<p>ಮುದಗಲ್: ‘ಸದೃಢ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ’ ಎಂದು ಪಿಎಸ್ಐ ವೆಂಕಟೇಶ ಮಾಡಗಿರಿ ಹೇಳಿದರು.</p>.<p>ಪಟ್ಟಣದ ಸಿದ್ರಾಮಪ್ಪ ಸಾಹುಕಾರ ಸಂತೆಕೆಲ್ಲೂರು ಒಳಾಂಗಣ ಕ್ರೀಡಾಂಗಣದಲ್ಲಿ ಮುದಗಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಬ್ಯಾಡ್ಮಿಂಟನ್ ಟೂರ್ನಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ದೇಹ ದಂಡನೆಯಿಂದ ದೈನಂದಿನ ಬದುಕಿನ ಒತ್ತಡ ನಿವಾರಣೆಯಾಗಿ, ಜೀವನ ಉಲ್ಲಾಸದಿಂದ ಕೂಡಿರುತ್ತದೆ. ಯುವಜನರು ಹೆಚ್ಚು ಕ್ರೀಡಾಕೂಟದಲ್ಲಿ ಭಾಗವಹಿಸಲು ಉತ್ಸುಕರಾಗಬೇಕು. ಕ್ರೀಡೆಗಳು ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಅಸೋಸಿಯೇಷನ್ನವರು ನಿರಂತರವಾಗಿ ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡಬೇಕು’ ಎಂದರು.</p>.<p>ಸಂಸ್ಥೆಯ ಗೌರವಾಧ್ಯಕ್ಷ ಸಿದ್ರಾಮಪ್ಪ ಸಾಹುಕಾರ ಟೂರ್ನಿ ಉದ್ಘಾಟಿಸಿದರು. 32 ತಂಡಗಳು ಭಾಗವಹಿಸಿವೆ.</p>.<p>ಶಿಕ್ಷಕ ಕೃಷ್ಣ ಮುಳ್ಳೂರು, ಅಸೋಸಿ ಯೇಷನ್ ಅಧ್ಯಕ್ಷ ಮಲ್ಲಿಕಾರ್ಜುನ ಗೌಡೂರು, ಕಾರ್ಯದರ್ಶಿ ರಾಘವೇಂದ್ರ ಗುಮಾಸ್ತೆ, ಮುಖಂಡರಾದ ಸುರೇಶ ಸೇಠ್, ನಿವೃತ್ತ ಯೋಧ ವೀರನಗೌಡ ಬಯ್ಯಾಪುರ, ಶರಣಪ್ಪ ಗುಡಿಹಾಳ, ನಾಗನಗೌಡ ಬಯ್ಯಾಪುರ, ಸುಕುಮಾರ ಎನ್.ಅಕ್ಕಿ, ಉದಯಕುಮಾರ ಕಮ್ಮಾರ, ಮಹಿಬೂಬ ಬಾರಿಗಿಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-32-229482162</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ‘ಸದೃಢ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ’ ಎಂದು ಪಿಎಸ್ಐ ವೆಂಕಟೇಶ ಮಾಡಗಿರಿ ಹೇಳಿದರು.</p>.<p>ಪಟ್ಟಣದ ಸಿದ್ರಾಮಪ್ಪ ಸಾಹುಕಾರ ಸಂತೆಕೆಲ್ಲೂರು ಒಳಾಂಗಣ ಕ್ರೀಡಾಂಗಣದಲ್ಲಿ ಮುದಗಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಬ್ಯಾಡ್ಮಿಂಟನ್ ಟೂರ್ನಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ದೇಹ ದಂಡನೆಯಿಂದ ದೈನಂದಿನ ಬದುಕಿನ ಒತ್ತಡ ನಿವಾರಣೆಯಾಗಿ, ಜೀವನ ಉಲ್ಲಾಸದಿಂದ ಕೂಡಿರುತ್ತದೆ. ಯುವಜನರು ಹೆಚ್ಚು ಕ್ರೀಡಾಕೂಟದಲ್ಲಿ ಭಾಗವಹಿಸಲು ಉತ್ಸುಕರಾಗಬೇಕು. ಕ್ರೀಡೆಗಳು ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಅಸೋಸಿಯೇಷನ್ನವರು ನಿರಂತರವಾಗಿ ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡಬೇಕು’ ಎಂದರು.</p>.<p>ಸಂಸ್ಥೆಯ ಗೌರವಾಧ್ಯಕ್ಷ ಸಿದ್ರಾಮಪ್ಪ ಸಾಹುಕಾರ ಟೂರ್ನಿ ಉದ್ಘಾಟಿಸಿದರು. 32 ತಂಡಗಳು ಭಾಗವಹಿಸಿವೆ.</p>.<p>ಶಿಕ್ಷಕ ಕೃಷ್ಣ ಮುಳ್ಳೂರು, ಅಸೋಸಿ ಯೇಷನ್ ಅಧ್ಯಕ್ಷ ಮಲ್ಲಿಕಾರ್ಜುನ ಗೌಡೂರು, ಕಾರ್ಯದರ್ಶಿ ರಾಘವೇಂದ್ರ ಗುಮಾಸ್ತೆ, ಮುಖಂಡರಾದ ಸುರೇಶ ಸೇಠ್, ನಿವೃತ್ತ ಯೋಧ ವೀರನಗೌಡ ಬಯ್ಯಾಪುರ, ಶರಣಪ್ಪ ಗುಡಿಹಾಳ, ನಾಗನಗೌಡ ಬಯ್ಯಾಪುರ, ಸುಕುಮಾರ ಎನ್.ಅಕ್ಕಿ, ಉದಯಕುಮಾರ ಕಮ್ಮಾರ, ಮಹಿಬೂಬ ಬಾರಿಗಿಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-32-229482162</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>