<p>ಗೋಣಿಕೊಪ್ಪಲು: ‘ಜಿಲ್ಲೆಯ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹38 ಕೋಟಿ ಅನುದಾನ ಬಿಡಗಡೆ ಮಾಡಿದೆ. ಜಿಲ್ಲೆಯಲ್ಲಿನ ಮೈದಾನಗಳನ್ನು ಅಭಿವೃದ್ಧಿಪಡಿಸಿ ಯುವ ಆಟಗಾರರಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಲು ಚಿಂತಿಸಲಾಗಿದೆ’ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶುಕ್ರವಾರ ಆರಂಭಗೊಂಡ ಅಮ್ಮಕೊಡವ ಸಮಾಜದ ಎರಡನೇ ವರ್ಷದ ಬಾನಂಡ ಕ್ರಿಕೆಟ್ ಕಪ್ ಟೂರ್ನಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಎಲ್ಲ ಜನಾಂಗದವರು ಕ್ರೀಡಾಕೂಟ ನಡೆಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಕೊಡಗು ವಿಶಿಷ್ಟ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ರಾಷ್ಟ್ರಮಟ್ಟದ ಕ್ರೀಡಾಕೂಡದಲ್ಲಿ ಪಾಲ್ಗೊಳ್ಳುವಂತಾಗಬೇಕು’ ಎಂದು ಆಶಿಸಿದರು.</p>.<p>ರಾಜ್ಯ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಮೈಸೂರಿನ ಮುಖ್ಯ ನ್ಯಾಯಾಧೀಶೆ ಅಮ್ಮತ್ತೀರ ಶಿಲ್ಪ, ಅಧ್ಯಕ್ಷ ಬಾನಂಡ ಪ್ರಥ್ಯು, ಧರ್ಮಜ ಉತ್ತಪ್ಪ,ಟಿಪ್ಪು ಬಿದ್ದಪ್ಪ, ಬಾನಂಡ ಕುಟುಂಬ ಅಧ್ಯಕ್ಷ ಬಾನಂಡ ರಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-51-185863785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ‘ಜಿಲ್ಲೆಯ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹38 ಕೋಟಿ ಅನುದಾನ ಬಿಡಗಡೆ ಮಾಡಿದೆ. ಜಿಲ್ಲೆಯಲ್ಲಿನ ಮೈದಾನಗಳನ್ನು ಅಭಿವೃದ್ಧಿಪಡಿಸಿ ಯುವ ಆಟಗಾರರಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಲು ಚಿಂತಿಸಲಾಗಿದೆ’ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶುಕ್ರವಾರ ಆರಂಭಗೊಂಡ ಅಮ್ಮಕೊಡವ ಸಮಾಜದ ಎರಡನೇ ವರ್ಷದ ಬಾನಂಡ ಕ್ರಿಕೆಟ್ ಕಪ್ ಟೂರ್ನಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಎಲ್ಲ ಜನಾಂಗದವರು ಕ್ರೀಡಾಕೂಟ ನಡೆಸುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಕೊಡಗು ವಿಶಿಷ್ಟ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ರಾಷ್ಟ್ರಮಟ್ಟದ ಕ್ರೀಡಾಕೂಡದಲ್ಲಿ ಪಾಲ್ಗೊಳ್ಳುವಂತಾಗಬೇಕು’ ಎಂದು ಆಶಿಸಿದರು.</p>.<p>ರಾಜ್ಯ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಮೈಸೂರಿನ ಮುಖ್ಯ ನ್ಯಾಯಾಧೀಶೆ ಅಮ್ಮತ್ತೀರ ಶಿಲ್ಪ, ಅಧ್ಯಕ್ಷ ಬಾನಂಡ ಪ್ರಥ್ಯು, ಧರ್ಮಜ ಉತ್ತಪ್ಪ,ಟಿಪ್ಪು ಬಿದ್ದಪ್ಪ, ಬಾನಂಡ ಕುಟುಂಬ ಅಧ್ಯಕ್ಷ ಬಾನಂಡ ರಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-51-185863785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>