<p>ಶಿಕಾರಿಪುರ: ‘ಕ್ರೀಡೆಗೆ ವಯಸ್ಸು, ಜಾತಿ ಭೇದ ಎಂಬುದಿಲ್ಲ. ಎಲ್ಲರೂ ಸಂಭ್ರಮಿಸುವ ಚಟುವಟಿಕೆ ಇದಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕ್ರೀಡಾಕೂಟ ನಡೆಯಬೇಕಿದೆ’ ಎಂದು ಕಾಂಗ್ರೆಸ್ ಮುಖಂಡ ಎನ್.ವಿ.ಈರೇಶ್ ಹೇಳಿದರು.</p>.<p>ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಸೋಮವಾರ ವಿನಾಯಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಎರಡನೇ ವರ್ಷದ ಜಿಲ್ಲಾ ಮಟ್ಟದ ಕ್ರಿಕೇಟ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.</p>.<p>‘ಕ್ರೀಡೆಯಲ್ಲಿ ಪ್ರತಿಭೆಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಿದಾಗ ಉತ್ತಮ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ. ತಾಲ್ಲೂಕಿನಲ್ಲಿ ಕಬಡ್ಡಿ, ಕೊಕ್ಕೊ, ವಾಲಿಬಾಲ್ ಸೇರಿ ಹಲವು ಪಂದ್ಯಾವಳಿ ನಡೆಯುತ್ತಿದ್ದು, ಅವು ಇನ್ನಷ್ಟು ಹೆಚ್ಚಾಗಲಿ’ ಎಂದರು.</p>.<p>ಶಿವಮೊಗ್ಗ ತಂಡ ಪ್ರಥಮ ಬಹುಮಾನದೊಂದಿಗೆ ₹ 20,000 ತನ್ನದಾಗಿಸಿಕೊಂಡಿತು. ನಿಂಬೆಗೊಂದಿ ಗ್ರಾಮದ ತಂಡ ದ್ವಿತೀಯ ಬಹುಮಾನ (₹ 15,000), ಬೇಗೂರು ವಿನಾಯಕ ಕ್ರಿಕೆಟ್ ಕ್ಲಬ್ ತೃತೀಯ ಬಹುಮಾನ (₹ 10,000) ಪಡೆಯಿತು. ಗ್ರಾಮಸ್ಥರು, ಸಹಕಾರ ನೀಡಿದ ದಾನಿಗಳು, ಯುವಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-42-1510390577</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ‘ಕ್ರೀಡೆಗೆ ವಯಸ್ಸು, ಜಾತಿ ಭೇದ ಎಂಬುದಿಲ್ಲ. ಎಲ್ಲರೂ ಸಂಭ್ರಮಿಸುವ ಚಟುವಟಿಕೆ ಇದಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕ್ರೀಡಾಕೂಟ ನಡೆಯಬೇಕಿದೆ’ ಎಂದು ಕಾಂಗ್ರೆಸ್ ಮುಖಂಡ ಎನ್.ವಿ.ಈರೇಶ್ ಹೇಳಿದರು.</p>.<p>ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಸೋಮವಾರ ವಿನಾಯಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಎರಡನೇ ವರ್ಷದ ಜಿಲ್ಲಾ ಮಟ್ಟದ ಕ್ರಿಕೇಟ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.</p>.<p>‘ಕ್ರೀಡೆಯಲ್ಲಿ ಪ್ರತಿಭೆಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಿದಾಗ ಉತ್ತಮ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ. ತಾಲ್ಲೂಕಿನಲ್ಲಿ ಕಬಡ್ಡಿ, ಕೊಕ್ಕೊ, ವಾಲಿಬಾಲ್ ಸೇರಿ ಹಲವು ಪಂದ್ಯಾವಳಿ ನಡೆಯುತ್ತಿದ್ದು, ಅವು ಇನ್ನಷ್ಟು ಹೆಚ್ಚಾಗಲಿ’ ಎಂದರು.</p>.<p>ಶಿವಮೊಗ್ಗ ತಂಡ ಪ್ರಥಮ ಬಹುಮಾನದೊಂದಿಗೆ ₹ 20,000 ತನ್ನದಾಗಿಸಿಕೊಂಡಿತು. ನಿಂಬೆಗೊಂದಿ ಗ್ರಾಮದ ತಂಡ ದ್ವಿತೀಯ ಬಹುಮಾನ (₹ 15,000), ಬೇಗೂರು ವಿನಾಯಕ ಕ್ರಿಕೆಟ್ ಕ್ಲಬ್ ತೃತೀಯ ಬಹುಮಾನ (₹ 10,000) ಪಡೆಯಿತು. ಗ್ರಾಮಸ್ಥರು, ಸಹಕಾರ ನೀಡಿದ ದಾನಿಗಳು, ಯುವಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-42-1510390577</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>