<p>ಗೋಣಿಕೊಪ್ಪಲು: ಕೊಡವ ಟಗ್ ಆಫ್ ವಾರ್ ಅಕಾಡೆಮಿ ಹಾಗೂ ಪ್ರಸಕ್ತ ಸಾಲಿನ ಕೊಡವ ಒಕ್ಕಡೊಕ್ಕಡ ಕೇರ್ ಬಲಿ ನಮ್ಮೆಯ ಆಯೋಜಕರಾದ ಚೀಯಕಪೂವಂಡ ಕುಟುಂಬದ ನಮ್ಮೆ ಸಮಿತಿ ಸದಸ್ಯರ ಜಂಟಿ ಸಭೆ ಭಾನುವಾರ ಪಟ್ಟಣದಲ್ಲಿ ನಡೆಯಿತು.</p>.<p>ಕೊಡವ ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನೊಲತಂಡ ಕಿರಣ್ ಪೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<p>5ನೇ ವರ್ಷದ ಚೀಯಕಪೂವಂಡ ಕಪ್ ಕೇರ್ ಬಲಿ ನಮ್ಮೆ ಏಪ್ರಿಲ್ 23ರಿಂದ 26ರವರೆಗೆ ನಾಪೋಕ್ಲು ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಆಯೋಜಕರು ಮನವಿ ಮಾಡಿಕೊಂಡರು.</p>.<p>ಸಭೆಯಲ್ಲಿ ಮೈದಾನದ ಸಿದ್ಧತೆ, ಗ್ಯಾಲರಿ ವ್ಯವಸ್ಥೆ, ವೇದಿಕೆಯ ನಿರ್ಮಾಣ, ತಾಂತ್ರಿಕ ವ್ಯವಸ್ಥೆ, ತಾಂತ್ರಿಕ ಹಾಗೂ ಇತರ ಸಮಿತಿಗಳ ಜವಾಬ್ದಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.</p>.<p>ಪುರುಷರ, ಮಹಿಳೆಯರ ಹಾಗೂ 16 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನಡೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಿಭಾಗವಾರು ಪ್ರಥಮ, ದ್ವಿತೀಯ, ತ್ರತೀಯ, ಚತುರ್ಥ ಬಹುಮಾನವಲ್ಲದೆ ಈ ಬಾರಿ 5ನೆ ಹಾಗೂ 6ನೆ ಬಹುಮಾನ ನೀಡಲಾಗುವುದು ಎಂದು ಸಂಚಾಲಕ ಬೋಪಣ್ಣ ಹೇಳಿದರು.</p>.<p>300ಕ್ಕೂ ಹೆಚ್ಚು ಕೊಡವ ಕುಟುಂಬ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-51-1343417721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಕೊಡವ ಟಗ್ ಆಫ್ ವಾರ್ ಅಕಾಡೆಮಿ ಹಾಗೂ ಪ್ರಸಕ್ತ ಸಾಲಿನ ಕೊಡವ ಒಕ್ಕಡೊಕ್ಕಡ ಕೇರ್ ಬಲಿ ನಮ್ಮೆಯ ಆಯೋಜಕರಾದ ಚೀಯಕಪೂವಂಡ ಕುಟುಂಬದ ನಮ್ಮೆ ಸಮಿತಿ ಸದಸ್ಯರ ಜಂಟಿ ಸಭೆ ಭಾನುವಾರ ಪಟ್ಟಣದಲ್ಲಿ ನಡೆಯಿತು.</p>.<p>ಕೊಡವ ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನೊಲತಂಡ ಕಿರಣ್ ಪೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<p>5ನೇ ವರ್ಷದ ಚೀಯಕಪೂವಂಡ ಕಪ್ ಕೇರ್ ಬಲಿ ನಮ್ಮೆ ಏಪ್ರಿಲ್ 23ರಿಂದ 26ರವರೆಗೆ ನಾಪೋಕ್ಲು ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಆಯೋಜಕರು ಮನವಿ ಮಾಡಿಕೊಂಡರು.</p>.<p>ಸಭೆಯಲ್ಲಿ ಮೈದಾನದ ಸಿದ್ಧತೆ, ಗ್ಯಾಲರಿ ವ್ಯವಸ್ಥೆ, ವೇದಿಕೆಯ ನಿರ್ಮಾಣ, ತಾಂತ್ರಿಕ ವ್ಯವಸ್ಥೆ, ತಾಂತ್ರಿಕ ಹಾಗೂ ಇತರ ಸಮಿತಿಗಳ ಜವಾಬ್ದಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.</p>.<p>ಪುರುಷರ, ಮಹಿಳೆಯರ ಹಾಗೂ 16 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನಡೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಿಭಾಗವಾರು ಪ್ರಥಮ, ದ್ವಿತೀಯ, ತ್ರತೀಯ, ಚತುರ್ಥ ಬಹುಮಾನವಲ್ಲದೆ ಈ ಬಾರಿ 5ನೆ ಹಾಗೂ 6ನೆ ಬಹುಮಾನ ನೀಡಲಾಗುವುದು ಎಂದು ಸಂಚಾಲಕ ಬೋಪಣ್ಣ ಹೇಳಿದರು.</p>.<p>300ಕ್ಕೂ ಹೆಚ್ಚು ಕೊಡವ ಕುಟುಂಬ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-51-1343417721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>