<p><strong>ನವದೆಹಲಿ :</strong> ಉದ್ದೀಪನ ಮದ್ದುಸೇವನೆ ನಿಗ್ರಹ ಕ್ರಮಗಳನ್ನು ಜಾಗತಿಕ ಮಟ್ಟಕ್ಕೆ ಅನುಗುಣವಾಗಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಶ್ವ ಉದ್ದೀಪನ ಮದ್ದುಸೇವನೆ ನಿಗ್ರಹ ಘಟಕದ (ವಾಡಾ) ಅಧ್ಯಕ್ಷ ವಿಟೋಲ್ಡ್ ಬಾಂಕಾ ಅವರು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಜೊತೆ ಬುಧವಾರ ಸಮಾಲೋಚನೆ ನಡೆಸಿದರು.</p>.<p>ಬಾಂಕಾ ಅವರು ಮೂರು ದಿನಗಳಿಂದ ಭಾರತದಲ್ಲಿ ಬಿಡುವಿಲ್ಲದ ಪ್ರವಾಸದಲ್ಲಿದ್ದಾರೆ. ಸೋಮವಾರ ಅವರು, ಭಾರತದಲ್ಲಿ ಕ್ರೀಡೆಯ ವಿಶ್ವಾಸಾರ್ಹತೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ತುರ್ತು ಮತ್ತು ಗಂಭೀರ ಕ್ರಮಗಳ ಬಗ್ಗೆ ರಾಷ್ಟ್ರೀಯ ಉದ್ದೀಪನ ಮದ್ದುಸೇವನೆ ನಿಗ್ರಹ ಘಟಕದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು.</p>.<p>‘ವಾಡಾ’ ಅಧ್ಯಕ್ಷ ವಿಟೋಲ್ಡ್ ಬಾಂಕಾ ಜೊತೆ ನವದೆಹಲಿಯಲ್ಲಿ ಬುಧವಾರ ಮಾತುಕತೆ ನಡೆಯಿತು. ಕ್ರೀಡೆಯನ್ನು ಸ್ವಚ್ಛಗೊಳಿಸುವ ಪ್ರಬಲ ಸಂಸ್ಕೃತಿ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಬದ್ಧವಾಗಿದೆ’ ಎಂದು ಮಾಂಡವೀಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಉದ್ದೀಪನ ಮದ್ದು ಸೇವನೆ ತಡೆಯುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಗತಿಯ ಮೇಲೆ ಮಾತುಕತೆ ಕೇಂದ್ರೀಕೃತವಾಗಿತ್ತು ಎಂದು ಬಾಂಕಾ ಹೇಳಿದ್ದಾರೆ.</p>.<p>ಇದಕ್ಕೆ ಮೊದಲು ಅವರು ಸಿಬಿಐ ವಿಶೇಷ ನಿರ್ದೇಶಕ ಮನೋಜ್ ಶಶಿಧರ್ ಅವರನ್ನು ಭೇಟಿಯಾಗಿದ್ದರು. ನಿಷೇಧಿತ ಉದ್ದೀಪನ ಮದ್ದುಗಳ ಮಾರಾಟದಲ್ಲಿ ತೊಡಗಿರುವ ಕ್ರಿಮಿನಲ್ ಜಾಲ ಮಟ್ಟಹಾಕುವ ನಿಟ್ಟಿನಲ್ಲಿ ಸಹಕರಿಸುವ ಬಗ್ಗೆ ಚರ್ಚೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ಉದ್ದೀಪನ ಮದ್ದುಸೇವನೆ ನಿಗ್ರಹ ಕ್ರಮಗಳನ್ನು ಜಾಗತಿಕ ಮಟ್ಟಕ್ಕೆ ಅನುಗುಣವಾಗಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಶ್ವ ಉದ್ದೀಪನ ಮದ್ದುಸೇವನೆ ನಿಗ್ರಹ ಘಟಕದ (ವಾಡಾ) ಅಧ್ಯಕ್ಷ ವಿಟೋಲ್ಡ್ ಬಾಂಕಾ ಅವರು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಜೊತೆ ಬುಧವಾರ ಸಮಾಲೋಚನೆ ನಡೆಸಿದರು.</p>.<p>ಬಾಂಕಾ ಅವರು ಮೂರು ದಿನಗಳಿಂದ ಭಾರತದಲ್ಲಿ ಬಿಡುವಿಲ್ಲದ ಪ್ರವಾಸದಲ್ಲಿದ್ದಾರೆ. ಸೋಮವಾರ ಅವರು, ಭಾರತದಲ್ಲಿ ಕ್ರೀಡೆಯ ವಿಶ್ವಾಸಾರ್ಹತೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ತುರ್ತು ಮತ್ತು ಗಂಭೀರ ಕ್ರಮಗಳ ಬಗ್ಗೆ ರಾಷ್ಟ್ರೀಯ ಉದ್ದೀಪನ ಮದ್ದುಸೇವನೆ ನಿಗ್ರಹ ಘಟಕದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು.</p>.<p>‘ವಾಡಾ’ ಅಧ್ಯಕ್ಷ ವಿಟೋಲ್ಡ್ ಬಾಂಕಾ ಜೊತೆ ನವದೆಹಲಿಯಲ್ಲಿ ಬುಧವಾರ ಮಾತುಕತೆ ನಡೆಯಿತು. ಕ್ರೀಡೆಯನ್ನು ಸ್ವಚ್ಛಗೊಳಿಸುವ ಪ್ರಬಲ ಸಂಸ್ಕೃತಿ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಬದ್ಧವಾಗಿದೆ’ ಎಂದು ಮಾಂಡವೀಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಉದ್ದೀಪನ ಮದ್ದು ಸೇವನೆ ತಡೆಯುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಗತಿಯ ಮೇಲೆ ಮಾತುಕತೆ ಕೇಂದ್ರೀಕೃತವಾಗಿತ್ತು ಎಂದು ಬಾಂಕಾ ಹೇಳಿದ್ದಾರೆ.</p>.<p>ಇದಕ್ಕೆ ಮೊದಲು ಅವರು ಸಿಬಿಐ ವಿಶೇಷ ನಿರ್ದೇಶಕ ಮನೋಜ್ ಶಶಿಧರ್ ಅವರನ್ನು ಭೇಟಿಯಾಗಿದ್ದರು. ನಿಷೇಧಿತ ಉದ್ದೀಪನ ಮದ್ದುಗಳ ಮಾರಾಟದಲ್ಲಿ ತೊಡಗಿರುವ ಕ್ರಿಮಿನಲ್ ಜಾಲ ಮಟ್ಟಹಾಕುವ ನಿಟ್ಟಿನಲ್ಲಿ ಸಹಕರಿಸುವ ಬಗ್ಗೆ ಚರ್ಚೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>