<p>ಸಾಗರ: ‘ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢಗೊಳ್ಳುತ್ತದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಗೋಪಾಲಗೌಡ ಕ್ರೀಡಾಂಗಣದ ಪಕ್ಕದಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ₹ 8 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ವಿದ್ಯುದ್ದೀಪ ವ್ಯವಸ್ಥೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಯುವಕರು, ಮಧ್ಯ ವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಬದಲಾಗಿರುವ ಜೀವನ ಶೈಲಿ, ಆಹಾರ ಪದ್ಧತಿ, ಹೆಚ್ಚುತ್ತಿರುವ ಮಾನಸಿಕ ಒತ್ತಡ ಮೊದಲಾದ ಕಾರಣಗಳಿಂದ ಕಾಯಿಲೆಗಳು ಹೆಚ್ಚುತ್ತಿವೆ. ಇವುಗಳಿಂದ ದೂರವಿರಲು ಕ್ರೀಡೆ ಉತ್ತಮ ಸಾಧನ’ ಎಂದು ತಿಳಿಸಿದರು.</p>.<p>‘ಇಲ್ಲಿನ ಒಳಾಂಗಣ ಕ್ರೀಡಾಂಗಣ ನಗರದ ಹೃದಯ ಭಾಗದಲ್ಲಿದೆ. ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಒಳಾಂಗಣ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ವಿಶಾಲವಾದ ಸ್ಥಳಾವಕಾಶವಿದೆ. ಯುವಜನರು ಸೇರಿ ವಿವಿಧ ವಯೋಮಾನದವರು ಇದರ ಸದುಪಯೋಗ ಪಡೆಯಬೇಕು’ ಎಂದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಕ್ರೀಡಾಂಗಣ ಸಮಿತಿ ಸದಸ್ಯರಾದ ಐ.ಎನ್.ಸುರೇಶ್ ಬಾಬು, ಕಿರಣ್ ದೊಡ್ಮನೆ, ಮಹಾಬಲ ಕೌತಿ, ಪ್ರಮುಖರಾದ ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಕೋರಿ ನಿರಂಜನ, ವಿಭವ ಕೆ.ಆರ್. ಅನ್ವರ್ ಭಾಷಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-42-2001049519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢಗೊಳ್ಳುತ್ತದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಗೋಪಾಲಗೌಡ ಕ್ರೀಡಾಂಗಣದ ಪಕ್ಕದಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ₹ 8 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ವಿದ್ಯುದ್ದೀಪ ವ್ಯವಸ್ಥೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಯುವಕರು, ಮಧ್ಯ ವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಬದಲಾಗಿರುವ ಜೀವನ ಶೈಲಿ, ಆಹಾರ ಪದ್ಧತಿ, ಹೆಚ್ಚುತ್ತಿರುವ ಮಾನಸಿಕ ಒತ್ತಡ ಮೊದಲಾದ ಕಾರಣಗಳಿಂದ ಕಾಯಿಲೆಗಳು ಹೆಚ್ಚುತ್ತಿವೆ. ಇವುಗಳಿಂದ ದೂರವಿರಲು ಕ್ರೀಡೆ ಉತ್ತಮ ಸಾಧನ’ ಎಂದು ತಿಳಿಸಿದರು.</p>.<p>‘ಇಲ್ಲಿನ ಒಳಾಂಗಣ ಕ್ರೀಡಾಂಗಣ ನಗರದ ಹೃದಯ ಭಾಗದಲ್ಲಿದೆ. ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಒಳಾಂಗಣ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ವಿಶಾಲವಾದ ಸ್ಥಳಾವಕಾಶವಿದೆ. ಯುವಜನರು ಸೇರಿ ವಿವಿಧ ವಯೋಮಾನದವರು ಇದರ ಸದುಪಯೋಗ ಪಡೆಯಬೇಕು’ ಎಂದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಕ್ರೀಡಾಂಗಣ ಸಮಿತಿ ಸದಸ್ಯರಾದ ಐ.ಎನ್.ಸುರೇಶ್ ಬಾಬು, ಕಿರಣ್ ದೊಡ್ಮನೆ, ಮಹಾಬಲ ಕೌತಿ, ಪ್ರಮುಖರಾದ ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಕೋರಿ ನಿರಂಜನ, ವಿಭವ ಕೆ.ಆರ್. ಅನ್ವರ್ ಭಾಷಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-42-2001049519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>