<p>ಗೋಕಾಕ: ರಾಹುಲ್ ಟ್ರೋಫಿ - ಸೀಸನ್ 3 ಜಿಲ್ಲಾ ಮತ್ತು ರಾಷ್ಟ್ರ ಮಟ್ಟದ ಹೊನಲು-ಬೆಳಕಿನ ಕ್ರಿಕೆಟ್ ಟೂರ್ನಿಗಳಿಗೆ ಬುಧವಾರ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಹಶೀಲ್ದಾರ್ ಡಾ. ಮೋಹನ ಭಸ್ಮೆ ಚಾಲನೆ ನೀಡಿದರು.</p>.<p>ಬುಧವಾರ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಇಂದಿನಿಂದ ಮೇ 9ರವರೆಗೆ ಜಿಲ್ಲಾ ಮಟ್ಟದ ಮಟ್ಟದ ಪಂದ್ಯಾವಳಿಗಳು ನಡೆಯಲಿದ್ದು, ಈ ಪಂದ್ಯಾವಳಿಯಲ್ಲಿ 26 ತಂಡಗಳು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ಪ್ರಥಮ ಬಹುಮಾನ ನಗದು ₹ 1 ಲಕ್ಷ ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ನಗದು ₹ 50 ಸಾವಿರ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು’ ಎಂದರು.</p>.<p>ಮೇ 10ರಿಂದ 14ರವರೆಗೆ ರಾಷ್ಟ್ರ ಮಟ್ಟದ ರಾಹುಲ್ ಟ್ರೋಫಿ ಕ್ರಿಕೆಟ್ ಟೂರ್ನಿ ಜರುಗಲಿದ್ದು, ಈ ಪಂದ್ಯಾವಳಿಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕೇರಳಂ ಸೇರಿದಂತೆ ವಿವಿಧ ರಾಜ್ಯಗಳಿಂದ ಒಟ್ಟು 16 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನ ನಗದು ₹ 3 ಲಕ್ಷ, ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ₹ 2 ಲಕ್ಷ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಎರಡೂ ಪಂದ್ಯಾವಳಿಗಳಲ್ಲಿ ಪಂದ್ಯ ಪುರುಷ, ಪಂದ್ಯಶ್ರೇಷ್ಠ ಸೇರಿದಂತೆ ಅನೇಕ ವೈಯಕ್ತಿಕ ಬಹುಮಾನ ನೀಡಲಾಗುವುದು</p>.<p>ಪಿಎಸ್ಐ ಕಿರಣ ಮೋಹಿತೆ, ಸಂಘಟಕ ರಿಯಾಜ ಚೌಗಲಾ, ಸಂತೋಷ ಭಟ್, ಹನೀಫ್ ಶಾಬಾಶಖಾನ, ಮಂಜುನಾಥ್ ಗಂಗಣ್ಣವರ, ಜುಬೇರ ಮಿರ್ಜಾಬಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-21-2105558517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ರಾಹುಲ್ ಟ್ರೋಫಿ - ಸೀಸನ್ 3 ಜಿಲ್ಲಾ ಮತ್ತು ರಾಷ್ಟ್ರ ಮಟ್ಟದ ಹೊನಲು-ಬೆಳಕಿನ ಕ್ರಿಕೆಟ್ ಟೂರ್ನಿಗಳಿಗೆ ಬುಧವಾರ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಹಶೀಲ್ದಾರ್ ಡಾ. ಮೋಹನ ಭಸ್ಮೆ ಚಾಲನೆ ನೀಡಿದರು.</p>.<p>ಬುಧವಾರ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಇಂದಿನಿಂದ ಮೇ 9ರವರೆಗೆ ಜಿಲ್ಲಾ ಮಟ್ಟದ ಮಟ್ಟದ ಪಂದ್ಯಾವಳಿಗಳು ನಡೆಯಲಿದ್ದು, ಈ ಪಂದ್ಯಾವಳಿಯಲ್ಲಿ 26 ತಂಡಗಳು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ಪ್ರಥಮ ಬಹುಮಾನ ನಗದು ₹ 1 ಲಕ್ಷ ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ನಗದು ₹ 50 ಸಾವಿರ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು’ ಎಂದರು.</p>.<p>ಮೇ 10ರಿಂದ 14ರವರೆಗೆ ರಾಷ್ಟ್ರ ಮಟ್ಟದ ರಾಹುಲ್ ಟ್ರೋಫಿ ಕ್ರಿಕೆಟ್ ಟೂರ್ನಿ ಜರುಗಲಿದ್ದು, ಈ ಪಂದ್ಯಾವಳಿಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕೇರಳಂ ಸೇರಿದಂತೆ ವಿವಿಧ ರಾಜ್ಯಗಳಿಂದ ಒಟ್ಟು 16 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನ ನಗದು ₹ 3 ಲಕ್ಷ, ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ₹ 2 ಲಕ್ಷ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಎರಡೂ ಪಂದ್ಯಾವಳಿಗಳಲ್ಲಿ ಪಂದ್ಯ ಪುರುಷ, ಪಂದ್ಯಶ್ರೇಷ್ಠ ಸೇರಿದಂತೆ ಅನೇಕ ವೈಯಕ್ತಿಕ ಬಹುಮಾನ ನೀಡಲಾಗುವುದು</p>.<p>ಪಿಎಸ್ಐ ಕಿರಣ ಮೋಹಿತೆ, ಸಂಘಟಕ ರಿಯಾಜ ಚೌಗಲಾ, ಸಂತೋಷ ಭಟ್, ಹನೀಫ್ ಶಾಬಾಶಖಾನ, ಮಂಜುನಾಥ್ ಗಂಗಣ್ಣವರ, ಜುಬೇರ ಮಿರ್ಜಾಬಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-21-2105558517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>