<p>ಹಾಸನ: ಹಾಸನ ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಕ್ರೀಡಾಕೂಟದ ಹ್ಯಾಂಡ್ ಬಾಲ್ ಹಾಗೂ ಬ್ಯಾಸ್ಕೆಟ್ಬಾಲ್ ಕ್ರೀಡಾಕೂಟಗಳಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಆವರಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p>ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಈಚೆಗೆ ನಡೆದ ಹ್ಯಾಂಡ್ ಬಾಲ್ ಹಾಗೂ ಬ್ಯಾಸ್ಕೆಟ್ ಬಾಲ್ ಅಂತಿಮ ಹಣಾಹಣಿಯಲ್ಲಿ ಎಂ.ಜಿ. ರಸ್ತೆ ಮಹಿಳಾ ಸರ್ಕಾರಿ ಕಾಲೇಜಿನೊಂದಿಗೆ ಸೆಣಸಾಟ ನಡೆಸಿದ ಆರ್.ಸಿ. ರಸ್ತೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು, ಎರಡೂ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದರು.</p>.<p>ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ವಿ. ಮುರಳಿ ಮಾರ್ಗದರ್ಶನದಲ್ಲಿ ಕ್ರೀಡಾಪಟುಗಳು ತರಬೇತಿ ಪಡೆದುಕೊಂಡಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಹಾಗೂ ಕ್ರೀಡಾ ವಿಭಾಗದ ಸಂಚಾಲಕ ಡಾ.ಕೆ.ಆರ್. ಸುರೇಶ್ ಕುಮಾರ್ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕ ವಿತರಣೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-36-693783192</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಹಾಸನ ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಕ್ರೀಡಾಕೂಟದ ಹ್ಯಾಂಡ್ ಬಾಲ್ ಹಾಗೂ ಬ್ಯಾಸ್ಕೆಟ್ಬಾಲ್ ಕ್ರೀಡಾಕೂಟಗಳಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಆವರಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p>ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಈಚೆಗೆ ನಡೆದ ಹ್ಯಾಂಡ್ ಬಾಲ್ ಹಾಗೂ ಬ್ಯಾಸ್ಕೆಟ್ ಬಾಲ್ ಅಂತಿಮ ಹಣಾಹಣಿಯಲ್ಲಿ ಎಂ.ಜಿ. ರಸ್ತೆ ಮಹಿಳಾ ಸರ್ಕಾರಿ ಕಾಲೇಜಿನೊಂದಿಗೆ ಸೆಣಸಾಟ ನಡೆಸಿದ ಆರ್.ಸಿ. ರಸ್ತೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು, ಎರಡೂ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದರು.</p>.<p>ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ವಿ. ಮುರಳಿ ಮಾರ್ಗದರ್ಶನದಲ್ಲಿ ಕ್ರೀಡಾಪಟುಗಳು ತರಬೇತಿ ಪಡೆದುಕೊಂಡಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಹಾಗೂ ಕ್ರೀಡಾ ವಿಭಾಗದ ಸಂಚಾಲಕ ಡಾ.ಕೆ.ಆರ್. ಸುರೇಶ್ ಕುಮಾರ್ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕ ವಿತರಣೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-36-693783192</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>