<p>ಗದಗ: ‘ಕಬಡ್ಡಿಯಂತಹ ದೇಸಿ ಕ್ರೀಡೆಗಳು ಭಾರತೀಯ ಸಂಸ್ಕೃತಿ, ದೈಹಿಕ ಸಾಮರ್ಥ್ಯ ಮತ್ತು ತಂಡ ಮನೋಭಾವದ ಪ್ರತೀಕವಾಗಿವೆ’ ಎಂದು ಎಸ್ಟಿಎಸ್ಕೆಕೆ ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್.ಪಟ್ಟಣಶೆಟ್ಟಿ ಹೇಳಿದರು.</p>.<p>ನಗರದ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಟಿಯು ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿ ದೈಹಿಕ ಚಟುವಟಿಕೆಗಳಿಗೆ ಮಹತ್ವವಿದೆ. ಕ್ರೀಡೆಗಳು ಆರೋಗ್ಯ ನೀಡುವುದರ ಜತೆಗೆ ಶಿಸ್ತು, ಸಹಕಾರ ಮತ್ತು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತವೆ’ ಎಂದರು.</p>.<p>‘ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರನು ಉತ್ತಮ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಸ್ಪರ್ಧೆಯನ್ನು ಸ್ಮರಣೀಯವಾಗಿಸಬೇಕು’ ಎಂದು ಹೇಳಿದರು.</p>.<p>ಅಂತಿಮ ಪಂದ್ಯದಲ್ಲಿ ವಿಟಿಯು ಪಿಜಿ ಸೆಂಟರ್, ಬೆಳಗಾವಿ ತಂಡವು ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್, ಬೆಳಗಾವಿ ತಂಡವನ್ನು 31-21 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕೆಎಲ್ಇ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ತಂಡ ಮೂರನೇ ಸ್ಥಾನ ಪಡೆದುಕೊಂಡರೆ, ಕೆಎಲ್ಎಸ್ ವಿ.ಡಿ.ಆರ್.ಐ.ಟಿ. ಹಳಿಯಾಳ ತಂಡ ನಾಲ್ಕನೇ ಸ್ಥಾನ ಪಡೆಯಿತು.</p>.<p>ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಂ.ಅವಟಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.</p>.<p>ಉಪ ಪ್ರಾಂಶುಪಾಲ ಡಾ. ಜಿ.ಡಿ.ರೇವಣ್ಕರ್, ಸಿಎಸ್ಡಿ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ ಮಾಲಗಿತ್ತಿ, ಸಿಎಸ್ ವಿಭಾಗದ ಮುಖ್ಯಸ್ಥ ಡಾ. ರಮೇಶ ಬಡಿಗೇರ, ಡಾ. ಮಲ್ಲಿಕಾರ್ಜುನ, ದೈಹಿಕ ಶಿಕ್ಷಣ ನಿರ್ದೇಶಕ ವೀರೇಶ ಸೂಡಿ, ಕ್ರೀಡಾ ಸಂಯೋಜಕ ಪ್ರೊ. ಬಸನಗೌಡ ಪಾಟೀಲ ಇದ್ದರು.</p>.<p>ಬೆಳಗಾವಿ ವಿಭಾಗದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 16 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-1527529156</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಕಬಡ್ಡಿಯಂತಹ ದೇಸಿ ಕ್ರೀಡೆಗಳು ಭಾರತೀಯ ಸಂಸ್ಕೃತಿ, ದೈಹಿಕ ಸಾಮರ್ಥ್ಯ ಮತ್ತು ತಂಡ ಮನೋಭಾವದ ಪ್ರತೀಕವಾಗಿವೆ’ ಎಂದು ಎಸ್ಟಿಎಸ್ಕೆಕೆ ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್.ಪಟ್ಟಣಶೆಟ್ಟಿ ಹೇಳಿದರು.</p>.<p>ನಗರದ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಟಿಯು ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿ ದೈಹಿಕ ಚಟುವಟಿಕೆಗಳಿಗೆ ಮಹತ್ವವಿದೆ. ಕ್ರೀಡೆಗಳು ಆರೋಗ್ಯ ನೀಡುವುದರ ಜತೆಗೆ ಶಿಸ್ತು, ಸಹಕಾರ ಮತ್ತು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತವೆ’ ಎಂದರು.</p>.<p>‘ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರನು ಉತ್ತಮ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಸ್ಪರ್ಧೆಯನ್ನು ಸ್ಮರಣೀಯವಾಗಿಸಬೇಕು’ ಎಂದು ಹೇಳಿದರು.</p>.<p>ಅಂತಿಮ ಪಂದ್ಯದಲ್ಲಿ ವಿಟಿಯು ಪಿಜಿ ಸೆಂಟರ್, ಬೆಳಗಾವಿ ತಂಡವು ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್, ಬೆಳಗಾವಿ ತಂಡವನ್ನು 31-21 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕೆಎಲ್ಇ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ತಂಡ ಮೂರನೇ ಸ್ಥಾನ ಪಡೆದುಕೊಂಡರೆ, ಕೆಎಲ್ಎಸ್ ವಿ.ಡಿ.ಆರ್.ಐ.ಟಿ. ಹಳಿಯಾಳ ತಂಡ ನಾಲ್ಕನೇ ಸ್ಥಾನ ಪಡೆಯಿತು.</p>.<p>ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಂ.ಅವಟಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.</p>.<p>ಉಪ ಪ್ರಾಂಶುಪಾಲ ಡಾ. ಜಿ.ಡಿ.ರೇವಣ್ಕರ್, ಸಿಎಸ್ಡಿ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ ಮಾಲಗಿತ್ತಿ, ಸಿಎಸ್ ವಿಭಾಗದ ಮುಖ್ಯಸ್ಥ ಡಾ. ರಮೇಶ ಬಡಿಗೇರ, ಡಾ. ಮಲ್ಲಿಕಾರ್ಜುನ, ದೈಹಿಕ ಶಿಕ್ಷಣ ನಿರ್ದೇಶಕ ವೀರೇಶ ಸೂಡಿ, ಕ್ರೀಡಾ ಸಂಯೋಜಕ ಪ್ರೊ. ಬಸನಗೌಡ ಪಾಟೀಲ ಇದ್ದರು.</p>.<p>ಬೆಳಗಾವಿ ವಿಭಾಗದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 16 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-1527529156</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>