<p>ಸೋಮವಾರಪೇಟೆ: ಅಬ್ಬೂರುಕಟ್ಟೆ ಪ್ರೀಮಿಯರ್ ಲೀಗ್ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆದು, ಹೊಸಳ್ಳಿ ತಂಡ ಗೆಲುವು ಸಾಧಿಸಿತು.</p>.<p>ಹೊಸಳ್ಳಿ ಮತ್ತು ತಣ್ಣೀರುಹಳ್ಳ ತಂಡಗಳು ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದವು.</p>.<p>ರೋಚಕ ಪಂದ್ಯದಲ್ಲಿ ಹೊಸಳ್ಳಿ ತಂಡ 6 ರನ್ಗಳಿಂದ ವಿಜೇತರಾಗಿ ನಗದು ಮತ್ತು ಟ್ರೋಫಿ ಪಡೆದರೆ, ತಣ್ಣೀರುಹಳ್ಳ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆಯಿತು.</p>.<p>ಟೂರ್ನಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಚಾಲನೆ ನೀಡಿದರು.</p>.<p>ಅವರು ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿದರೆ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.</p>.<p>ಸಂಜೆ ನಡೆದ ಬಹುಮಾನವಿತರಣಾ ಕಾರ್ಯಕ್ರಮದಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನೋದ್ ಕುಮಾರ್, ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂರ್ತಿ, ಮೋರಿಕಲ್ಲು ದೇವಾಲಯದ ಅಧ್ಯಕ್ಷ ಪ್ರಭಾಕರ್, ಅರೆಯೂರು ಸುರೇಶ್ ತಂಡಗಳಿಗೆ ಬಹುಮಾನ ವಿತರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-51-9056267</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಅಬ್ಬೂರುಕಟ್ಟೆ ಪ್ರೀಮಿಯರ್ ಲೀಗ್ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆದು, ಹೊಸಳ್ಳಿ ತಂಡ ಗೆಲುವು ಸಾಧಿಸಿತು.</p>.<p>ಹೊಸಳ್ಳಿ ಮತ್ತು ತಣ್ಣೀರುಹಳ್ಳ ತಂಡಗಳು ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದವು.</p>.<p>ರೋಚಕ ಪಂದ್ಯದಲ್ಲಿ ಹೊಸಳ್ಳಿ ತಂಡ 6 ರನ್ಗಳಿಂದ ವಿಜೇತರಾಗಿ ನಗದು ಮತ್ತು ಟ್ರೋಫಿ ಪಡೆದರೆ, ತಣ್ಣೀರುಹಳ್ಳ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆಯಿತು.</p>.<p>ಟೂರ್ನಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಚಾಲನೆ ನೀಡಿದರು.</p>.<p>ಅವರು ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿದರೆ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.</p>.<p>ಸಂಜೆ ನಡೆದ ಬಹುಮಾನವಿತರಣಾ ಕಾರ್ಯಕ್ರಮದಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನೋದ್ ಕುಮಾರ್, ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂರ್ತಿ, ಮೋರಿಕಲ್ಲು ದೇವಾಲಯದ ಅಧ್ಯಕ್ಷ ಪ್ರಭಾಕರ್, ಅರೆಯೂರು ಸುರೇಶ್ ತಂಡಗಳಿಗೆ ಬಹುಮಾನ ವಿತರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-51-9056267</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>