<p>ಮಡಿಕೇರಿ: ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬಗಳ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಪರ್ಲಕೋಟಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಪಂದ್ಯದಲ್ಲಿ ಪರ್ಲಕೋಟಿ ತಂಡವು ಚೆರಿಯಮನೆ ತಂಡದ ವಿರುದ್ಧ ಜಯ ಸಾಧಿಸಿತು.</p>.<p>ಮೊದಲು ಬ್ಯಾಟ್ ಮಾಡಿದ ಚೆರಿಯಮನೆ ತಂಡವು ನಿಗದಿತ 6 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 38 ರನ್ ಗಳಿಸಿತು. ಗುರಿ ಬೆನ್ನತ್ತಿದ ಪರ್ಲಕೋಟಿ ತಂಡವು ಕೇವಲ 3.5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 41 ರನ್ಗಳಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.</p>.<p>ಇದಕ್ಕೂ ಮುನ್ನ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಮೈದಾನದಲ್ಲಿ ಬ್ಯಾಟ್ ಬೀಸುವ ಮೂಲಕ ಫೈನಲ್ ಪಂದ್ಯಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಪೊನ್ನಣ್ಣ, ‘ಗೌಡ ಯುವ ವೇದಿಕೆ ಈ ಒಂದು ಕ್ರಿಕೆಟ್ ಪಂದ್ಯಾವಳಿಯನ್ನು ಹಲವು ವರ್ಷದಿಂದ ಹಬ್ಬದ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿದೆ. ಈ ಬಾರಿಯೂ ಕ್ರೀಡಾಕೂಟ ಉತ್ತಮ ರೀತಿಯಲ್ಲಿ ಆಯೋಜನೆಗೊಂಡಿದೆ. ಕ್ರೀಡಾಕೂಟ ಆಯೋಜನೆ ಮಾಡುವುದು ಸುಲಭದ ಮಾತಲ್ಲ. ಅದರ ಹಿಂದೆ ಸಾಕಷ್ಟು ಜನರ ಪರಿಶ್ರಮ ಇದೆ’ ಎಂದು ಹೇಳಿದರು.</p>.<p>ಕ್ರೀಡಾ ಕ್ರೇತ್ರಕ್ಕೆ ಕೊಡಗಿನ ಕ್ರೀಡಾಪಟುಗಳ ಕೊಡುಗೆ ಬಹಳ ಅಪಾರ. ಗ್ರಾಮೀಣ ಪ್ರತಿಭೆಗಳನ್ನು ಹೊರ ತರಲು ಇದೊಂದು ಉತ್ತಮ ಅವಕಾಶ. ಜೊತೆಗೆ, ವಿವಿಧ ಕ್ರೀಡಾಕೂಟದಲ್ಲಿ ಕುಟುಂಬಗಳನ್ನು ಒಗ್ಗೂಡಿಸಲು ಇದೊಂದು ಉತ್ತಮ ವೇದಿಕೆ ಕೂಡ ಹೌದು ಎಂದರು.</p>.<p>‘ಕುಟುಂಬಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಕ್ರೀಡಾಕೂಟಕ್ಕೆ ನಮ್ಮ ಸಹಕಾರ ಕೂಡ ಇರಲಿದೆ. ಸರ್ಕಾರದ ಮಟ್ಟದಿಂದಲೂ ಸಹಕಾರ ತರಲು ನಾವು ಕೂಡ ಪಯತ್ನಪಡುತ್ತಿದೇವೆ. ಕ್ರೀಡಾಕೂಟ ಉತ್ತಮವಾಗಿ ಮೂಡಿ ಬಂದಿದೆ’ ಎಂದು ಶ್ಲಾಘಿಸಿದರು.</p>.<p>ಅರುಣ್ ಮಾಚಯ್ಯ ಮಾತನಾಡಿ, ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅದ್ದೂರಿ ಜಂಬರ ನಡೆಯುತ್ತಿದೆ. ಕೊಡಗಿಗೂ ಬೇರೆ ಜಿಲ್ಲೆಗಳ ಕ್ರೀಡಾಕೂಟಗಳಿಗೂ ಬಹಳ ವ್ಯತ್ಯಾಸ ಇದೆ. ಈ ಕ್ರೀಡಾಕೂಟವನ್ನ ಒಂದು ರೀತಿಯಲ್ಲಿ ಹಬ್ಬದಂತೆ ಆಚರಿಸುತ್ತಿರುವುದು ಬಹಳ ಖುಷಿಯ ವಿಚಾರ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-1745892057</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬಗಳ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಪರ್ಲಕೋಟಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಪಂದ್ಯದಲ್ಲಿ ಪರ್ಲಕೋಟಿ ತಂಡವು ಚೆರಿಯಮನೆ ತಂಡದ ವಿರುದ್ಧ ಜಯ ಸಾಧಿಸಿತು.