<p>ಮಡಿಕೇರಿ: ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ಟೂರ್ನಿ’ ಯ ಪುರುಷರ ವಿಭಾಗದಲ್ಲಿ ಮಂಗಳವಾರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳಲ್ಲಿ ಚೆಕ್ಕೇರ, ಪಂದ್ಯಂಡ, ಮಾಳೇಟಿರ ಹಾಗೂ ಪಾರುವಂಡ ತಂಡಗಳು ಗೆಲುವು ಸಾಧಿಸಿ ಸೆಮಿಫೈನಲ್ಸ್ ತಲುಪಿದವು.</p>.<p>ಮೈದಾನ 1 ಲಾಲು ಮುದ್ದಯ್ಯ ಮೈದಾನದಲ್ಲಿ ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ಗಳಷ್ಟು ಬೃಹತ್ ಸ್ಕೋರ್ ಕಲೆಹಾಕಿತು. ಮಲ್ಲಜ್ಜಿರ 8 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ಗಳನ್ನಷ್ಟೇ ಗಳಿಸಿ ಟೂರ್ನಿಯಿಂದ ನಿರ್ಗಮಿಸಿತು. ಚೆಕ್ಕೇರ ಆಕರ್ಷ್ 47 ರನ್ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.</p>.<p>ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯoಡ ತಂಡಕ್ಕೆ 7 ವಿಕೆಟ್ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೋಟನಾಳಿರ 8 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 55 ರನ್ಗಳನ್ನು ಗಳಿಸಿತು. ಪಂದ್ಯಂಡ 4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 59 ರನ್ ಗಳಿಸಿ ಗೆಲುವು ದಾಖಲಿಸಿತು. ಮೋಟನಾಳಿರ ಶರತ್ 25 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಪಂದ್ಯಂಡ ಅಯ್ಯಪ್ಪ 18 ರನ್ ಗಳಿಸಿದರು.</p>.<p>ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ನಡುವಿನ ಪಂದ್ಯದಲ್ಲಿ ಮಾಳೇಟಿರ 40 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 8 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿತು. ಅಳಮೇಂಗಡ 8 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ಗಳನ್ನು ಸೇರಿಸಿ ಸೋಲು ಕಂಡಿತು. ಮಾಳೇಟಿರ ರಿಷಬ್ 64 ರನ್ಗಳನ್ನು ಸೇರಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಅಳಮೇಂಗಡ ದಿಲೀಪ್ 34 ರನ್ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಳಮೇಂಗಡ ಪರ ಸೋಮಣ್ಣ 3 ವಿಕೆಟ್ ಪಡೆದರು.</p>.<p>ನೆರವಂಡ ಮತ್ತು ಪಾರುವಂಡ ನಡುವಿನ ಪಂದ್ಯದಲ್ಲಿ 8 ವಿಕೆಟ್ಗಳಿಂದ ಪಾರುವಂಡ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 8 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿತು. ಪರುವಂಡ 5.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 78 ರನ್ಗಳನ್ನು ಗಳಿಸಿ ಗೆಲುವು ಪಡೆಯಿತು. ಪ್ರವೀಣ್ 35 ರನ್ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಪಾರುವಂಡ ಪ್ರಿನ್ಸ್ 59 ರನ್ ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-51-1182779744</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ಟೂರ್ನಿ’ ಯ ಪುರುಷರ ವಿಭಾಗದಲ್ಲಿ ಮಂಗಳವಾರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳಲ್ಲಿ ಚೆಕ್ಕೇರ, ಪಂದ್ಯಂಡ, ಮಾಳೇಟಿರ ಹಾಗೂ ಪಾರುವಂಡ ತಂಡಗಳು ಗೆಲುವು ಸಾಧಿಸಿ ಸೆಮಿಫೈನಲ್ಸ್ ತಲುಪಿದವು.</p>.<p>ಮೈದಾನ 1 ಲಾಲು ಮುದ್ದಯ್ಯ ಮೈದಾನದಲ್ಲಿ ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ಗಳಷ್ಟು ಬೃಹತ್ ಸ್ಕೋರ್ ಕಲೆಹಾಕಿತು. ಮಲ್ಲಜ್ಜಿರ 8 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ಗಳನ್ನಷ್ಟೇ ಗಳಿಸಿ ಟೂರ್ನಿಯಿಂದ ನಿರ್ಗಮಿಸಿತು. ಚೆಕ್ಕೇರ ಆಕರ್ಷ್ 47 ರನ್ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.</p>.<p>ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯoಡ ತಂಡಕ್ಕೆ 7 ವಿಕೆಟ್ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೋಟನಾಳಿರ 8 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 55 ರನ್ಗಳನ್ನು ಗಳಿಸಿತು. ಪಂದ್ಯಂಡ 4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 59 ರನ್ ಗಳಿಸಿ ಗೆಲುವು ದಾಖಲಿಸಿತು. ಮೋಟನಾಳಿರ ಶರತ್ 25 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಪಂದ್ಯಂಡ ಅಯ್ಯಪ್ಪ 18 ರನ್ ಗಳಿಸಿದರು.</p>.<p>ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ನಡುವಿನ ಪಂದ್ಯದಲ್ಲಿ ಮಾಳೇಟಿರ 40 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 8 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿತು. ಅಳಮೇಂಗಡ 8 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ಗಳನ್ನು ಸೇರಿಸಿ ಸೋಲು ಕಂಡಿತು. ಮಾಳೇಟಿರ ರಿಷಬ್ 64 ರನ್ಗಳನ್ನು ಸೇರಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಅಳಮೇಂಗಡ ದಿಲೀಪ್ 34 ರನ್ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಳಮೇಂಗಡ ಪರ ಸೋಮಣ್ಣ 3 ವಿಕೆಟ್ ಪಡೆದರು.</p>.<p>ನೆರವಂಡ ಮತ್ತು ಪಾರುವಂಡ ನಡುವಿನ ಪಂದ್ಯದಲ್ಲಿ 8 ವಿಕೆಟ್ಗಳಿಂದ ಪಾರುವಂಡ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 8 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿತು. ಪರುವಂಡ 5.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 78 ರನ್ಗಳನ್ನು ಗಳಿಸಿ ಗೆಲುವು ಪಡೆಯಿತು. ಪ್ರವೀಣ್ 35 ರನ್ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಪಾರುವಂಡ ಪ್ರಿನ್ಸ್ 59 ರನ್ ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-51-1182779744</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>