<p>ಮಹಾಲಿಂಗಪುರ: ‘ಗ್ರಾಮೀಣ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಬಡ ಕ್ರೀಡಾ ಸಾಧಕರನ್ನು ಹುರಿದುಂಬಿಸಬೇಕಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.</p>.<p>ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಾಮಿಯಾ ಕ್ರಿಕೆಟ್ ಕ್ಲಬ್ ವತಿಯಿಂದ ಐದು ದಿನ ಹಮ್ಮಿಕೊಂಡಿರುವ ಬಾಗಲಕೋಟೆ ಜಿಲ್ಲಾ ಪ್ರಿಮಿಯರ್ ಲೀಗ್ನ ಕ್ರಿಕೆಟ್ ಪಂದ್ಯಾವಳಿಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>ಶಾಸಕ ಸಿದ್ದು ಸವದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಆದರೆ ಇಂದು ಮೊಬೈಲ್, ಟಿವಿ ಚಟಕ್ಕೆ ಬಿದ್ದಿರುವ ಯುವ ಪೀಳಿಗೆಯನ್ನು ಮೈದಾನಕ್ಕೆ ಕರೆತರುವುದು ಅನಿವಾರ್ಯವಾಗಿದೆ. ಕ್ರೀಡೆ ಕೇವಲ ಪದಕ ಗೆಲ್ಲುವುದಕ್ಕಲ್ಲ, ಅದು ಶಿಸ್ತು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಗುಣ ಕಲಿಸುತ್ತದೆ’ ಎಂದರು.</p>.<p>ಶೇಖರ ಅಂಗಡಿ, ಬಸವರಾಜ ರಾಯರ, ಮಹಾಲಿಂಗಪ್ಪ ಸನದಿ, ಅಪ್ಪಾಸಾಬ ನಾಲಬಂದ, ಮಹಾಲಿಂಗ ಪಟ್ಟಣಶೆಟ್ಟಿ, ಸೈಯದ್ ಶೇಖ, ಇಜಾಜ್ ಯಾದವಾಡ, ಲಿಯಾಸ್ ಯಾದವಾಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-1461819142</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ‘ಗ್ರಾಮೀಣ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಬಡ ಕ್ರೀಡಾ ಸಾಧಕರನ್ನು ಹುರಿದುಂಬಿಸಬೇಕಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.</p>.<p>ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಾಮಿಯಾ ಕ್ರಿಕೆಟ್ ಕ್ಲಬ್ ವತಿಯಿಂದ ಐದು ದಿನ ಹಮ್ಮಿಕೊಂಡಿರುವ ಬಾಗಲಕೋಟೆ ಜಿಲ್ಲಾ ಪ್ರಿಮಿಯರ್ ಲೀಗ್ನ ಕ್ರಿಕೆಟ್ ಪಂದ್ಯಾವಳಿಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>ಶಾಸಕ ಸಿದ್ದು ಸವದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಆದರೆ ಇಂದು ಮೊಬೈಲ್, ಟಿವಿ ಚಟಕ್ಕೆ ಬಿದ್ದಿರುವ ಯುವ ಪೀಳಿಗೆಯನ್ನು ಮೈದಾನಕ್ಕೆ ಕರೆತರುವುದು ಅನಿವಾರ್ಯವಾಗಿದೆ. ಕ್ರೀಡೆ ಕೇವಲ ಪದಕ ಗೆಲ್ಲುವುದಕ್ಕಲ್ಲ, ಅದು ಶಿಸ್ತು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಗುಣ ಕಲಿಸುತ್ತದೆ’ ಎಂದರು.</p>.<p>ಶೇಖರ ಅಂಗಡಿ, ಬಸವರಾಜ ರಾಯರ, ಮಹಾಲಿಂಗಪ್ಪ ಸನದಿ, ಅಪ್ಪಾಸಾಬ ನಾಲಬಂದ, ಮಹಾಲಿಂಗ ಪಟ್ಟಣಶೆಟ್ಟಿ, ಸೈಯದ್ ಶೇಖ, ಇಜಾಜ್ ಯಾದವಾಡ, ಲಿಯಾಸ್ ಯಾದವಾಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-1461819142</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>