</p>.<p>ಮೊದಲು ಬ್ಯಾಟ್ ಮಾಡಿದ ಚೆರಿಯಮನೆ ತಂಡವು ನಿಗದಿತ 6 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 38 ರನ್ ಗಳಿಸಿತು. ಗುರಿ ಬೆನ್ನತ್ತಿದ ಪರ್ಲಕೋಟಿ ತಂಡವು ಕೇವಲ 3.5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 41 ರನ್ಗಳಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.</p>.<p>ಇದಕ್ಕೂ ಮುನ್ನ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಮೈದಾನದಲ್ಲಿ ಬ್ಯಾಟ್ ಬೀಸುವ ಮೂಲಕ ಫೈನಲ್ ಪಂದ್ಯಕ್ಕೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಪೊನ್ನಣ್ಣ, ‘ಗೌಡ ಯುವ ವೇದಿಕೆ ಈ ಒಂದು ಕ್ರಿಕೆಟ್ ಪಂದ್ಯಾವಳಿಯನ್ನು ಹಲವು ವರ್ಷದಿಂದ ಹಬ್ಬದ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿದೆ. ಈ ಬಾರಿಯೂ ಕ್ರೀಡಾಕೂಟ ಉತ್ತಮ ರೀತಿಯಲ್ಲಿ ಆಯೋಜನೆಗೊಂಡಿದೆ. ಕ್ರೀಡಾಕೂಟ ಆಯೋಜನೆ ಮಾಡುವುದು ಸುಲಭದ ಮಾತಲ್ಲ. ಅದರ ಹಿಂದೆ ಸಾಕಷ್ಟು ಜನರ ಪರಿಶ್ರಮ ಇದೆ’ ಎಂದು ಹೇಳಿದರು.</p>.<p>ಕ್ರೀಡಾ ಕ್ರೇತ್ರಕ್ಕೆ ಕೊಡಗಿನ ಕ್ರೀಡಾಪಟುಗಳ ಕೊಡುಗೆ ಬಹಳ ಅಪಾರ. ಗ್ರಾಮೀಣ ಪ್ರತಿಭೆಗಳನ್ನು ಹೊರ ತರಲು ಇದೊಂದು ಉತ್ತಮ ಅವಕಾಶ. ಜೊತೆಗೆ, ವಿವಿಧ ಕ್ರೀಡಾಕೂಟದಲ್ಲಿ ಕುಟುಂಬಗಳನ್ನು ಒಗ್ಗೂಡಿಸಲು ಇದೊಂದು ಉತ್ತಮ ವೇದಿಕೆ ಕೂಡ ಹೌದು ಎಂದರು.</p>.<p>‘ಕುಟುಂಬಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಕ್ರೀಡಾಕೂಟಕ್ಕೆ ನಮ್ಮ ಸಹಕಾರ ಕೂಡ ಇರಲಿದೆ. ಸರ್ಕಾರದ ಮಟ್ಟದಿಂದಲೂ ಸಹಕಾರ ತರಲು ನಾವು ಕೂಡ ಪಯತ್ನಪಡುತ್ತಿದೇವೆ. ಕ್ರೀಡಾಕೂಟ ಉತ್ತಮವಾಗಿ ಮೂಡಿ ಬಂದಿದೆ’ ಎಂದು ಶ್ಲಾಘಿಸಿದರು.</p>.<p>ಅರುಣ್ ಮಾಚಯ್ಯ ಮಾತನಾಡಿ, ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅದ್ದೂರಿ ಜಂಬರ ನಡೆಯುತ್ತಿದೆ. ಕೊಡಗಿಗೂ ಬೇರೆ ಜಿಲ್ಲೆಗಳ ಕ್ರೀಡಾಕೂಟಗಳಿಗೂ ಬಹಳ ವ್ಯತ್ಯಾಸ ಇದೆ. ಈ ಕ್ರೀಡಾಕೂಟವನ್ನ ಒಂದು ರೀತಿಯಲ್ಲಿ ಹಬ್ಬದಂತೆ ಆಚರಿಸುತ್ತಿರುವುದು ಬಹಳ ಖುಷಿಯ ವಿಚಾರ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-1745892057</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>