾಲ್ಕವೇ ಸ್ಥಾನ ಪಡೆದರು.</p>.<p>50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಕೆ. ಮಂಜು–ವೇಣುಗೋಪಾಲ್ ಪ್ರಥಮ, ಲಕ್ಷ್ಮೀನಾರಾಯಣ್–ರಾಜು ದ್ವಿತೀಯ, ಎಸ್.ಆರ್. ರವಿಕುಮಾರ್ –ನಟರಾಜ್ ತೃತೀಯ, ಮಹೇಶ್ –ಗೋಪಾಲ್ ಚತುರ್ಥ ಸ್ಥಾನ ಪಡೆದರು.</p>.<p>ಬಹುಮಾನ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ಮಂಜು, ಶಟಲ್ ಬ್ಯಾಡ್ಮಿಂಟನ್ಂತಹ ಕ್ರೀಡೆಗಳು ದೈಹಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತವೆ. ಕ್ರೀಡೆಗಳಲ್ಲಿ ಸೋಲು–ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯ ಎಂದರು.</p>.<p>ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್. ರವಿಕುಮಾರ್, ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಗುರಿ ಹೊಂದಬೇಕು ಎಂದು ತಿಳಿಸಿದರು.</p>.<p>ಸಂಘದ ಮಾಜಿ ಅಧ್ಯಕ್ಷ ಎನ್. ರಘು, ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಬೇಕು. ಸಂಘದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-15-1614623737</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣ ಸಂಘದಿಂದ ಮಂಗಳವಾರ ಆಯೋಜಿಸಿದ್ದ 50 ವರ್ಷಕ್ಕಿಂತ ಕಡಿಮೆ ಹಾಗೂ 50 ವರ್ಷ ಮೇಲ್ಪಟ್ಟವರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್–2026ರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>50 ವರ್ಷಕ್ಕಿಂತ ಕಡಿಮೆ ವಯೋಮಿತಿಯಲ್ಲಿ ಅಭಿ–ಅಕ್ಷಯ್ ಪ್ರಥಮ, ವೆಂಕಿ–ಬಾಬು ದ್ವಿತೀಯ, ಪ್ರಜ್ವಲ್–ಚಿರಾಗ್ ತೃತೀಯ, ಪರಿಣಿತ್ –ಚಮಂತ್ ನಾಲ್ಕವೇ ಸ್ಥಾನ ಪಡೆದರು.</p>.<p>50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಕೆ. ಮಂಜು–ವೇಣುಗೋಪಾಲ್ ಪ್ರಥಮ, ಲಕ್ಷ್ಮೀನಾರಾಯಣ್–ರಾಜು ದ್ವಿತೀಯ, ಎಸ್.ಆರ್. ರವಿಕುಮಾರ್ –ನಟರಾಜ್ ತೃತೀಯ, ಮಹೇಶ್ –ಗೋಪಾಲ್ ಚತುರ್ಥ ಸ್ಥಾನ ಪಡೆದರು.</p>.<p>ಬಹುಮಾನ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ಮಂಜು, ಶಟಲ್ ಬ್ಯಾಡ್ಮಿಂಟನ್ಂತಹ ಕ್ರೀಡೆಗಳು ದೈಹಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತವೆ. ಕ್ರೀಡೆಗಳಲ್ಲಿ ಸೋಲು–ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯ ಎಂದರು.</p>.<p>ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್. ರವಿಕುಮಾರ್, ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಗುರಿ ಹೊಂದಬೇಕು ಎಂದು ತಿಳಿಸಿದರು.</p>.<p>ಸಂಘದ ಮಾಜಿ ಅಧ್ಯಕ್ಷ ಎನ್. ರಘು, ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಬೇಕು. ಸಂಘದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-15-1614623737</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>